ಉದಯರಶ್ಮಿ ದಿನಪತ್ರಿಕೆ
ಇಂಡಿ: ಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಅಭಿವೃದ್ಧಿ ಹೊರಹೊಮ್ಮುತ್ತದೆ. ಅಲ್ಲದೇ ಇಂತಹ ವಿಜ್ಞಾನಕ್ಕೆ ಸಂಬಂಧಿಸಿದ ನೂತನ ಮಾದರಿಗಳನ್ನು ಮಕ್ಕಳು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು.
ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಜ್ಞಾನ ಮತ್ತು ವಸ್ತು ಪ್ರದರ್ಶನದಿಂದ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ, ಹಾಗೂ ಮಕ್ಕಳ ಸುಪ್ತವಾದ ಪ್ರತಿಭೆ ಅರಳುತ್ತದೆ ಅಲ್ಲದೆ ಸಹಜವಾಗಿ ವೀಕ್ಷಣೆ ಕಲೆ ಬೆಳೆಯುತ್ತದೆ ಎಂದರು.
ವೇದಮೂರ್ತಿ ದಯಾನಂದ ಹಿರೇಮಠ ಆಶಿರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ ರಾಜಣ್ಣ ಪಾತಾಳೆ, ಹಿರೇಬೇನೂರದ ಗ್ರಾಮದ ಸಂಪನ್ಮೂಲ ವ್ಯಕ್ತಿಗಳಾದ ರಮೇಶ ಬಗಲುರ, ಬಿಆರ್ಸಿ ರಂಗರಾಜ್ ಕುಲಕರ್ಣಿ, ಅಶೋಕ್ ರಾಠೋಡ, ಎಚ್ಪಿಎಸ್ ಶಾಲೆಯ ಮುಖ್ಯ ಗುರು ಆರ್.ಸಿ.ರಾಠೋಡ, ಕೆಜಿಎಸ್ ಶಾಲೆಯ ಗುರುಮಾತೆ ಬಿ.ಎಸ್.ಬಾಸಗಿ, ಯುಬಿಎಸ್ ಶಾಲೆಯ ಶಿಕ್ಷಕ ಸುರೇಶ ಚವ್ಹಾಣ, ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಸೇರಿದಂತೆ ಅನೇಕರು ಇದ್ದರು.
ವಿಜ್ಞಾನ ಮತ್ತು ವಸ್ತ್ತು ಪ್ರದರ್ಶನದಲ್ಲಿ ಸುಮಾರು ೧೦೦ ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸ್ತು ಪ್ರದರ್ಶನದಲ್ಲಿ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಐತಿಹಾಸಿಕ ಮತ್ತು ಭೌಗೋಳಿಕ ಹಾಗೂ ವೈಜ್ಞಾನಿಕ ಮಾದರಿಗಳು ಇದ್ದವು. ಈ ವಸ್ತು ಪ್ರದರ್ಶನ ನೋಡಲು ವಿದ್ಯಾರ್ಥಿಗಳು ಹಾಗೂ ಪಾಲಕರು, ಸಾರ್ವಜನಿಕರು ಆಗಮಿಸಿ ಮಾದರಿಗಳನ್ನು ವೀಕ್ಷಿಸಿದರು.
ಎಂ.ಎನ್.ತಡ್ಲಗಿ ನಿರೂಪಿಸಿದರು. ಭಜಂತ್ರಿ ಸ್ವಾಗತಿಸಿದರು. ಯು.ಬಿ.ಭಜಂತ್ರಿ ಸ್ವಾಗತಿಸಿದರು.

