Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಗೆ ಪುರಸಭೆ ಗದ್ದುಗೆ: ಶಾಸಕ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಗೆ ಪುರಸಭೆ ಗದ್ದುಗೆ: ಶಾಸಕ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ ಪುರಸಭೆಗೆ ಅಧ್ಯಕ್ಷರಾಗಿ ಸುಹಾಸಿನಿ, ಉಪಾಧ್ಯಕ್ಷರಾಗಿ ಶಿವಕುಮಾರ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: ಇಲ್ಲಿನ ಪುರಸಭೆ ಅಧ್ಯಕ್ಷತೆ, ಉಪಾಧ್ಯಕ್ಷ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು ಹಾಗೂ ಶಾಸಕ ಮತ ಒಳಗೊಂಡು ಒಟ್ಟು ೨೫ ಮತಗಳಲ್ಲಿ ಶಾಸಕರ ಮತ ಸೇರಿ ಒಟ್ಟು ೨೪ ಮತ ಚಲಾಯಿಸಿದ್ದು ಕಾಂಗ್ರೆಸ್‌ನ ಸುಹಾಸಿನಿ ವಿರೇಶ್ ಖೇಳಗಿ ೧೯ ಮತಗಳು ಪಡೆಯುವ ಮೂಲಕ ಅಧ್ಯಕ್ಷೆಯಾದರೆ ಶಿವಕುಮಾರ ಪದಕಿ ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದರೆಂದು ಚುನಾವಣಾಧಿಕಾರಿ ಸಂಜೀವಕುಮಾರ ದಾಸರ್ ಘೋಷಣೆ ಮಾಡಿದರು.
ಪುರಸಭೆ ಅಧ್ಯಕ್ಷತೆಗೆ ಬಿಸಿಬಿ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಶಿಲ್ಪಾ ಮಳೇಂದ್ರ ಡಾಂಗೆ ನಾಮಪತ್ರ ಸಲ್ಲಿಸಿ ೫ ಮತಗಳು ಪಡೆದರು. ಕಾಂಗ್ರೆಸ್ ಪಕ್ಷದ ಸುಹಾಸಿನಿ ವಿರೇಶ್ ಖೇಳಗಿ ಅವರು ನಾಮಪತ್ರ ಸಲ್ಲಿಸಿ ೧೯ ಮತಗಳು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು. ಇನ್ನೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಶಿವಕುಮಾರ ಪದಕಿ ಅವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆಯಲ್ಲಿ ಶಾಸಕ ಎಂ.ವೈ.ಪಾಟೀಲ ಅವರು ಕೂಡಾ ಮತ ಚಲಾಯಿಸಿದರು. ಫಲಿತಾಂಶ ಘೋಷಣೆಯಾಗುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಎಂ.ವೈ.ಪಾಟೀಲ ಹಾಗೂ ಕೆಪಿಸಿಸಿ ಸದಸ್ಯ ಅರುಣಕುಮಾರ ಎಂವೈ.ಪಾಟೀಲ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಶಾಸಕ ಎಂ.ವೈ.ಪಾಟೀಲ ಮಾತನಾಡಿ ಅಫಜಲಪುರ ಪಟ್ಟಣವು ವಿಶಾಲವಾಗಿ ಬೆಳೆಯುತ್ತಿದೆ. ಪಟ್ಟಣದ ಎಲ್ಲ ವಾರ್ಡ್ಗಳು ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸುಹಾಸಿನಿ ಖೇಳಗಿ ಅವರು ಪುರಸಭೆಯ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು. ಈಗಾಗಲೇ ೧೨೦ ಕೋಟಿ ರೂ ಅನುದಾನದ ಕುಡಿಯುವ ನೀರಿನ ಯೋಜನೆ ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿಯಲಿದೆ. ಇನ್ನೂ ೧೫೦ ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಕ್ಕೆ ಇಲಾಖೆಯವರು ೮೫ ಕೋಟಿ ಮಂಜೂರಿಗೆ ಒಪ್ಪಿದ್ದಾರೆ ಉಳಿದಂತೆ ಕೆಕೆಆರ್‌ಡಿ ಅನುದಾನದಲ್ಲಿ ವರ್ಷದೊಳಗೆ ಕೆಲಸ ಮಾಡಿ ಮುಗಿಸಲಾಗುವುದು ಎಂದ ಅವರು ೨೦೧೮ ರಿಂದ ಇಲ್ಲಿಯವರೆಗೂ ಪಟ್ಟಣದ ಅರ್ಹ ಬಡ ಕುಟುಂಬಗಳಿಗೆ ಮನೆ ಹಂಚಿಕೆ ಮಾಡಲು ಆಗಿಲ್ಲ. ಪಟ್ಟಣದವರಿಗಾಗಿ ಈಗಾಗಲೇ ೧೭ ಎಕರೆ ೩೦ ಗುಂಟೆ ಜಮೀನು ಖರೀದಿ ಮಾಡಿದ್ದು ಗುಣಮಟ್ಟದ ಮನೆ ನಿರ್ಮಿಸಿ ಹಂಚಿಕೆ ಮಾಡಲಾಗುವುದು. ಹೀಗಾಗಿ ಪುರಸಭೆಯ ಅಧ್ಯಕ್ಷರು ಎಲ್ಲರನ್ನು ಒಗ್ಗೂಡಿಸಿಕೊಂಡು ಜವಾಬ್ದಾರಿಯಿಂದ ಪಟ್ಟಣದ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಅರುಣಕುಮಾರ ಎಂವೈ ಪಾಟೀಲ, ಪಪ್ಪು ಪಟೇಲ್ ಮಾಜಿ ಜಿಪಂ ಸದಸ್ಯರಾದ ಪ್ರಕಾಶ ಜಮಾದಾರ, ಮತೀನ್ ಪಟೇಲ್, ಸಿದ್ದಾರ್ಥ ಬಸರಿಗಿಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ ಮುಖಂಡರಾದ ರಾಜಶೇಖರ ಪಾಟೀಲ, ರವಿನಂದಶೇಟ್ಟಿ, ಶಿವಾನಂದ ಗಾಡಿಸಾಹುಕಾರ, ಲಚ್ಚಪ್ಪ ಜಮಾದಾರ, ರವಿ ಶೆಟ್ಟಿ, ನಾಗಪ್ಪ ಆರೇಕರ್, ರಾಜುಗೌಡ ಅವರಳ್ಳಿ, ಚನ್ನಬಸಯ್ಯ ಸ್ವಾಮಿ, ಮಹಾಲಿಂಗ ಅಂಗಡಿ, ಮಲ್ಲಯ್ಯ ಹೊಸಮಠ, ಗೌತಮ ಸಕ್ಕರಗಿ, ವಿಶ್ವನಾಥ ಕಾರ್ನಾಡ್, ವಿರೇಶ ಖೇಳಗಿ, ಮಲ್ಲು ವಾಳಿ ಸೇರಿದಂತೆ ಅಫಜಲಪುರ ಪಿಎಸ್‌ಐ ಸೋಮನಿಂಗ ಒಡೆಯರ್ ಮತ್ತು ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

“ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಎಂ.ವೈ.ಪಾಟೀಲ ಹಾಗೂ ಪುರಸಭೆಯ ಸದಸ್ಯರು ಮತ ನೀಡಿ ಭಾರಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ ಇವರೇಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಪಟ್ಟಣದ ನಾಗರಿಕರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸಗಳು ಮಾಡುವ ಮೂಲಕ ತಮ್ಮೇಲ್ಲರ ವಿಶ್ವಾಸ ಉಳಿಸಿಕೊಳ್ಳುವೆ. ನನಗೆ ಅಧ್ಯಕ್ಷತೆ ಸ್ಥಾನದವರೆಗೂ ಬರಲು ಕಾರಣ ಕರ್ತರಾದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ.”

– ಸುಹಾಸಿನಿ ವಿರೇಶ ಖೇಳಗಿ
ನೂತನ ಅಧ್ಯಕ್ಷರು
ಪುರಸಭೆ, ಅಫಜಲಪುರ

“ಶಾಸಕ ಎಂ.ವೈ.ಪಾಟೀಲ ಅವರ ಆಶಯದಂತೆ ಪಟ್ಟಣದ ನಾಗರಿಕರು ನನ್ನನ್ನು ಎರಡು ಸಲ ಪುರಸಭೆ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ. ಸದಾ ಜನಸೇವೆಯಲ್ಲಿರುವ ನನ್ನನ್ನು ಸಧ್ಯ ಪುರಸಭೆಗೆ ಉಪಾಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಪಟ್ಟಣದ ಅಭಿವೃದ್ಧಿ ಮಾಡುತ್ತೇನೆ.”

– ಶಿವಕುಮಾರ ಪದಕಿ
ನೂತನ ಉಪಾಧ್ಯಕ್ಷರು
ಪುರಸಭೆ, ಅಫಜಲಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.