Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಭಾವರಶ್ಮಿ»ಆಧುನಿಕ ಭಾರತದಲ್ಲಿ ಮಹಿಳೆ
ಭಾವರಶ್ಮಿ

ಆಧುನಿಕ ಭಾರತದಲ್ಲಿ ಮಹಿಳೆ

By Updated:No Comments6 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಡಾ ಪೂರ್ಣಿಮಾ ಕೆ. ಧಾಮಣ್ಣವರ
ಅತಿಥಿ ಉಪನ್ಯಾಸಕರು
ಕನ್ನಡ ಅಧ್ಯಯನ ವಿಭಾಗ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ಡಾ ಫ.ಗು ಹಳಕಟ್ಟಿ ಸ್ನಾತಕೋತ್ತರ
ಕೇಂದ್ರ ವಿಜಯಪುರ

ಉದಯರಶ್ಮಿ ದಿನಪತ್ರಿಕೆ

ಮನೆಮನೆಯಲಿ ದೀಪ ಮುಡಿಸಿ
ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ
ನಿನಗೆ ಬೇರೆ ಹೆಸರು ಬೇಕೆ?
ಸ್ತ್ರೀ ಸ್ತ್ರೀ ಎಂದರೆ ಅಷ್ಟೇ ಸಾಕೆ..

ಕನ್ನಡದ ಖ್ಯಾತ ಸಾಹಿತಿ ಡಾ ಶಿವರುದ್ರಪ್ಪನವರ ಈ ಸಾಲು ಸಾರ್ಥಕನೆನ್ನಿಸುತ್ತದೆ. ಹೌದು ಸ್ತ್ರೀ ಕನಸು ಹೌದು, ವಾಸ್ತವವೂ ಹೌದು. ಸ್ತ್ರೀಗೂ ಪ್ರಕೃತಿಗೂ ಅವಿನಾಬವ ಸಂಬಂಧವಿದೆ. ಈಕೆ ಭೂಮಿಯಾಗಿ ಮಿಗಿಲಾಗಿ ಮೇರು ಪರ್ವತವಾಗಿ ಬೆಳೆದು ನಿಂತಿದ್ದಾಳೆ. ಹೀಗಾಗಿ ಸ್ತ್ರೀಯನ್ನು ಸಮೃದ್ಧಿಯ ಸಂಕೇತವೆಂದು ಪರಿಭಾವಿಸಲಾಗಿದೆ.
ನಡುರಾತ್ರಿಯಲ್ಲಿ ಮಹಿಳೆಯೊಬ್ಬಳು ನಿರ್ಭಯದಿಂದ ಏಕಾಂಗಿಯಾಗಿ ನಡೆದಾಗ ಮಾತ್ರ ಈ ದೇಶಕ್ಕೆ ನಿಜವಾದ ಸ್ವಾತಂತ್ರ ಬಂದಂತೆ ಎಂಬ ಮಾತು ಮಹಾತ್ಮಾ ಗಾಂಧೀಜಿಯವರ ಹೇಳಿಕೆ ಪ್ರಸ್ತುತವೆನ್ನಿಸುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಹಿಂದಿನ ಕಾಲಕ್ಕಿಂತಲೂ ಹೆಮ್ಮರವಾಗಿ ಬೆಳೆದು ನಿಂತಿದ್ದಾಳೆ. ಕೇವಲ ಭೋಗದ ವಸ್ತುವಾಗಿದ್ದ ಈ ಸ್ತ್ರೀ ಕ್ರಮೇಣ ಅಡುಗೆ ಮನೆಗೇ ಮೀಸಲಾಗಿ ತನ್ನ ಸರ್ವಸ್ವವನ್ನೇಲ್ಲ ನಾಲ್ಕು ಗೋಡೆಗಳ ಮಧ್ಯೆಯೇ ಜೀವಿಸುತ್ತಿದ್ದವಳು ಇಂದು ಆಕಾಶದಲ್ಲಿ ಹಾರಾಡುತ್ತಿದ್ದಾಳೆ, ಗಡಿಯಲ್ಲಿ ಶತೃಗಳ ಜೊತೆ ಹೋರಾಡುತ್ತಾ ಯಾವ ಪುರುಷನಿಗೂ ಕಡಿಮೆಯಿಲ್ಲದಂತೆ ಜೀವನ ಸಾಗಿಸುತ್ತಿದ್ದಾಳೆ ಈ ಸ್ತ್ರೀ.
ಆದಿಯಿಂದಲೂ ಸೃಷ್ಟಿಯ ಮೂಲ ಸ್ತ್ರೀಯಾಗಿದ್ದಾಳೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಗೆ ಅವಳದೇ ಆದ ಗೌರವ, ಸ್ಥಾನಮಾನಗಳಿರುವುದನ್ನು ಗುರುತಿಸಬಹುದಾಗಿದೆ. ಸ್ತ್ರೀ ಅವಿನಾಶಿ, ಸಂಜೀವಿನಿ, ಹೆಣ್ಣು ವಿಶಿಷ್ಟ ಶಕ್ತಿಗಳ ಸಂಗಮ, ಮಮತೆ, ಕರುಣೆ, ವಾತ್ಸಲ್ಯ, ಅಕ್ಕರೆ ಮತ್ತು ಭೂಮಿ ತೂಕದ ತಾಳ್ಮೆಯುಳ್ಳ ಸ್ತ್ರೀ ಒಂದು ಪ್ರಬಲ ಶಕ್ತಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಮಹಿಳೆಯರ ಜಾಯಮಾನ ಪುರುಷನ ಜಾಯಮಾನಕ್ಕಿಂತ ಭಿನ್ನವಾದದ್ದು. ಮಹಿಳೆಯರು ಹಿಂದಿನಿಂದಲೂ ಅಬಲೆಯಂದೇ ಕಡೆಗಣಿಸಲಾಗುತ್ತಿತ್ತು.
ಒಂದು ಜೀವವನ್ನು ಸೃಷ್ಟಿ ಮಾಡುವ ಶಕ್ತಿ ಮಹಿಳೆಗೆ ಇದೆ ಎಂದಾದರೆ ಖಂಡಿತವಾಗಿ ಅವಳಲ್ಲಿ ಅಗಾದವಾದ ಶಕ್ತಿ ಇದೆ ಎಂದರ್ಥ. ಮಾತೃಶಕ್ತಿ ವಾತ್ಸಲ್ಯ, ಸಹನೆ, ಪ್ರೀತಿ, ತಾಳ್ಮೆ, ಆರೈಕೆ, ಸಾಂತ್ವಾನ ಗುಣಗಳು ಆಕೆ ಹುಟ್ಟಿನಿಂದಲೇ ಮೇಳೈಸಿಕೊಂಡು ಬಂದಿರುತ್ತದೆ. ನಮ್ಮ ದೇಶದಲ್ಲಿ ಕೌಟುಂಬಿಕ ಪದ್ದತಿ, ಸಂಸ್ಕೃತಿ, ಸಂಸ್ಕಾರಗಳು ಕುಟುಂಬ ನಿರ್ವಹಣೆ, ಆರೈಕೆ ಮಾಡುವ ಜವಬ್ದಾರಿ ಅನಾದಿ ಕಾಲದಿಂದಲೂ ಬಂದಿರುವುದರಿಂದ ಸಣ್ಣ ವಯಸ್ಸಿನಿಂದಲೇ ಆಕೆಗೆ ಹಲವಾರು ನೀತಿ ನಿಯಮಗಳು ಕಟ್ಟುಪಾಡುಗಳು ಹಾಕಲಾಗುತ್ತದೆ. ಮಹಿಳೆಯನ್ನು ಮುಖ್ಯವಾಗಿ ಎರಡು ವರ್ಗವಾಗಿ ನೋಡಬೇಕಾಗುತ್ತದೆ. ಒಂದು ಗ್ರಾಮೀಣ ಮಹಿಳೆ ಪಾತ್ರ ಮತ್ತು ಜವಾಬ್ದಾರಿಗಳ ನಿರ್ವಹಣೆಯಲ್ಲಿ ಇವರಿಬ್ಬರಲ್ಲಿ ವ್ಯತ್ಯಾಸಗಳಿವೆ. ಶಿಕ್ಷಣದ ಮಟ್ಟ ಮತ್ತು ಕುಟುಂಬದ ಪರಿಸರ ಅದಕ್ಕೆ ಅನುಸರಿಸಿ ಜೀವನವನ್ನು ನೋಡುವ ಮತ್ತು ಅನುಭವಿಸಲು ಇಚ್ಛಿಸುವ ಮನೋಭಾವದಲ್ಲಿ ಇಬ್ಬರಿಗೂ ವ್ಯತ್ಯಾಸವಿದೆ.
ಮಹಿಳೆ ಇಂದು ಇಷ್ಟು ಯಶಸ್ವಿಯಾಗಲು ಮುಖ್ಯ ಕಾರಣ ಶಿಕ್ಷಣ. ಇಂದಿನ ಶಿಕ್ಷಣದಲ್ಲಿ ಮಹಿಳೆ ಕುರಿತು ತನ್ನ ಸ್ವಂತ ಬಲದಿಂದ ಬದುಕುವಂತವಳಾಗಿದ್ದಾಳೆ. ಭಾರತೀಯ ರಾಜಕಾರಣದಲ್ಲಿ ಹೆಸರು ಮಾಡಿರುವ ಮಹಿಳೆ ಇಂದಿರಾಗಾಂಧಿ. ಇವರೊಬ್ಬ ಯಶಸ್ವಿ ರಾಜಕಾರಣಿಯಾಗಿ ಇವರು ಹತ್ತು ವರ್ಷಗಳಿಗೂ ಹೆಚ್ಚು ಸುದೀರ್ಘ ಕಾಲ ರಾಷ್ಟ್ರವನ್ನು ಆಳಿದ್ದಾರೆ. ಸಂಸತ್ತಿನಲ್ಲಿರುವ ಏಕೈಕ ಮಹಿಳೆ ಎಂಬ ಹೆಗ್ಗಳಿಕೆಗೆ ಇಂದಿರಾಗಾಂಧಿ ಅವರಿಗಿದೆ. ಇಂದಿರಾಗಾಂಧಿ ಪಡೆದಿದ್ದ ಶಿಕ್ಷಣ ಮತ್ತು ರಾಜಕೀಯ ಕುಟುಂಬದಲ್ಲಿ ಹುಟ್ಟಿ ಬೆಳೆದು ಅವರು ನಿಕಟವಾಗಿ ರಾಜಕೀಯದ ಒಳಹೊಗುಗಳನ್ನು ಬಲ್ಲವರಾಗಿದ್ದಿದು ಇದಕ್ಕೆ ಕಾರಣ.
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಯಾವತಿ ಯಶಸ್ವಿ ರಾಜಕಾರಣಿ. ಆದರೆ ಇದಕ್ಕೆ ಅವರ ಜಾತಿ ಅಥವಾ ಮೀಸಲಾತಿ ಮಾತ್ರ ಕಾರಣವಲ್ಲ. ಅವರು ಪಡೆದಿರುವ ಉತ್ತಮ ಶಿಕ್ಷಣವೂ ಕಾರಣ. ಐ.ಎ.ಎಸ್ ಅಧಿಕಾರಿಯಾಗಬೇಕೆಂದು ಬಯಸಿದ್ದ ಅವರು ರಾಜಕೀಯಕ್ಕೆ ಇಳಿದದ್ದೇ ಕಾಕತಾಳೀಯ. ಸುಶಿಕ್ಷಿತ ಮಹಿಳಾ ರಾಜಕರಣಿಗಳು ಮತ್ತು ಇತರ ರಾಜಕಾರಣಿಗಳು ಕಾರ್ಯವೈಖರಿಯನ್ನು ಗಮನಿಸಿದಾಗ ಮೀಸಲಾತಿ ಬರಿಯ ಸ್ಥಾನವನ್ನು ಗಿಟ್ಟಿಸಲು ಮಾತ್ರ ಸಹಾಯಕವಾಗುತ್ತದೆ ಎಂಬ ಅಂಶ ವೈಧ್ಯವಾಗುತ್ತದೆ.
ಶಿಕ್ಷಣ ಅಂಥ ಬಂದಾಗ ಮೊದಲು ನೆನಪಿಗೆ ಬರುವುದು ಮಹಾತ್ಮಾ ಜ್ಯೋತಿಬಾ ಪುಲೆ ಮತ್ತು ತಾಯಿ ಸಾವಿತ್ರಿಬಾಯಿ ಪುಲೆ. ಇವರು ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಚಳುವಳಿ ಸಂಘಟನೆಗಳನ್ನು ಸಂಘಟಿಸಿದರು. ೧೯೪೮ರಲ್ಲಿ ಪತಿ ಜ್ಯೋತಿಬಾ ಪುಲೆಯವರೊಂದಿಗೆ ಸಾವಿತ್ರಿಬಾಯಿ ಪುಲೆ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು. ಸಾವಿತ್ರಿಬಾಯಿ ಪುಲೆ ಮೊತ್ತಮೊದಲ ಮಹಿಳಾ ಶಿಕ್ಷಕಿ. ವಿದ್ಯೆಕೊಟ್ಟ ಸರಸ್ವತಿ, ಮಹಿಳಾ ಶಿಕ್ಷಣದ ಬಗ್ಗೆ ಮೊತ್ತ ಮೊದಲಿಗೆ ರೂಢಿಗತ, ಸಂಪ್ರದಾಯಿಕ ಶಕ್ತಿಗಳನ್ನು ಎದುರು ಹಾಕಿಕೊಂಡು ಸ್ತಿçÃಯರಿಗೆ ಶಾಲೆ ತೊರೆದು ಶಿಕ್ಷಣ ನೀಡಿದಷ್ಟೇ ಅಲ್ಲ, ವಿಧವಾ ವಿವಾಹವನ್ನು ಎತ್ತಿ ಹಿಡಿಯುತ್ತಾ, ಬಹುಪತ್ನಿತ್ವದ ಬಗ್ಗೆ ಖಂಡಿಸುತ್ತ, ಸಾಮಾಜಿಕ ಅನಿಷ್ಠಗಳಿಗೆ ವೈಚಾರಿಕ ಪರ್ಯಾಯಗಳನ್ನು ವಾಸ್ತವದಲ್ಲಿ ತಂದ ಧೀಮಂತ ವ್ಯಕ್ತಿತ್ವ ಜ್ಯೋತಿಬಾ ಪುಲೆ ದಂಪಂತಿ ಅವರದು. ಮಹಿಳೆಯರ ಕುರಿತು ಸ್ವಾತಂತ್ರ್ಯ ಪೂರ್ವದಲ್ಲಿ ರೂಢಿಯಲ್ಲಿದ್ದ ಮನುಸ್ಮೃತಿಯಲ್ಲಿ ಅನಿಷ್ಟ ಪದ್ದತಿ, ವೈಚಾರಿಕತೆಯ ಕುರಿತು ಮನು ಎಂಬುವನು ಹೀಗೆ ಹೇಳುತ್ತಾನೆ.
‘ಮಾತ್ರಾಸ್ಪಸ್ತಾç ಮಹಿತ್ರಾವಾದ ವಿವಕ್ತಸನೋ ಭಧೇತೆ’ ‘ಬಲವಾನಿಂದ್ರಿಯ ಗ್ರಾಮೊವಿದಾಂಸಮಡಿಕರ್ಷತಿ’

ಮನುವಿನ ದೃಷ್ಟಿಯಲ್ಲಿ ಮಹಿಳೆ ಶಿಕ್ಷಣವನ್ನು ಕಲಿಯುವುದು ಬೇಡವಾಗಿತ್ತು. ಗುಲಾಮಳಾಗಿಯೇ ಇರಬೇಕು. ಅವಳು ಅಕ್ಷರ ಲೋಕ ಪ್ರವೇಶ ಮಾಡಿದರೆ ಅವಳು ತೃತೀಯ ಜಗತ್ತಿನಲ್ಲಿ ನಡೆಯುವ ಸಮಾಚಾರ ತಿಳಿದುಕೊಂಡು ಮುಂದುವರೆದರೆ ಸ್ವಂತ ವಿಚಾರ ಮಾಡುವುದನ್ನು ಕಲಿಯುತ್ತಾಳೆ. ಈ ಮಹಿಳಾ ಸಬಲೀಕರಣ ಮನುವಿಗೆ ಬೇಡವಾಗಿತ್ತು.
ಡಾ. ಅಂಬೇಡ್ಕರವರು ಮಹಿಳಾ ಮೀಸಲಾತಿಯ ಪರವಾಗಿ ಅವಳ ಉಜ್ವಲ ಭವಿಷ್ಯವನ್ನು ಕುರಿತು ಸಂವಿಧಾನಿಕವಾಗಿ ಚಿಂತಿಸಿದರು. ಅವರ ಚುನಾಯಿತ ಸದಸ್ಯರಾಗಿ ಪಾರ್ಲಿಮೆಂಟಿನಲ್ಲಿ ಹಿಂದೂ ಕೋಡ್ ಬಿಲ್‌ನ್ನು ಮಂಡಿಸುವುದರ ಮೂಲಕ ಸ್ವತಂತ್ರ ಭಾರತದ ನಾರಿಯ ಬಂಧನವನ್ನು ಮುಕ್ತ ಮಾಡಲು ಪ್ರಯತ್ನಿಸಿದರು. ಮಹಿಳಾ ಪರ ವಿಚಾರಗಳನ್ನು ಮಂಡಿಸುವುದಕ್ಕೆ ಡಾ. ಬಿ. ಆರ್ ಅಂಬೇಡ್ಕರ ಅವರಿಗೆ ಬಲವಾದ ಆಧಾರಗಳಿದ್ದವು. ಮಹಿಳಾ ಮೀಸಲಾತಿಯ ಕುರಿತು ಆಕೆಯ ಹಕ್ಕಿನ ಕುರಿತು ಗೌತಮ ಬುದ್ದರ, ಜ್ಯೋತಿಬಾ ಪುಲೆ ಮುಂತಾದ ಮಹತ್ಮರು ಸಂದರ್ಭಾನುಸಾರವಾಗಿ ಅವರ ವಿಚಾರಗಳ ಕುರಿತು ಮಾತನಾಡಿದರು. ಅದರ ಜೊತೆಗೆ ಬೇರೆ ಬೇರೆ ದೇಶಗಳಲ್ಲಿಯ ಸಮಾಜ ಮುಖಿ ಮಹಿಳಾ ಮುಖಿ ಚಿಂತನೆಗಳನ್ನು ಅಧ್ಯಯನ ಮಾಡಿದ ಡಾ. ಬಿ. ಆರ್ ಅಂಬೇಡ್ಕರವರು ಭಾರತದ ಮಹಿಳೆಯ ಹಕ್ಕು ಬಾಧ್ಯತೆಗಳ ಕುರಿತು ಮಹತ್ವ ಪೂರ್ಣ ವಿಚಾರವನ್ನು ವ್ಯಕ್ತಪಡಿಸಿದರು. ಅವರು ಸಂವಿಧಾನದಲ್ಲಿ ಬರೆದಿಟ್ಟ ಮಹಿಳಾಪರ ಚಿಂತನೆಗಳು ಪ್ರಸ್ತುತ ಸಂದರ್ಭದಲ್ಲಿ ಕ್ರಮೇಣ ಜಾರಿಗೆ ಬರುತ್ತಿರುವುದು ಭಾರತೀಯರು ಸಂವಿಧಾನಕ್ಕೆ ಕೊಟ್ಟಿರುವ ಗೌರವೇಂದೇ ತಿಳಿದಿಕೊಳ್ಳಬೇಕಾಗುತ್ತದೆ.
ಯಶಸ್ವಿ ಮಹಿಳೆಯರು :
ಯಶಸ್ವಿ ಮಹಿಳೆಯರು ಅಂಥ ಬಂದಾಗ ಚಾರಿತ್ರಿಕ ಪುಟದಲ್ಲಿ ನೋಡಿದರೆ ಹಲವಾರು ಮಹಿಳೆಯರು ಯಶಸ್ಸು ಪಡೆದದ್ದು ತಿಳಿದು ಬರುತ್ತದೆ. ಕೆಳದಿ ಚನ್ನಮ್ಮ, ಕಿತ್ತೂರ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ ಮುಂತಾದವರನ್ನು ಉದಾಹರಿಸಬಹುದು. ಇವರು ಆಪತ್ಕಾಲದಲ್ಲಿ ಗದ್ದುಗೆ ಹಿಡಿದು ರಾಜ್ಯಾಡಳಿತ ಸೂತ್ರಗಳನ್ನು ಅರಿತು ಯಶಸ್ವಿಯಾಗಿ ಆಡಳಿತ ನಡಿಸಿ ಹೆಸರು ವಾಸಿಯಾಗಿದ್ದಾರೆ.
ಆಧುನಿಕ ಯುಗದಲ್ಲಿ ನೋಡುವುದಾದರೆ ಇಂದಿನ ಸಮಾಜದಲ್ಲಿ ರಾಜಕೀಯದಲ್ಲಿ, ಶೈಕ್ಷಣಿಕದಲ್ಲಿ, ಆರ್ಥಿಕವಾಗಿ ಹೆಚ್ಚು ಸಬಲರಾಗಿದ್ದಾರೆ. ರಾಜಕೀಯದಲ್ಲಿ ಇಂದಿರಾಗಾಂಧಿ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಎಂಬ ದಾಖಲೆಯೊಂದಿಗೆ ಹೆಣ್ಣು ಸಿಂಹದಂತೆ ಘರ್ಜಿಸಿ ಕೆಲವು ಕಾಲ ಮಹಾರಾಣಿಯಾಗಿ ಮೆರೆದರು. ಪ್ರತಿಭಾ ಪಾಟೀಲ್ ಪ್ರಥಮ ಮಹಿಳಾ ಅಧ್ಯಕ್ಷರಾದರು. ಉತ್ತರ ಭಾರತದ ಉಕ್ಕಿನ ಮಹಿಳೆ ಎಂದೇ ಹೆಸರುವಾಸಿಯಾದ ಮಾಯಾವತಿಯವರು ೩ ಬಾರಿ ಮಹಿಳಾ ಮುಖ್ಯಮಂತ್ರಿಯಾಗಿ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿದರು.
ರಾಜಸ್ತಾನದಲ್ಲಿ ವಸುಂಧರ ರಾಜೇಯವರು ದಶಕಗಳಿಗಿಂತಲೂ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದರು. ೪,೫೦೦ ಉದ್ಯೋಗಸ್ಥರಿಗೆ ಆಶ್ರಯ ದಾತೆಯಾಗಿರುವ ಬಯೋಕಾನ್‌ನ ಒಡತಿ ಕಿರಣ ಮಜುಮ್ದಾರ್ ಶಾ ಕೇವಲ ೧೦,೦೦೦ ರೂಪಾಯಿಯೊಂದಿಗೆ ಏಕಾಂಗಿಯಾಗಿ ಸ್ಥಾಪಿಸಿದ ಸಂಸ್ಥೆ ಇಂದು ಜೈವಿಕ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ೭ನೇ ಸ್ಥಾನದಲ್ಲಿದೆ. ಇದರ ವಾರ್ಷಿಕ ಆಧಾಯ ೨,೪೦೫ ಕೋಟಿ. ಬಟ್ಟೆ ತೊಳೆದು, ಅಡುಗೆ ಮಾಡಿಕೊಂಡು, ಮಕ್ಕಳ ಆರೈಕೆ ಮಾಡುವವರೂ ಕೂಡ ಆಕಾಶದಲ್ಲಿ ಹಾರಾಡಬಹುದು ಎಂದು ತೋರಿಸಿಕೊಟ್ಟವರು ಕಲ್ಪನಾ ಚಾವ್ಲಾ, ದಕ್ಷಿಣ ಐರಣ್ ಲೇಡಿ ಎಂತಲೆ ಕರಿಸಿಕೊಂಡ ದಿ-ಜಯಲಲಿತಾ ತಮಿಳುನಾಡಿನ ಅಮ್ಮನಾಗಿ ಸೂಸೂತ್ರವಾಗಿ ಆಡಳಿತ ನಡೆಸಿ ಸೈ ಎನಿಕೊಂಡರು.
ಮಾಹಿತಿ ತಂತ್ರಜ್ಞಾನದಲ್ಲಿ ಇನ್ಪೋಸಿಸ್ ಕಂಪನಿ ಬಹುದೊಡ್ಡ ಹೆಸರು. ದೇಶವಿದೇಶಗಳಲ್ಲಿ ತಮ್ಮ ಶಾಖೆಯನ್ನು ತರೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ನೀಡಿದಲ್ಲದೇ ನಮ್ಮ ಭಾರತ ದೇಶಕ್ಕೆ ಕೀರ್ತಿಯನ್ನು ತಂದರು. ಇಂಥ ಸಂಸ್ಥೆಯನ್ನು ಸ್ಥಾಪಿಸಿದ ಸೂಧಾಮೂರ್ತಿಯವರು ದೇಶದಲ್ಲಿ ಪ್ರಖ್ಯಾತಿಯನ್ನು ಪಡೆದಿದ್ದಾರೆ. ಹೆಣ್ಣು ಮಕ್ಕಳು ಮನೆಬಿಟ್ಟು ಹೊರಗೆ ಬರಲು ಹೆದರುತ್ತಿದ್ದ ಕಾಲದಲ್ಲಿ ದೇಶದ ಅತ್ಯುನ್ನತ ಹುದ್ದೆ ಐ.ಪಿ.ಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಥಮ ಮಹಿಳಾ ಪೋಲಿಸ್ ಅಧಿಕಾರಿಯಾಗಿ ಕಿರಣ್ ಬೇಡಿಯವರು ಇಂದಿನ ಮಕ್ಕಳಿಗೆ ಮಾದರಿಯಾಗಿದ್ದಾರೆ. ಇತಿಹಾಸದ ಪುಟಗಳಲ್ಲಿ ಹಲವಾರು ಮಹಿಳೆಯರು ಸಾಧನೆ ನಮಗೆ ದೊರೆಯುತ್ತದೆ.
ಅದೇ ರೀತಿ ಬಲಿಷ್ಠ ಯಶಸ್ವಿ ಮತ್ತು ಜಾಗತಿಕವಾಗಿ ಪ್ರಕಾಶಮಾನವಾಗಿ ಹೊಳೆಯುತ್ತಿರುವ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ೧೦ ಜನ ಭಾರತೀಯ ಮಹಿಳೆಯರು ಕುರಿತು ನೋಡುವುದಾದರೆ ಈ ಕೆಳಗಿನ ಮಹಿಳೆಯರ ಸಾಧನೆ ಒಮ್ಮೆ ಮೆಲಕು ಹಾಕಿದಾಗ ಸಂಪೂರ್ಣ ಮಾಹಿತಿ ನಮಗೆ ದೊರೆಯುತ್ತದೆ.
ಅವನಿ ಚೆತುರ್ವೇದಿ : ಭಾರತೀಯ ವಾಯುಪಡೆಯಲ್ಲಿ ಯುದ್ದ ಪೈಲೆಟ್ ಆದ ಮೊದಲ ಮಹಿಳೆಯರಲ್ಲಿ ಒಬ್ಬರು.
ಸ್ನೇಹಾ ದುಬೆ : ಪಾಕಿಸ್ತಾನಿ ಪ್ರಧಾನಿಯವರ ವಿಶ್ವಸಂಸ್ಥೆಯ ಭಾಷಣಕ್ಕೆ ನೀಡಿದ ತೀಕ್ಷ್ಣ ಪ್ರತಿಕ್ರಿಯೆ ವೈರಲ್ ಆದಾಗ ಸ್ನೇಹಾ ಖ್ಯಾತಿ ಆದವರು.
ವಿದೇಶಾಂಗ ಸಚಿವಾಲಯದಲ್ಲಿ ಅಂಡರ್ ಸೆಕ್ರೆಟರಿಯಾಗಿ ಮತ್ತು ಮ್ಯಾಡ್ರಿಡ್ ನಲ್ಲಿರುವ ಭಾರತೀಯ ರಾಯಬಾರ ಕಛೇರಿಯಲ್ಲಿ ೩ನೇ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಕಾರ್ಯದರ್ಶಿಯಾಗಿ ತಮ್ಮ ಪ್ರಸ್ತುತ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಕೃತಿ ಕಾರಂತ : ಪ್ರಸ್ತುತ ಬೆಂಗಳೂರಿನಲ್ಲಿ ವನ್ಯಜೀವಿ ಅಧ್ಯಯನ ಕೇಂದ್ರದಲ್ಲಿ ಮುಖ್ಯ ಸಂರಕ್ಷಣಾ
ವಿಜ್ಞಾನಿ ಮತ್ತು ನಿರ್ದೇಶಕಿಯಾಗಿದ್ದಾರೆ.
ಡ್ಯೂಕ್ ವಿಶ್ವವಿದ್ಯಾಲಯದ ಮತ್ತು ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದಲ್ಲಿ
ಸಹಾಯಕ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ತುಳಸಿಗೌಡ : ಹಲವು ದಶಕಗಳಿಂದ ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು ೨೦೨೦ರಲ್ಲಿ ಮಾತ್ರ ದೇಶ ಮತ್ತು ಜಗತ್ತು ತುಳಸಿಗೌಡ ಅವರನ್ನು ಗಮನಿಸುತ್ತಿದೆ.
ಸಾಮಾನ್ಯವಾಗಿ ‘ಅರಣ್ಯ ವಿಶ್ವಕೋಶ’ ಎಂದು ಕರೆಯಲ್ಪಡುವ ತುಳಸಿ ೩೦೦೦೦ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದಾರೆ.
ಟೆಸ್ಸಿ ಥಾಮಸ್ : ದಿವಗಂತ ಡಾ ಎ ಪಿ ಜೆ ಅಬ್ದುಲ್ ಕಲಾಂ ಅವರು ಇವರನ್ನು ಪ್ರಾಜೆಕ್ಟ್ ಅಗ್ನಿಗಾಗಿ ನೇಮಿಸಿದರು.
ನಂತರ ಅಗ್ನಿ ೪ ಮತ್ತು ೫ನೇ ಕಾರ್ಯಾಚರಣೆಯಲ್ಲಿ ಯೋಜನಾ ನಿರ್ದೇಶಕರಾದರು.
೨೦೧೮ರಲ್ಲಿ ಅವರು ಡಿ ಆರ್ ಡಿ ಓದ ಏರೋನಾಟಿಕಲ್ ಸಿಸ್ಟಮ್ಸ್ನ ಮಹಾ ನಿರ್ದೇಶರಾದರು.
ವಾಣಿ ಕೋಲಾ : ವ್ಯವಹಾರದಲ್ಲಿ ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಒಬ್ಬಳು.
ಸಿಲಿಕಾನ್ ವ್ಯಾಲಿಯಲ್ಲಿ ಉನ್ನತ ಸ್ಥಾನಕ್ಕೆ ಏರಿದವರು.
ಇಂಡೋ- ಯು ಎಸ್ ವೆಂಚರ್ ಪಾರ್ಟನಸ್ ಸ್ಥಾಪನೆ.
ಕಲಾರಿ ಕ್ಯಾಪಿಟಲ್ ಸ್ಥಾಪಿಸಲು ದಾರಿ ಮಾಡಿಕೊಟ್ಟವರು.
ರಿಚಾಕರ್ : ಕಳೆದ ಕೆಲವು ವರ್ಷಗಳಲ್ಲಿ ಝಿವಾಮೆ ಮಹಿಳೆಯರ ನಿಕಟ ಉಡುಪುಗಳು ಜಗತ್ತಿನಲ್ಲಿ
ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ.
ಫಲ್ಗುಣಿ ನಾಯರ್ : ಫಲ್ಗುಣಿ ತಮ್ಮ ಬ್ರ್ಯಾಂಡ್ ನೈಕಾಗಿಂದಾಗಿ ಮನೆ ಮಾತಾಗಿದ್ದಾರೆ.
ಅವರು ರಾತ್ರೋರಾತ್ರಿ ಸಂಚಲನ ಮೂಡಿಸಿದ ಮತ್ತು ದೇಶದ ಅತ್ಯಂತ ಯಶಸ್ಚಿ ವ್ಯಾಪಾರ ಮಹಿಳೆಯರಲ್ಲಿ ಒಬ್ಬರಾದರು.
ಅರುಣಿಮಾ ಸಿನ್ಹಾ : ಪ್ರಬಲ ಮೌಂಟ್ ಎವರೆಸ್ಟ್ ಎರಿದ ಮೊದಲ ಅಂಗವಿಕಲ ಮಹಿಳೆ
೨೦೧೫ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರಿಸಲಾಯಿತು.
ದೇಶಾದ್ಯಂತ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ.
ಗೀತಾ ಗೋಪಿನಾಥ : ಭಾರತೀಯ ಮೂಲದ ಅಮೆರಿಕನ್ ಗೋಪಿನಾಥ್ ವಿಶ್ವಪ್ರಸಿದ್ದ ಅರ್ಥಶಾಸ್ತ್ರಜ್ಞೆ
ಅಂತರಾಷ್ಟ್ರೀಯ ಹಣಕಾಸು ನಿಧಿಯ ಮೊದಲ ಉಪವ್ಯವಸ್ಥಾಪಕ ನಿರ್ದೇಶಕಿ ಹಾಗೂ ಐ ಎಂ ಏಫ್ ಮುಖ್ಯ ಅರ್ಥಶಾಸ್ತ್ರಜ್ಞೆ.
ಶಿಕ್ಷಣ ಮತ್ತು ಸಂಸ್ಕಾರ ಒಂದಿದ್ದರೆ ಮಹಿಳೆ ಏನ್ ಬೇಕಾದರೂ ಮಾಡಬಹುದು ಅಂತ ತೋರಿಸಿ ಕೊಟ್ಟವರೆ ಈ ಮೇಲಿನ ಜನಪ್ರಿಯ ಮಹಿಳೆಯರು. ಇವರೆಲ್ಲರ ಸಾಧನೆ ನೋಡಿದ ಮೇಲೆ ನಾವು ಏನಾದರೂ ಈ ದೇಶಕ್ಕೆ ಅಥವಾ ನನ್ನ ನಾಡಿಗೆ ಕೊಡುಗೆ ನೀಡಲೇಬೇಕು ಅಂತ ಮನೋಭಾವನೆ ಹುಟ್ಟಬೇಕು ಅಂತನೇ ಈ ಲೇಖನವನ್ನು ಪ್ರಸ್ತುತ ಪಡಿಸಿದ್ದೇನೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.