Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಕಂಡು ಮಹಿಳಾ ಆಯೋಗ ಅಧ್ಯಕ್ಷೆ ಗರಂ!
(ರಾಜ್ಯ ) ಜಿಲ್ಲೆ

ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಕಂಡು ಮಹಿಳಾ ಆಯೋಗ ಅಧ್ಯಕ್ಷೆ ಗರಂ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರಕ್ಕೆ ಖಾಸಗಿ ಕಾರ್ಯಕ್ರಮದ ನಿಮತ್ಯ ಆಗಮಿಸಿದ್ದ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಾರ್ವಜನಿಕ ಆಸ್ಪತ್ರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ವಿವಿದೆಡೆ ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿನ ಅವಸ್ಥೆಯನ್ನು ಕಂಡು ನನಗೆ ದಂಗು ಬಡೆದಂತಾಗಿದೆ. ಆಸ್ಪತ್ರೆ ಅಕ್ಷರಶ: ಅವ್ಯವಸ್ಥೆಯ ಆಗರವಾಗಿದೆ. ಮಹಿಳೆಯರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಬಾಣಂತಿಯರಿಗೆ ಶೌಚಾಲಯದ ವ್ಯವಸ್ಥೆಯಿಲ್ಲ. ಶೌಚಕ್ಕಾಗಿ ಮಹಿಳಾ ರೋಗಿಗಳು ಆಸ್ಪತ್ರೆಯಿಂದ ಹೊರಗೆ ಸುಮಾರ ೩೦೦-೪೦೦ಮೀ ದಷ್ಟು ಹೊರ ಹೋಗಬೇಕಾಗುತ್ತದೆ. ಬಾಣಂತಿಯರು ಅಂತಹ ಅವಸ್ಥೆಯಲ್ಲಿ ಅಷ್ಟೊಂದು ದೂರ ಕ್ರಮಿಸಿ ಹೋಗುವುದು ಒಬ್ಬ ಬಾಣಂತಿಯಿಂದ ಸಾಧ್ಯವೇ? ಎಂಬುದನ್ನು ಉಹಿಸಿಕೊಳ್ಳಲೂ ಕಷ್ಟ ಸಾಧ್ಯವಾಗುವಂತಹ ಪರಿಸ್ಥಿತಿ ಇದೆ. ಆಸ್ಪತ್ರೆಗೆ ಬಂದ ಹೊರ ರೋಗಿಗಳನ್ನು ದನಗಳಂತ ಒಂದೆಡೆ ಕೂಡಿ ಹಾಕಲಾಗುತ್ತದೆ. ಕುಳಿತುಕೊಂಡ ರೋಗಿಗಳನ್ನು ಕಸಗುಡಿಸುವ ಕರ್ಮಚಾರಿಗಳು ಕಸಬರಿಗೆಯಿಂದಲೆ ತಳ್ಳಿ ದಾರಿಮಾಡಿಕೊಂಡು ಹೋಗುತ್ತಾರೆ. ಇದೆಲ್ಲವನ್ನು ಗಮನಿಸಿದರೆ ಇಲ್ಲಿ ಮಾನವೀಯತೆ ಎನ್ನುವ ಪದಕ್ಕೆ ಅರ್ಥವೇ ಇಲ್ಲದಂತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರಾದಿಯಾಗಿ ಸಿಬ್ಬಂದಿಗಳು ಯಾರಾದರೂ ಮೇಲಾಧಿಕಾರಿಗಳು ಭೇಟಿ ನೀಡಿದಾಗಷ್ಟೇ ಕರ್ತವ್ಯದ ಮೇಲೆ ಹಾಜರಿರುತ್ತಾರೆ. ಇತರೆ ಸಂದರ್ಭಗಳಲ್ಲಿ ಅರ್ಧಕ್ಕಿಂತ ಕಡಿಮೆ ಸಂಖ್ಯೆಯ ಹಾಜರಾತಿ ಇರುತ್ತದೆ. ಅದು ಅಲ್ಲದೇ ಕರ್ತವ್ಯದ ಮೇಲೆ ಹಾಜರಿರದಿದ್ದರೂ ಹಾಜರಿ ಪುಸ್ತಕದಲ್ಲಿ ಮಾತ್ರ ಸಹಿ ಇರುತ್ತದೆ. ಬಯೋಮೆಟ್ರಿಕ್ ಕೆಟ್ಟು ಹೋಗಿ ತಿಂಗಳುಗಳೇ ಕಳೆದು ಹೋದರೂ ಅದನ್ನು ರೀಪೇರಿ ಮಾಡಿಸುವ ಗೊಡವಿಗೆ ಹೋಗದೆ ಇರುವುದಕ್ಕೂ ಜಾಣತನವೇ ಕಾರಣವಾಗಿದೆ ಎನ್ನುವ ದೂರುಗಳು ಸಾರ್ವಜನಿಕರಿಂದ ಕೇಳಿ ಬಂದವು.
ಇದೆಲ್ಲವನ್ನು ಗಮನಿಸಿದ ಸಾರ್ವಜನಿಕರು ಇದೊಂದು ಕಾಟಾಚಾರದ ಭೇಟಿ. ಬಂದ ಪುಟ್ಟ ಹೋದ ಪುಟ್ಟ ಎನ್ನುವಂತೆ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದವು. ಈ ಎಲ್ಲ ಸಮಸ್ಯೆಗಳನ್ನು ಆಲಿಸಿದ ನಂತರ ಸಮಸ್ಯೆಗಳನ್ನು ಸಂಬಂಧಪಟ್ಟ ಸಚಿವಾಲಕ್ಕೆ ವರದಿ ಸಲ್ಲಿಸಿ ಶೀಘ್ರ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದು ಭರವಸೆ ನೀಡಿ ನಿರ್ಗಮಿಸಿದರು.
ಈ ವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಇದೇ ಸಂದರ್ಭದಲ್ಲಿ ಟಿಎಚ್‌ಒ ಡಾ.ಎ.ಎ.ಮಾಗಿ, ಡಾ.ಮಹಾಂತೇಶ ಹಿರೇಮಠ, ಡಾ.ರಮೇಶ ರಾಠೋಡ ಸೇರಿದಂತೆ ಇನ್ನುಳಿದ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

“ಆಸ್ಪತ್ರೆಯ ನಿರ್ವಹಣೆಗೆ ತನ್ನದೆಯಾದ ಅನುದಾನ ಇರುತ್ತದೆ. ಬಂದ ಅನುದಾನ ಏನು ಮಾಡುತ್ತೀರಿ? ಒಂದು ಸಣ್ಣ ಶೌಚಾಲಯ ನಿರ್ಮಿಸಲಾಗದಷ್ಟು ಮತ್ತು ದುರಸ್ತಿ ಮಾಡುವಷ್ಟು ಅನುದಾನ ನಿಮ್ಮಲ್ಲಿ ಇಲ್ಲವೆಂದರೆ ಆಸ್ಪತ್ರೆಯನ್ನು ಅಧಿಕಾರಿಗಳೆಲ್ಲರೂ ಸೇರಿ ಮುಚ್ಚಿಬಿಡಿ.”

– ಡಾ.ನಾಗಲಕ್ಷ್ಮಿ ಚೌಧರಿ
ಮಹಿಳಾ ಆಯೋಗದ ಅಧ್ಯಕ್ಷೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.