ಮೋರಟಗಿ ಹೊರ ಠಾಣೆಯಲ್ಲಿ ದಲಿತ ಕುಂದುಕೊರತೆ ಸಭೆ | ಡಿವೈಎಸ್ಪಿ ಮರ್ತಜಾ ಖಾದ್ರಿ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಮೋರಟಗಿ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡಾ ಕಳ್ಳತನ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ ದರೋಡೆಕೋರರನ್ನು ಬಂದಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಕಳ್ಳರ ಹಾವಳಿ ತಪ್ಪಿಸಲು ಮುಂಜಾಗೃತವಾಗಿ ಮಠ ಮಂದಿರ, ದೇವಸ್ಥಾನ, ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಪ್ರೊಬೆಷನರಿ ಡಿ.ವಾಯ್. ಎಸ್. ಪಿ ಮರ್ತಜಾ ಖಾದ್ರಿ ಸೂಚಿಸಿದರು.
ಗ್ರಾಮದ ಹೊರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ದಲಿತ ಕುಂದುಕೊರತೆ ಸಭೆಯಲ್ಲಿ ಬಾಗವಹಿಸಿ ಅವರು ಮಾತನಾಡಿದರು.
ಮೋರಟಗಿ ಹೊರಠಾಣೆಗೆ ೧೪ ಹಳ್ಳಿಗಳು ವಳಪಾಡುತ್ತವೆ ತಮ್ಮ ತಮ್ಮ ಗ್ರಾಮಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಮುಕ್ತವಾಗಿ ಪೊಲೀಸ್ ಠಾಣೆಗೆ ಬೀಟ್ ಪೋಲೀಸರಿಗೆ ಅಥವಾ ೧೧೨ ಗೆ ಕರೆಮಾಡಿ ತಿಳಸಬೇಕು ತಾವುಗಳು ಭಯಪಡುವ ಅವಶ್ಯವಿಲ್ಲ ತಾವು ತಿಳಿಸಿದ ವಿಷಯ ಇಲಾಖೆ ಗುಪ್ರವಾಗಿ ಇಡುಲಾಗುವುದು.
ನಂತರ ಪಿಎಸ್ಐ ಆರಿಫ್ ಮುಷಾಪುರಿ ಮಾತನಾಡಿ ದಿನದಿಂದ ದಿನಕ್ಕೆ ರಾಷ್ಟ್ರೀಯ ಮೇಲೆ ಅಪಘಾತ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ ತಮ್ಮ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯವಾಗಿ ಬಳಸಿ ವಾಹನ ಚಲಿಸಬೇಕು ಯಾವುದೇ ಕಾರಣಕ್ಕೂ ಇನ್ಶೂರೆನ್ಸ್ ಕಟ್ಟುವುದು ಮರೆಯಬೇಡಿ ಎಂದರು.
ಸಭೆಯಲ್ಲಿ ಮಾಜಿ ಸೈನಿಕ ಎಂ ಟಿ ಸಿಂಗೆ, ರವಿ ನಡುವಿನಕೇರಿ ಧರ್ಮರಾಜ ಎಂಟಮನ, ಹಾವಣ್ಣ ಕಕ್ಕಳಮೆಲಿ, ಶ್ರೀಮಂತ ಮಳಗಿ ನಿಂಗಣ್ಣ ವಾಲಿಕಾರ, ಚನ್ನಪ್ಪ ಬಳಗಾನೂರ, ಬಿಟ್ ಪೊಲೀಸ್ ಸಿಬ್ಬಂದಿಗಳಾದ ಭೀಮು ಲಮಾಣಿ ನಿಂಗಪ್ಪ ಪೂಜಾರಿ ಇದ್ದರು.

