Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂಸನೂರ ಗೆಲ್ಲಿಸಲು ಮತದಾರರು ಉತ್ಸುಕ :ಡಾ.ಗೌತಮ್ ಚೌಧರಿ
(ರಾಜ್ಯ ) ಜಿಲ್ಲೆ

ಭೂಸನೂರ ಗೆಲ್ಲಿಸಲು ಮತದಾರರು ಉತ್ಸುಕ :ಡಾ.ಗೌತಮ್ ಚೌಧರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಡಬಲ್ ಎಂಜಿನ್ ಸರಕಾರದ ಸಾಧನೆಗಳನ್ನು ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ ಶಾಸಕ ರಮೇಶ ಭೂಸನೂರ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ಬಿಜೆಪಿಯನ್ನು ಗೆಲ್ಲಿಸಲು ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಹೇಳಿದರು.
ಭಾನುವಾರ ಮತಕ್ಷೇತ್ರದ ಬ್ಯಾಡಗಿಹಾಳ, ಕುರುಬತಳ್ಳಿ, ಮಡ್ನಳ್ಳಿ, ಅಲಹಳ್ಳಿ, ಹೊಸೂರ, ಗುಂದಗಿ ಗ್ರಾಮಗಳಲ್ಲಿ ಮತ್ತು ಆಲಮೇಲ ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಶತಸಿದ್ಧ. ವಿವಿಧ ಪಕ್ಷಗಳಿಂದ ಮುಖಂಡರ ಮತ್ತು ಕಾರ್ಯಕರ್ತರ ದಂಡೇ ಬಿಜೆಪಿಯತ್ತ ಹರಿದು ಬರುತ್ತಿರುವುದೇ ಬಿಜೆಪಿಯ ಗೆಲುವಿನ ಮುನ್ಸೂಚನೆಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸ್ವಚ್ಛ, ದಕ್ಷ ಆಡಳಿತಕ್ಕೆ ಜನತೆ ಫಿದಾ ಆಗಿದ್ದು ತಮಗೆ ಬಿಜೆಪಿಯೇ ಭರವಸೆ ಎಂದು ಖಾತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಪ್ರಣಾಳಿಕೆಗೆ ಮತದಾರರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು ಇದು ಮತಗಳಾಗಿ ಪರಿವರ್ತನೆಯಾಗಿ ಭೂಸನೂರ ಅವರು ಮತ್ತೊಮ್ಮೆ ವಿಜಯ ಪತಾಕೆ ಹಾರಿಸಿ ಸಚಿವರಾಗಿ ಬರಲಿದ್ದಾರೆ ಎಂದು ಭವಿಷ್ಯ ನುಡಿದರು.
ಜಿಪಂ ಮಾಜಿ ಸದಸ್ಯ ಶ್ರೀಮಂತ ನಾಗೂರ, ಶರಣಪ್ಪ ಚಂಡಕಿ, ಬಸವರಾಜ ಪೂಜಾರಿ, ವಿಠ್ಠಲ ಯರಗಲ್, ಮುತ್ತುರಾಜ ಕಲಶೆಟ್ಟಿ, ಗಾಲೀಬಸಾಬ ನಾಗಾವಿ, ದತ್ತು ಸೊನ್ನ, ನಿಂಗಪ್ಪ ಅಳ್ಳಗಿ, ಬಲಭೀಮ ರಜಪೂತ, ಸಾಹೇಬಗೌಡ ಕಟ್ಟಿ, ಶಾಂತಮಲ್ಲ ನಾವಿ, ಭೀಮರಾಯ ಅತಾಪಿ, ಶಿವಾನಂದ ನಾಗಾವಿ, ಮಲ್ಲು ದೇಸುಣಗಿ ಸೇರಿದಂತೆ ಅಧಿಕ ಸಂಖ್ಯೆಯ ಕಾರ್ಯಕರ್ತರಿದ್ದರು.

ಕಾಂಗ್ರೆಸ್ ಅಭ್ಯರ್ಥಿಯ ಹೇಳಿಕೆ ಸತ್ಯಕ್ಕೆ ದೂರ..

ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಒದಗಿಸುವಲ್ಲಿ ಶಾಸಕ ಭೂಸನೂರ ಅವರ ಪಾತ್ರವೇನೂ ಇಲ್ಲ ಎಂದು ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆ ನೀಡಿದ್ದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಹೇಳಿದರು.
ಭಾನುವಾರ ದೇವಣಗಾಂವ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಳವಾರ ಸಮಾಜದ ದಶಕಗಳ ಬೇಡಿಕೆ ನೆನೆಗುದಿಗೆ ಬಿದ್ದಿತ್ತು. ಯಾವ ಸರಕಾರವೂ ಅದರತ್ತ ಗಮನಹರಿಸಿರಲಿಲ್ಲ. ರಾಜ್ಯ ಬಿಜೆಪಿ ಸರಕಾರ ಈ ವಿಷಯ ಗಂಭೀರವಾಗಿ ಪರಿಗಣಿಸಿ ಸಿಂದಗಿ ಉಪಚುನಾವಣೆ ಸಂದರ್ಭ ತಳವಾರ ಸಮಾಜಕ್ಕೆ ಬೇಡಿಕೆ ಪರಿಹರಿಸುವ ಕುರಿತು ಸಿಎಂ ಬೊಮ್ಮಾಯಿಯವರು ವಾಗ್ದಾನ ಮಾಡಿದ್ದರು. ಅದರಂತೆ ಚುನಾವಣೆ ಬಳಿಕ ಶಾಸಕ ರಮೇಶ ಬೂಸನೂರ ಈ ವಿಷಯಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ ಬೇಡಿಕೆ ಈಡೇರಿಸಲು ಪ್ರಯತ್ನಿಸಿದ್ದಾರೆ.
ಅದಕ್ಕಾಗಿ ತಳವಾರ ಸಮಾಜ ಹೃದಯವಂತಿಕೆಯಿಂದ ಯೋಚಿಸಿ ನೋಡಿದರೆ ಸತ್ಯಾಸತ್ಯತೆ ಗೊತ್ತಾಗುತ್ತದೆ. ಕಾಂಗ್ರೆಸ್ಸಿನವರ ಸುಳ್ಳು ಮಾತುಗಳಿಗೆ, ಪೊಳ್ಳು ಭರವಸೆಗಳಿಗೆ ಬಲಿಯಾಗದೆ ಬಿಜೆಪಿಯನ್ನು ಒಮ್ಮನಸ್ಸಿನಿಂದ ಬೆಂಬಲಿಸಬೇಕೆಂದು ಕರೆ ನೀಡಿದರು.

bjp goutam choudhary sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ
    In (ರಾಜ್ಯ ) ಜಿಲ್ಲೆ
  • ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಓಲೇಮಠಕ್ಕೆ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ
    In (ರಾಜ್ಯ ) ಜಿಲ್ಲೆ
  • ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ
    In (ರಾಜ್ಯ ) ಜಿಲ್ಲೆ
  • ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.