Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ

ಡಿ.೨೯ರಂದು ವಿಶ್ವಮಾನವ ದಿನಾಚಾರಣೆ

೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಶಿಕ್ಷಣ ಸಂಪತ್ತು ಅಮೂಲ್ಯ :ಡಾ.ಪ್ರಭುಗೌಡ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಶಿಕ್ಷಣ ಸಂಪತ್ತು ಅಮೂಲ್ಯ :ಡಾ.ಪ್ರಭುಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜೀವನದ ಸಂಪತ್ತುಗಳಲ್ಲಿ ಶಿಕ್ಷಣ ಸಂಪತ್ತು ಅಮೂಲ್ಯವಾಗಿದೆ. ಉಳಿದ ಸಂಪತ್ತು ಕದಿಯಬಹುದು. ಶಿಕ್ಷಣ ಸಂಪತ್ತನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಇಂತಹ ಸಂಪತ್ತು ನಮ್ಮದಾಗಿಸಿಕೊಳ್ಳಬೇಕೆಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.
ತಾಲೂಕಿನ ಹೂವಿನಹಿಪ್ಪರಗಿಯ ಆಶೀರ್ವಾದ ಶಿಕ್ಷಣ ಸಂಸ್ಥೆಯ ಆಶೀರ್ವಾದ ಪಬ್ಲಿಕ್ ಸ್ಕೂಲ್, ಪರಿವರ್ತನ ವಿದ್ಯಾಮಂದಿರದ ಅಭಿವ್ಯಕ್ತಿ-ಸಂಭ್ರಮ ೨೦೨೪-೨೫ಯಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ, ಪಾಲಕರ ಪಾತ್ರವಿದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಪಾಲಕರು ಮಕ್ಕಳಿಗೆ ಸಮಯ ಕೊಡುವದನ್ನು ಮರೆಯಬಾರದು. ಪಾಲಕರು ಮಕ್ಕಳ ಕಡೆಗೆ ಗಮನ ಹರಿಸದೇ ಹೋದರೆ ಅವರು ದಾರಿ ತಪ್ಪುವ ಸಾಧ್ಯತೆಯಿದೆ. ಮಕ್ಕಳು ಯಾವ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದುತ್ತಾರೋ ಅವರಿಗೆ ಆ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಶಿಕ್ಷಣ ಎನ್ನುವದು ತಪಸ್ಸು ಇದ್ದ ಹಾಗೆ. ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಉತ್ತಮ ನಾಗರಿಕರಾಗಬೇಕು. ಪಾಲಕರು ತಮ್ಮ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡುವ ಮೂಲಕ ಅವರ ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಇದು ಶಿಕ್ಷಣ ಕಲಿಕೆಗೂ ಪೂರಕವಾಗುತ್ತದೆ ಎಂದರು.
ವಕೀಲ ಜಿ.ಬಿ.ಬಾಗೇವಾಡಿ ಮಾತನಾಡಿದರು.
ಅಧ್ಯಕ್ಷತೆಯನ್ನು ಆಶೀರ್ವಾದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ವ್ಹಿ.ಸಜ್ಜನ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಬಸವರಾಜ ತಿಳಗೂಳ, ಪಿಕೆಪಿಎಸ್ ಅಧ್ಯಕ್ಷ ಪಿ.ಜಿ.ಗೋಠೆದ, ಆಶೀರ್ವಾದ ಶಿಕ್ಷಣ ಸಂಸ್ಥೆಯ ನಿರ್ದೇಶಕ ರಾಜಶೇಖರ ಸಜ್ಜನ, ಸುರೇಶ ಸಜ್ಜನ, ಸಂಗಣ್ಣ ಹುನಗುಂದ, ಆನಂದ ಪತ್ತಾರ, ಸಿಆರ್‌ಪಿ ಸುಮಿತ್ರಾ ತೋಟದ, ಕಾನಿಪ ಸಂಘದ ಜಿಲ್ಲಾ ಹಂಗಾಮಿ ಅಧ್ಯಕ್ಷ ಪ್ರಕಾಶ ಬೆಣ್ಣೂರ, ಸಂಸ್ಥೆಯ ಕಾರ್ಯದರ್ಶಿ ವಿದ್ಯಾಶ್ರೀ ಸಜ್ಜನ ಇದ್ದರು. ವೈ.ಎಸ್.ಬೇಲಿ ಸ್ವಾಗತಿಸಿದರು. ಬಿ.ಟಿ.ದೊಡಮನಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ವರ್ಗಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉತ್ತಮ ಬಾಲಕ, ಬಾಲಕಿ ಪ್ರಶಸ್ತಿ ವಿತರಣೆ , ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಸನ್ಮಾನ ಜರುಗಿತು. ನಂತರ ಮಕ್ಕಳಿಂದ ಜರುಗಿದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ

ಡಿ.೨೯ರಂದು ವಿಶ್ವಮಾನವ ದಿನಾಚಾರಣೆ

೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ

ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ
    In (ರಾಜ್ಯ ) ಜಿಲ್ಲೆ
  • ಡಿ.೨೯ರಂದು ವಿಶ್ವಮಾನವ ದಿನಾಚಾರಣೆ
    In (ರಾಜ್ಯ ) ಜಿಲ್ಲೆ
  • ೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಾಳೆ ದೇವರಹಿಪ್ಪರಗಿ ಪತ್ತಿನ ಸಹಕಾರಿ ಸಂಘದ ರಜತ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಸುವಾಸನೆ ವಿಶ್ವಕ್ಕೆ ಹರವಿದ ದಾರ್ಶನಿಕ ಸಿದ್ಧೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಿದ ವಾಜಪೇಯಿ :ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಪ್ರದೇಶ ಕುರುಬ ಸಂಘದ ಅಧ್ಯಕ್ಷರಾಗಿ ಸಿದ್ದು ಕೆರಿಗೊಂಡ ಆಯ್ಕೆ
    In (ರಾಜ್ಯ ) ಜಿಲ್ಲೆ
  • 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಡಿಸ್ಮೆನೋರಿಯಾ ಕುರಿತು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.