Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇದು ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಚುನಾವಣೆ :ಯತ್ನಾಳ
(ರಾಜ್ಯ ) ಜಿಲ್ಲೆ

ಇದು ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಚುನಾವಣೆ :ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಈ ಚುನಾವಣೆ ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಮೇಲೆ ನಡೆಯುತ್ತಿದೆ. ಕನಿಷ್ಠ ಶೇ 90 ರಷ್ಟು ಮತದಾನ ಮಾಡುವ ಮೂಲಕ ಬಿಜೆಪಿ ಗೆಲ್ಲಿಸಬೇಕು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.
ನಗರದಲ್ಲಿ ಸೋಮವಾರ ಚುನಾವಣಾ ಮತಯಾಚನೆ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದುತ್ವ ಸೋಲಿಸಲು ಅವರೆಲ್ಲರೂ ಒಂದಾಗಿದ್ದಾರೆ. ಆದರೆ, ಯಾವ ಕಾರಣಕ್ಕೂ ಅವರ ಉದ್ದೇಶ ಈಡೇರಲು ಸಾಧ್ಯವಿಲ್ಲ.‌ ನಮ್ಮವರು ಕೂಡ ಒಂದಾಗಿದ್ದಾರೆ ಎಂದು ತಿಳಿಸಿದರು.
ಐದು ವರ್ಷ ಅಧಿಕಾರ ಕೊಟ್ಟಿದ್ದೀರಿ, ಮಹಾಮಾರಿ ಕೊರೊನಾದಿಂದ ಎರಡು ವರ್ಷ ಅಭಿವೃದ್ದಿ ಕುಂಠಿತವಾದರೂ, ಉಳಿದ ಕೇವಲ ಮೂರು ವರ್ಷದಲ್ಲಿ ನಿರೀಕ್ಷೆ ಮೀರಿ ನಗರ ಅಭಿವೃದ್ದಿ ಮಾಡುವ ಮೂಲಕ ಇತಿಹಾಸ ಬದಲಿಸಿರುವೆ. ಇದರಿಂದ ಕಾಂಗ್ರೆಸ್ ಗೆ ಮತ ಹಾಕುವಂತೆ ಹೇಳುವವರಿಗೆ ಅವರ ಪತ್ನಿಯರೇ ಈವರೆಗೆ ರಾಮನ ಮೆರವಣಿಗೆ ಮಾಡಿ, ಈಗ ಆ ಪಕ್ಷಕ್ಕೆ ಮತ ಹಾಕುತ್ತೀರಾ ಅಂತ ಛಿಮಾರಿ ಹಾಕುತ್ತಿದ್ದಾರೆ. ಅಷ್ಟೊಂದು ಅಭಿಮಾನ ಮೂಡಿದೆ ಎಂದು ಹೇಳಿದರು.
ಹಣ ಪಡೆದುಕೊಳ್ಳುವವರು ಹುಷಾರ್ ಆಗಿರಿ. ಕಳೆದ ಬಾರಿ ಹಣ ಪಡೆದವರಿಂದ, ಸೋತ ಮೇಲೆ ಕೊಟ್ಟ ಹಣಕ್ಕಿಂತ ಹೆಚ್ಚಿಗೆ ವಸೂಲಿ ಮಾಡಲಾಗಿದೆ. ಈ ಬಾರಿ ಕೂಡ ಕಾಂಗ್ರೆಸ್ ಸೋಲು ಖಚಿತ. ಹೀಗಾಗಿ ಯಾರು ಕೂಡ ಹಣ ಪಡೆದುಕೊಳ್ಳಬಾರದು. ಈಗಾಗಲೇ ಕೆಲವರ ಒತ್ತಾಯದಿಂದ ಹಣ ಪಡೆದವರು ಸಹ, ನನಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಬಿಜಾಪುರ ವಿಜಯಪುರ ಆಗಿದೆ. ಕೆಲವರ ಸ್ವಾರ್ಥಕ್ಕಾಗಿ ತಪ್ಪು ಮಾಡಿ ಮತ್ತೆ ಫಕೀರ ಬಸ್ತಿಯನ್ನಾಗಿ ಮಾಡುವುದು ಬೇಡ. 2047ಕ್ಕೆ ಇಸ್ಲಾಂ ದೇಶ ಮಾಡುವುದಾಗಿ ಪಿಎಫ್ ಐ ಹೇಳಿದೆ. ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದು ಬೇಡ. ಮೇ.10ಕ್ಕೆ ಕಮಲಕ್ಕೆ ಮತ ಒತ್ತಿ, ಜೈ ಭಜಂಗಬಲಿ ಎನ್ನುವ ಮೂಲಕ ಭಜರಂಗ ದಳ ನಿಷೇಧಿಸುವ ಹೇಳಿಕೆಗೆ ಉತ್ತರ ನೀಡಬೇಕು. ಈಗಾಗಲೇ ಡಿಕೆಸಿ ಹೆಲಿಕ್ಯಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದು ಮುನ್ಸೂಚನೆ ನೀಡಿದೆ ಎಂದು ಹೇಳಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯದಿಂದ ಜೀವನ ಸಾಗಿಸುತ್ತಿರುವ ಯಾರೊಬ್ಬರೂ ಕಾಂಗ್ರೆಸ್ ಗೆ ಮತ ಹಾಕಬಾರದು. ಕಾರಣ ಅಂಬೇಡ್ಕರ್ ಅವರೇ ಕಾಂಗ್ರೆಸ್ ಗೆ ಮತ ಹಾಕಿದರೆ ಆತ್ಮಹತ್ಯೆ ಮಾಡಿಕೊಂಡಂತೆ ಅಂದಿದ್ದಾರೆ. ಇದನ್ನು ತಲೆಯಲ್ಲಿಟ್ಟುಕೊಂಡು ಬಿಜೆಪಿಗೆ ಮತ ನೀಡಿ ಎಂದು ಹೇಳಿದರು.
ನಾನು ಯಾವುದೇ ಸಮಾಜಕ್ಕೆ ತಪ್ಪಾಗಿ ಮಾತನಾಡಿಲ್ಲ. ಆದರೆ, ಕೆಲವರು ತಮ್ಮ ವೈಯಕ್ತಿಕ ಸ್ವಾರ್ಥಕ್ಕಾಗಿ ವಿನಾಕಾರಣ ನನ್ನ ಹೆಸರು ಕೆಡಿಸಲು ಯತ್ನಿಸುತ್ತಿದ್ದಾರೆ. ಸತ್ಯ ಅರಿತಿರುವ ನಮ್ಮ ಜನರು ಅವರ ಮಾತಿಗೆ ಕಿವಿಗೊಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ನಾಡು ಕಂಡ ಶ್ರೇಷ್ಠ ಸಂತರಾಗಿದ್ದ ಜ್ಞಾನಯೋಗಾಶ್ರಮದ ಶ್ರೀಗಳು ನನ್ನ ಮೇಲೆ ಬಹಳ ಪ್ರೀತಿ ಇಟ್ಟುಕೊಂಡಿದ್ದರು. ಬಸನಗೌಡ್ರ ನಿಮ್ಮನ್ನು ನೋಡಿದರೆ ಬಹಳ ಖುಷಿ ಆಗುತ್ತದೆ. ನಿಮ್ಮಂತವರು ಹೀಗೆ ಸತ್ಯ ಮಾತಾಡಬೇಕು ಅಂತ ಹೇಳುತ್ತಿದ್ದರು. ಅದೇ ರೀತಿ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮುಲಾಜಿಲ್ಲದೆ ಮಾತನಾಡುವೆ. ಕೆಲವರು ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿದ್ದು, ಅವರನ್ನು ಶೀಘ್ರ ಪಕ್ಷದಿಂದ ಹೊರ ಹಾಕುತ್ತಾರೆ ಎನ್ನುತ್ತಿದ್ದರು. ಆದರೆ, ಪಕ್ಷ ನಾನು ತಪ್ಪು ಮಾಡಿಲ್ಲ ಅಂತ ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಿದೆ. ತಪ್ಪು ಮಾಡಿದ್ದರೇ ಪಕ್ಷದಿಂದ ಹೊರ ಹಾಕುತ್ತಿತ್ತು ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಜಶೇಖರ ಮಗಿಮಠ, ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ವಿಠ್ಠಲ ಹೊಸಪೇಟ, ಮುಖಂಡರಾದ ದಯಾಸಾಗ ಪಾಟೀಲ, ಜಗದೀಶ ಕ್ಷತ್ರೀಯ, ರಾಜೇಶ ದೇವಗಿರಿ, ಗೂಳಪ್ಪ ಶಟಗಾರ, ಬಸಯ್ಯ ಹಿರೇಮಠ, ಗುರುಪಾದಯ್ಯ ಗಚ್ಚಿನಮಠ, ಪ್ರಕಾಶ ಅಕ್ಕಲಕೋಟ, ವಿವೇಕ ಡಬ್ಬಿ, ಅಶೋಕ ತಿಮ್ಮಶೆಟ್ಟಿ, ರಜನಿ ಸಂಬಣ್ಣಿ, ಬಸವರಾಜ ಸೂಗೂರ, ಶಿಲ್ಪಾ ಕುದರಗೊಂಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ವ್ಯಾಪಾರಸ್ಥರು, ಹಿತೈಷಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

basanagouda patil yatnal BIJAPUR NEWS bjp udaya rashmi
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.