Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
(ರಾಜ್ಯ ) ಜಿಲ್ಲೆ

4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

2025-26ನೇ ಸಾಲಿನ ಬಜೆಟ್ ಮಂಡನೆ | 19 ಸಾವಿರ ಕೋಟಿ ಆದಾಯ ಕೊರತೆ | 1,16,000 ಕೋಟಿ ಸಾಲದ ಮೊರೆ | ಗ್ಯಾರಂಟಿ ಯೋಜನೆಗಳಿಗೆ ರೂ.51ಸಾವಿರ ಕೋಟಿ

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಉಲ್ಲೇಖಿಸಿದ್ದಾರೆ.
1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಡಿಸಿಎಂ ಆಗಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಒಂದು ರೀತಿಯ ಇತಿಹಾಸವನ್ನು ಸೃಷ್ಟಿಸಿದರು. ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇದು ಅವರ ಮೂರನೇ ಬಜೆಟ್ ಮತ್ತು ಸತತ ಎರಡನೇ ಆದಾಯ ಕೊರತೆ ಬಜೆಟ್ ಆಗಿದೆ.
ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹೀಗಾಗಿ ಇನ್ನೂ ಹೆಚ್ಚಿನ ಸಾಲದೊಂದಿಗೆ 4,09,549 ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದ್ದಾರೆ.
“ಕರ್ನಾಟಕವು ಭಾರತದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ, ಇದು ರಾಷ್ಟ್ರೀಯ ಒಟ್ಟು ದೇಶೀಯ ಉತ್ಪನ್ನಕ್ಕೆ(GDP) ಶೇ. 8.4ರಷ್ಟು ಕೊಡುಗೆ ನೀಡುತ್ತದೆ. ಇದು 2024-25ನೇ ಸಾಲಿನಲ್ಲಿ ತನ್ನ ಪ್ರಭಾವಶಾಲಿ ಬೆಳವಣಿಗೆಯ ಪಥವನ್ನು ಮುಂದುವರೆಸಿದೆ ಮತ್ತು ಶೇ. 7.4 ರಷ್ಟು GSDP ಬೆಳವಣಿಗೆಯ ದರವನ್ನು ಸಾಧಿಸಲು ಸಜ್ಜಾಗಿದೆ. ಇದು ರಾಷ್ಟ್ರೀಯ ಬೆಳವಣಿಗೆಯ ದರ ಶೇ. 6.4 ಕ್ಕಿಂತ ಹೆಚ್ಚಾಗಿದೆ” ಎಂದು ಸಿಎಂ ಒತ್ತಿ ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿಗಳು ಅಭಿವೃದ್ಧಿಯನ್ನು ತಿಂದುಹಾಕುತ್ತಿವೆ ಎಂದು ದೂರುತ್ತಿದ್ದ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಶಾಸಕರನ್ನು ಸಮಾಧಾನಪಡಿಸುವ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 8,000 ಕೋಟಿ ರೂ.ಗಳ ಸಿಎಂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ(CMIDP) ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.
ಈ ಯೋಜನೆಯು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣ ನೀರಾವರಿ, ರಸ್ತೆಗಳು ಮತ್ತು ನಗರ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸುವ ಮೂಲಕ ರಾಜ್ಯಾದ್ಯಂತ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ.
ಇನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಘೋಷಿಸಿದ ಸಿಎಂ, ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗಾಗಿ ದೇವನಹಳ್ಳಿಯವರೆಗೆ ಮೆಟ್ರೋ ರೈಲು ಯೋಜನೆಯ ವಿಸ್ತರಣೆ ಸೇರಿದಂತೆ ಬಂಪರ್ ಕೊಡುಗೆ ನೀಡಿದ್ದಾರೆ.
ಈ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ಗೆ 26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಹಣ ಮೀಸಲಿಡಲಾಗಿದೆ.
ಹೀಗೆ ಎಲ್ಲ ಇಲಾಖೆಗಳಿಗೂ ಅನುಕೂಲಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ, ನೂತನ ಘೋಷಣೆಗಳೊಂದಿಗೆ ಸರ್ಕಾರ ಸಮಗ್ರ ರಾಜ್ಯದ ಅಭಿವೃದ್ಧಿಯ ಗುರಿ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್ಚಿದ ಸಾಲದ ಹೊರೆ

2025-26ನೇ ಸಾಲಿನಲ್ಲಿ ಅಂದಾಜು 1,16,000 ಕೋಟಿ ರೂ. ಸಾಲದ ಮೊರೆ ಹೋಗಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. 2024-25 ಸಾಲಿನಲ್ಲಿ 1,05,246 ಕೋಟಿ ರೂ.‌ ಸಾಲದ ಮೊರೆ ಹೋಗಲಾಗಿತ್ತು. ಆ ಮೂಲಕ ಈ ಬಾರಿ 10,754 ಕೋಟಿ ರೂ. ಹೆಚ್ಚುವರಿ ಸಾಲದ ಮೊರೆ ಹೋಗಲಾಗಿದೆ.
ಈ 1,16,000 ಕೋಟಿ ರೂ. ಸಾಲದ ಪೈಕಿ ಕೇಂದ್ರ ಸರ್ಕಾರದಿಂದ 7,000 ಕೋಟಿ ರೂ., ಬಹಿರಂಗ ಮಾರುಕಟ್ಟೆಯಿಂದ 1,05,000 ಕೋಟಿ ಹಾಗೂ ಎಲ್ಐಸಿ, ಎನ್ಎಸ್ಎಸ್ಎಫ್, ಎನದ ಸಿಡಿಸಿ ಮತ್ತು ಆರ್ ಐಡಿಎಫ್ ಗಳಿಂದ 4,000 ಕೋಟಿ ರೂ.‌ಸಾಲ ಪಡೆಯಲು ಅಂದಾಜಿಸಲಾಗಿದೆ. ಆ ಮೂಲಕ 2025-26ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು 7,64,655 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿ ಯ ಶೇ. 24.91ರಷ್ಟಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.