Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ

ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನ್ನದಾನಕ್ಕಿಂತ ವಿದ್ಯಾದಾನ ತುಂಬ ಶ್ರೇಷ್ಠ :ಸಿಂದಗಿ
(ರಾಜ್ಯ ) ಜಿಲ್ಲೆ

ಅನ್ನದಾನಕ್ಕಿಂತ ವಿದ್ಯಾದಾನ ತುಂಬ ಶ್ರೇಷ್ಠ :ಸಿಂದಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ನಿಷ್ಕಲ್ಮಶ ಮನಸ್ಸಿನಿಂದ ಗ್ರಾಮೀಣ ಮಟ್ಟದ ಶಾಲೆಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತನ್ನದೇ ಆದ ಪ್ರಮುಖ ಪಾತ್ರ ವಹಿಸುತ್ತಿರುವ ಮುಂಬೈನ ಶೇಠ ತಪಿದಾಸ ತುಳಸಿದಾಸ್ ವೃಜದಾಸ ಚಾರಿಟೇಬಲ್ ಟ್ರಸ್ಟಿಗೆ ನಾವೆಲ್ಲರೂ ಧನ್ಯವಾದಗಳನ್ನು ಸಲ್ಲಿಸಬೇಕಾಗಿದೆ ಎಂದು ಕೋ-ಆರ್ಡಿನೇಟರ್ ವಿ.ಎಂ. ಸಿಂದಗಿ ಹೇಳಿದರು.
ತಾಲ್ಲೂಕಿನ ಅರಕೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೊಜೆಕ್ಟರ್ ಮೂಲಕ ಕಾರ್ಯನಿರ್ವಹಿಸುವ ಡಿಜಿಟಲ್ ಬೋರ್ಡ್ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಸ್ಥೆಯು ಮಕ್ಕಳ ಮಾನಸಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳು ತಂತ್ರಜ್ಞಾನವನ್ನು ಹೆಚ್ಚಿನ ಮಟ್ಟದಲ್ಲಿ ಬಳಸಿಕೊಂಡು ದೃಕ್ ಶ್ರವಣೋಪಕರಣವಾಗಿ ಈ ಬೋರ್ಡನ್ನು ಶಿಕ್ಷಕರು ಬಳಸಬೇಕು. ಮಕ್ಕಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು. ಪರೀಕ್ಷೆಗೆ ಮಕ್ಕಳು ಸಿದ್ಧರಾಗಬೇಕು. ಉನ್ನತವಾದ ಗುರಿಯನ್ನು ಮಕ್ಕಳು ಹೊಂದಬೇಕು. ಅದಕ್ಕಾಗಿ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು. ಜ್ಞಾನಾತ್ಮಕ ವಿಷಯಗಳಾದ ಗಣಿತ ವಿಜ್ಞಾನ ಸಮಾಜ ವಿಜ್ಞಾನಗಳನ್ನು ಭಾಷಾ ವಿಷಯಗಳ ಆಧಾರದ ಮೇಲೆ ಗಟ್ಟಿಯಾಗಿ ಕಟ್ಟಿಕೊಳ್ಳಬೇಕು ಎಂದರು.
ಸಮಯ, ವಯಸ್ಸು, ಮರಳಿ ಬರಲಾರದು. ಆದ್ದರಿಂದ ಸಮಾಜ ಸೇವೆಯನ್ನು ಮಾಡಿ ಜೀವನ ಸಾರ್ಥಕತೆ ಮಾಡಿಕೊಳ್ಳಬೇಕು. ಜೀವನದಲ್ಲಿ ಕಷ್ಟಗಳು ಬಂದೇ ಬರುತ್ತವೆ. ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಹತ್ತಬೇಕು ಎಂದು ಮಾರ್ಮಿಕವಾದ ನುಡಿಗಳನ್ನು ಆಡಿದರು.
ಈ ಸಂದರ್ಭದಲ್ಲಿ ಗ್ರಾಮದ ವತಿಯಿಂದ ವಿ. ಎಂ. ಸಿಂದಗಿ ಹಾಗೂ ಅವರ ಧರ್ಮಪತ್ನಿ ಪರಿಮಳ ಸಿಂದಗಿ ದಂಪತಿಗಳನ್ನು ಸನ್ಮಾನಿಸಲಾಯಿತು.
ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೀರ್‌ಪಟೇಲ್ ಪಾಟೀಲ್, ಮಾತನಾಡಿ ಸ್ಮಾರ್ಟ್ ಬೋರ್ಡ್ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅದರಲ್ಲೂ ಸರಕಾರಿ ಪ್ರೌಢಶಾಲೆಗಳಲ್ಲಿ ಅತಿ ಅಗತ್ಯ. ಹಿರಿಯರು, ಶಿಕ್ಷಕರು, ಪಾಲಕರು ಮಕ್ಕಳಿಗೆ ಸಂಸ್ಕಾರಗಳನ್ನು ನೀಡಿ ಅವರ ಭವಿಷ್ಯವನ್ನ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಕರೆಕೊಟ್ಟರು.
ಶಾಲೆಯ ಎಸ್. ಡಿ. ಎಂ.ಸಿ ಅಧ್ಯಕ್ಷ ಎಸ್. ಎಂ. ಶಿರಾಳಶೆಟ್ಟಿ ಮಾತನಾಡಿ ಶಾಂತವಾಗಿ ಓದಿ, ಶಿಸ್ತಿನಿಂದ ಓದಿ, ಶಿಸ್ತನ್ನ ಜೀವನದ ಭಾಗವನ್ನಾಗಿ ಮಾಡಿಕೊಂಡು, ಪರೀಕ್ಷೆಗೆ ಸಿದ್ಧರಾಗಿ, ತಂದೆ- ತಾಯಿ, ಗ್ರಾಮದ ಕೀರ್ತಿಯನ್ನು ಹೆಚ್ಚಿಸಿ ಎಂದು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಎಲ್. ಟಿ. ಮುಲ್ಲಾ, ಎಸ್. ಎಸ್. ಜತ್ತಿ, ರವೀಂದ್ರ ಝಳಕಿ, ವಿನಾಯಕ ಕಾಖಂಡಕಿ, ಎಚ್. ಎಲ್. ಕುಡಚಿ , ಎಸ್. ಆರ್. ಲಾಲನನವರ್, ಎ. ಜಿ. ಪೆಂಡಾರಿ, ಮಾನಂದ ಕೋಳಕೂರ, ಅರುಂಧತಿ ಸಿಂಧೂರ್, ರೇಖಾ ನಲವಡೆ, ಭಾರತಿ ಅಲ್ಲಿ, ವಂದನಾ ವಿ. ಕೆ,ಲ. ಇದ್ದರು.
ಪ್ರವೀಣ ಮಂಗಳೂರೆ ನಿರೂಪಿಸಿದರು, ರವೀಂದ್ರ ಬೆಣ್ಣೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ

ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಹಕ ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಮುಖ್ಯ
    In (ರಾಜ್ಯ ) ಜಿಲ್ಲೆ
  • ಹಿಪ್ಪರಗಿ ಜಲಾಶಯದಲ್ಲಿ ಇಳಿಮುಖವಾಗುತ್ತಿರುವ ಜೀವಜಲ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್ನೆಲ್ ಅಧಿಕಾರಿಗಳಿಂದ ಚಡಚಣ ಭಾಗದ ರೈತರಿಗೆ ಮಲತಾಯಿ ಧೋರಣೆ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.