ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.
ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೭೭೭೧ ಬಾಕಿ ಇರುವ ಪ್ರಕರಣಗಳ ಪೈಕಿ ೨೩೭೦ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪ್ರಕರಣಗಳಲ್ಲಿ ಒಟ್ಟು ೧೯೭೯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದರಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ ಇಪಿ, ಎಮ್ವಿಸಿ ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು ಪೂರ್ವದಾವೆ ಪ್ರಕರಣಗಳಲ್ಲಿ, ಟ್ರಾಫಿಕ್ ಚಲನ್ ಪ್ರಕರಣಗಳು, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಹಾಗೂ ಬ್ಯಾಂಕಿನ ಪ್ರಕರಣಗಳು ಹೀಗೆ ಒಟ್ಟು ೧೮೬೬ ಪ್ರಕರಣಗಳಲ್ಲಿ ೮೯೭ ಪ್ರಕರಣಗಳು ರಾಜಿ ಸಂಧಾನದ ಮೂಲಕ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೊಲಗಿಡದ ಇವರುಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ್ ಪಡಿಸಿದರು.
ಸಂಧಾನಕಾರರಾಗಿ ಶೋಭಾ ಪಾಟೀಲ ಹಾಗೂ ಕುಮಾರಿ ರೇಣುಕಾ ಪಾಟೀಲ ವಕೀಲರುಗಳು, ಎಪಿಪಿ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ತಾಲೂಕಾ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ನ್ಯಾಯಾಲಯದ ಸಿಬ್ಬಂದಿಗಳಾದ ವಾಯ್.ಎಮ್. ತಳವಾರ, ಜಯಶ್ರೀ ಇಂಚುರ, ಸುರೇಶ ಬಳಗಾನೂರ. ವಿ.ಸಿ.ಶಿವಣಗಿ, ಪುನೀತ ದೊಡ್ಡಮನಿ, ಜ್ಯೋತಿ ಹೆಬ್ಬಾಳ, ಬಸವರಾಜ ಬೂದಿಹಾಳ, ನರ್ಮದಾ ಮರೋಳ, ಗೀತಾ ರಾಂಪೂರ, ರೇಣುಕಾ ಜಾನಮಟ್ಟಿ, ಸುಮಿತ್ರಾ ಕುಂಬಾರ, ಮಹಾಂತೇಶ ಹಚ್ಚರೆಡ್ಡಿ, ಮಂಜುಳಾ ಹೊಸಮನಿ, ನಾಗು ಮದಿಹಳ್ಳಿ, ಮಧು ಧರ್ಮಗಿರಿ, ನಾಗಮ್ಮ ಹೂಗಾರ, ಶ್ರುತಿ ಜಾಯಿ, ಸುಷ್ಮಾ ಬಾನಿ, ಇಸಾಕ್ ಒಂಟಿ, ಹಿರಿಯ ನ್ಯಾಯವಾದಿಗಳಾದ ವಿ.ಎಮ್.ನಾಗಠಾಣ, ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ಎನ್.ಜಿ.ಕುಲಕರ್ಣಿ, ಎನ್.ಆರ್.ಮೊಕಾಶಿ, ಎಮ್.ಆರ್.ಪಾಟೀಲ, ಆಯ್.ಎಸ್.ಹಗಟಗಿ ನ್ಯಾಯವಾದಿಗಳಾದ ಎಸ್.ಆರ್.ಜೋಗಿ, ಚೇತನ ಶಿವಶಿಂಪಿ, ಸಾಬಣ್ಣ ಚಳ್ಳಗಿ, ಬಿ.ಎ.ಚಿನಿವಾರ, ರಶ್ಮಿ ಕುಲಕರ್ಣಿ, ಎಚ್.ಟಿ.ಪೂಜಾರಿ, ಬಿ.ಎಮ್.ಮುಂದಿನಮನಿ, ಎಸ್.ಎಂ.ಕಿಣಗಿ, ಎಲ್.ಎಸ್.ಮೇಟಿ, ಎಂ.ಬಿ.ಬಿರಾದಾರ, ಆರ್.ಎಸ್.ತುಪ್ಪದ, ಬಿ.ವೈ.ಮೇಟಿ, ಎಚ್.ಜಿ.ನಾಗೋಡ ಸೇರಿದಂತೆ ಇತತರು ಭಾಗಿಯಾಗಿದ್ದರು.

ಕಕ್ಷೀದಾರನಲ್ಲಿಗೇ ಬಂದ ನ್ಯಾಯಾಧೀಶರು
ಲೋಕ್ ಅದಾಲತ್ ನಲ್ಲಿ ಪರಕರಣಗಳ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವಾಗ ಹಿರಿಯ ಜೀವಿಯೊಬ್ಬರು ನಡೆಯಲು ಬಾರದ ಸ್ಥಿತಿಯಲ್ಲಿದ್ದರು. ನ್ಯಾಯಾಲಯದ ದ್ವಾರದ ಬಳಿ ಕುಳಿತಿದ್ದ ಆತನ ಬಳಿ ಸ್ವತಃ ತಾವೇ ಎದ್ದು ಹೋದ ಕಿರಿಯ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಳಗಿಡದ ಅವರು ಎದುರು ನಿಂತುಕೊಂಡೇ ಪಕ್ಷಗಾರರ ಸಮಕ್ಷಮ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಮಾನವೀಯತೆ ಮೆರೆದರು.
“ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳ ಪೈಕಿ ರಾಜಿ ಸಂಧಾನ ಮಾಡಿಕೊಳ್ಳಲು ಇಚ್ಛಿಸಿರುವ ಬ್ಯಾಂಕಿನ ಸಿಬ್ಬಂದಿಗಳು ತಮ್ಮ ಗ್ರಾಹಕರಿಗೆ ಒಂದು ತಿಂಗಳ ಮುಂಚಿತವಾಗಿ ನೊಟೀಸು ನೀಡಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಸಹಕರಿಸಿ. ಇಲ್ಲಿ ಇತ್ಯರ್ಥವಾದ ಪ್ರಕರಣದ ಕೋರ್ಟ ಫೀ ನಿಮಗೆ ಮರಳಿ ಸಿಗಲಿದೆ. ಅದರ ಉಪಯೋಗ ಪಡೆದುಕೊಳ್ಳಿ.”
– ರವೀಂದ್ರಕುಮಾರ ಕಟ್ಟಿಮನಿ
ಹಿರಿಯ ಸಿವಿಲ್ ನ್ಯಾಯಾಧೀಶರು

