ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸಮಿತಿ ಆದೇಶದ ಮೇರೆಗೆ ಮಾರ್ಚ ೭ ರಂದು ಅಂಗನವಾಡಿ ನೌಕರರ ಮುಷ್ಕರ ಹಮ್ಮಿಕೊಂಡಿದ್ದರಿಂದ ದಿನಾಂಕ ೦೬-೦೩-೨೦೨೫ ರಂದು ಸಾಯಂಕಾಲ ೫ ಘಂಟೆಗೆ ವಿಜಯಪುರದಿಂದ ಹೊರಡಲಿರುವ ಗೋಲಗುಂಬಜ್ ಎಕ್ಸ್ಪ್ರೆಸ್ ಟ್ರೇನ್ ಮೂಲಕ ಎಲ್ಲಾ ಅಂಗನವಾಡಿ ನೌಕರರು ಮಾರ್ಚ್ ೭ ರಂದು ಕೆಲಸ ಸ್ಥಗಿತಗೊಳಿಸಿ ಮುಷ್ಕರ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷೆ ಸುನಂದಾ ನಾಯಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಅಂಗನವಾಡಿ ನೌಕರರ ವೇತನ ಹೆಚ್ಚಳ, ಗ್ರಾಚ್ಯುಟಿ, ಅಂಗನವಾಡಿ ಕೇಂದ್ರಗಳನ್ನು “ಅಂಗನವಾಡಿ ಮಾಂಟಿಸ್ಸರಿ” ಎಂದು ಘೋಷಿಸಿ ಮೇಲ್ದರ್ಜೆಗೇರಿಸಬೇಕು. IಅಆS ಪ್ರತ್ಯೇಕ ನಿರ್ದೇಶಾನಾಲಯ ಮಾಡಬೇಕು. ಗುಜರಾತ್ ಹೈಕೋರ್ಟ್ ತೀರ್ಪು ಜಾರಿ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸಲು ಮತ್ತಿತರ ಬೇಡಿಕೆಗಳಿಗಾಗಿ ಒತ್ತಾಯಿಸಿ ಡಿಸೆಂಬರ್ ೧೭-೧೮ ರಂದು ಜಿಲ್ಲಾ ಮಟ್ಟದ ಮತ್ತು ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೂ ಕೇಂದ್ರ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಬೇಡಿಕೆಗಳನ್ನು ಈಡೇರಿಸದಿರುವುದನ್ನು ವಿರೋಧಿಸಿ ಮಾರ್ಚ ೭ ರಂದು ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಮ್ ಪಾರ್ಕ್ನಲ್ಲಿ ಮುಷ್ಕರ ನಡೆಸಲಾಗುತ್ತಿದೆ ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ, ಜಿಲ್ಲಾ ಖಜಾಂಚಿ ಪ್ರತಿಭಾ ಕುರಡೆ, ಗೌರವಾಧ್ಯಕ್ಷೆ ಭಾರತಿ ವಾಲಿ, ಸಿಂದಗಿ ತಾಲೂಕು ಅಧ್ಯಕ್ಷೆ ಸರಸ್ವತಿ ಮಠ, ತಾಲೂಕಾ ಕಾರ್ಯದರ್ಶಿಗಳಾದ ಶೋಭಾ ಕಬಾಡೆ, ಸುವರ್ಣ ಹಲಗಣಿ, ಗಿರಿಜಾ ಸಕ್ರಿ, ವಿಜಯಲಕ್ಷ್ಮಿ ಹಿಪ್ಪರಗಿ ಮುಂತಾದವರು ಇದ್ದರು.
