Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಶಿಕ್ಷಣ ಬಹುಮುಖ್ಯ :ವರಲಿಂಗೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಶಿಕ್ಷಣ ಬಹುಮುಖ್ಯ :ವರಲಿಂಗೇಶ್ವರ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜೀವನದಲ್ಲಿ ಶಿಕ್ಷಣ ಪಡೆಯುವದು ಮುಖ್ಯವಾಗಿದೆ. ಶಿಕ್ಷಣವಂತರಾದರೆ ಜೀವನವನ್ನು ಸುಗಮವಾಗಿ ಸಾಗಿಸಬಹುದು. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂದು ಗೊರವಗುಂಡಗಿ ಪುಣ್ಯಕೋಟಿ ಆಶ್ರಮದ ವರಲಿಂಗೇಶ್ವರ ಸ್ವಾಮೀಜಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ಉಕ್ಕಲಿ ರಸ್ತೆಯಲ್ಲಿರುವ ಎಲ್‌ಟಿ-೨ ತಾಂಡಾದ ಹತ್ತಿರವಿರುವ ಟೋಕರೆ ಕೋಳಿ ಸಮಾಜ ಸಂಸ್ಥೆಯ ಟೋಕರೆ ಕೇಳಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ೩೫ ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಶಾಲಾ ಸಾಂಸ್ಕ್ರತಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯು ಅನೇಕ ಸಂತರ-ಮಹಾತ್ಮರಿಗೆ ಜನ್ಮತಾಣವಾಗಿದೆ. ಈಚೆಗೆ ಜಿಲ್ಲೆಯು ಶೈಕ್ಷಣಿಕವಾಗಿ ಅಭಿವೃದ್ಧಿಯಾಗುತ್ತಿದೆ. ಬೇರೆ ಜಿಲ್ಲೆಯವರು ವಿಜಯಪುರ ಜಿಲ್ಲೆಗೆ ವ್ಯಾಸಂಗಕ್ಕೆ ಬರುತ್ತಿರುವದು ಕಾಣಬಹುದಾಗಿದೆ. ಈ ಭಾಗದಲ್ಲಿರುವ ಟೋಕರೆ ಕೋಳಿ ಸಮಾಜ ಸೇವಾ ಸಂಸ್ಥೆಯು ಸಹ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಯನ್ನು ನಡೆಸುತ್ತಿರುವದು ಶ್ಲಾಘನೀಯ. ಈಗಾಗಲೇ ಈ ಸಂಸ್ಥೆಯು ಅನುದಾನಕ್ಕೆ ಒಳಪಡಬೇಕಾಗಿತ್ತು. ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನಕ್ಕೆ ಒಳಪಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಲೆಂದರು.
ಮುಂಬರುವ ದಿನಗಳಲ್ಲಿ ಈ ಸಂಸ್ಥೆಯು ನೂತನ ಶಾಲಾ ಕಟ್ಟಡ, ವಸತಿ ನಿಲಯ ಕಟ್ಟಡ ನಿರ್ಮಾಣ ಮಾಡುವಂತಾಗಲಿ. ಈ ಕಟ್ಟಡಗಳಿಗೆ ನಮ್ಮ ಮಠದಿಂದ ರೂ.೫ ಲಕ್ಷ ಧನಸಹಾಯ ಮಾಡುವ ಭರವಸೆ ನೀಡಿದ ಅವರು, ಈ ಸಂಸ್ಥೆಯಲ್ಲಿ ಕಲಿಯುವ ಮಕ್ಕಳು ನಾಡನ್ನು ಬೆಳೆಯುವ ಮಕ್ಕಳಾಗಿ ಹೊರಹೊಮ್ಮುವಂತಾಗಲೆಂದರು.
ಸಾನಿಧ್ಯ ವಹಿಸಿದ್ದ ಸಿಂದಗಿಯ ಶಾಂತಗಂಗಾಧರ ಸ್ವಾಮೀಜಿ ಮಾತನಾಡಿದ ಅವರು, ಇಂದು ಶಿಕ್ಷಣ ಸಂಸ್ಥೆಯನ್ನು ಬೆಳೆಸುವದು ತುಂಬಾ ಕಷ್ಟದಾಯಕ ಸಂಗತಿ. ಈ ಸಂಸ್ಥೆಯ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವದು ಸಂತಸದಾಯಕ ಸಂಗತಿ. ಇಲ್ಲಿ ಕಲಿಯುವ ಮಕ್ಕಳು ನಾಡಿನ ಸೇವೆ ಸಲ್ಲಿಸುವಂತಾಗಲೆಂದರು.
ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ.ಮೇಲಕಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಹೆಚ್ಚು ಸಿಗುವಂತಾಗಬೇಕು. ಈ ಸಂಸ್ಥೆಯು ಈ ದಿಶೆಯಲ್ಲಿ ಕಾರ್ಯನ್ಮೋಖವಾಗಿರುವುದು ಶ್ಲಾಘನೀಯ. ಇದೊಂದು ಆದರ್ಶಮಯ ಶಿಕ್ಷಣ ಸಂಸ್ಥೆಯಾಗಿ ರೂಪಗೊಳ್ಳಬೇಕು. ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಹೊಂದಬೇಕಾದರೆ ಅವರಿಗೆ ಉತ್ತಮ ಶಿಕ್ಷಣದ ಅಗತ್ಯವಿದೆ. ಈ ಸಂಸ್ಥೆಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ ಚಿಂಚನಸೂರ ಅವರು ನಿಗಮದಿಂದ ಸಹಾಯ-ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಿಂದಗಿಯ ಪ್ರಶಾಂತ ಸುಣಗಾರ, ಎಂ.ಡಿ.ಹರಿಕಾಂತರ, ನೀಲಕಂಠ ಬಲೇಗಾರ, ಭೀಮಣ್ಣ ಕೋಳಿ,ಡಾ.ಭೀಮಾಶಂಕರ ಮುತಗೋಡ, ಬಸಪ್ಪ ರಾಠೋಡ, ಜಿ.ಜಿ.ದೇವೂರ,ಬಂಡೆಪ್ಪ ನಾಟೀಕಾರ,ಎನ್.ಬಿ.ಕೋಳಿ, ಸಿಆರ್‌ಪಿ ಎಂ.ಎಂ.ದಳವಾಯಿ ಇತರರು ಇದ್ದರು. ಅಧ್ಯಕ್ಷತೆಯನ್ನು ಶ್ರೀಮಂತ ಕೋಳಿ ವಹಿಸಿದ್ದರು. ಡಾ.ಭೀಮಾಶಂಕರ ಮುತಗೋಡ ಸ್ವಾಗತಿಸಿದರು. ಶಿಕ್ಷಕ ಎಂ.ಬಿ.ತೇಲಿ(ಅಥಣಿ) ನಿರೂಪಿಸಿ,ವಂದಿಸಿದರು.
ನಂತರ ವಿದಾರ್ಥಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.