Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಸಿಗೆ ಹಿನ್ನೆಲೆ: ಒಣ ಮೇವು ಸಂಗ್ರಹನಿರತ ರೈತರು
(ರಾಜ್ಯ ) ಜಿಲ್ಲೆ

ಬೇಸಿಗೆ ಹಿನ್ನೆಲೆ: ಒಣ ಮೇವು ಸಂಗ್ರಹನಿರತ ರೈತರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರ ಹಿಪ್ಪರಗಿ: ಬೇಸಿಗೆಯಲ್ಲಿ ಜಾನುವಾರಗಳಿಗೆ ಮೇವು ಕೊರತೆಯನ್ನು ನಿಗಿಸುವ ನಿಟ್ಟಿನಲ್ಲಿ ರೈತ ಸಮುದಾಯ ಮುಂದಾಗಿದ್ದು ಒಣಮೇವು ಸಂಗ್ರಹಕ್ಕೆ ಮುಂದಾಗಿದ್ದಾರೆ.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಡುಬೇಸಿಗೆಯ ಎರಡು ತಿಂಗಳು ಜಾನುವಾರಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯವಾದ ಒಣಮೇವನ್ನು ದೂರದ ಗ್ರಾಮಗಳಿಂದ ಖರೀದಿಸಿ ಟ್ರ್ಯಾಕ್ಟರ್ ಗಳ ಮೂಲಕ ತಂದು ಸಂಗ್ರಹಿಸುತ್ತಿದ್ದಾರೆ. ಆಕಳು, ಎತ್ತು, ಎಮ್ಮೆಗಳಿಗೆ ಅಗತ್ಯವಾದ ಒಣಮೇವು ಈಗ ವಿರಳವಾದ ಹಿನ್ನೆಲೆಯಲ್ಲಿ ಜೋಳ-ಮೆಕ್ಕೆಜೋಳದ ಒಣಮೇವನ್ನೇ ಒಂದು ಟ್ರ್ಯಾಲಿಗೆ ಹತ್ತು ಸಾವಿರದಂತೆ ೨೦ ಸಾವಿರ ಹಣ ನೀಡಿ ಎರಡೆರಡು ಟ್ರ್ಯಾಲಿ ಮೇವು ಕೊಳ್ಳುತ್ತಿದ್ದಾರೆ.
ಈ ಕುರಿತು ಚಾಂದಕವಟೆ ಗ್ರಾಮಕ್ಕೆ ಒಣಮೇವು ಸಾಗಿಸುತ್ತಿರುವ ರೈತರಾದ ಅಯ್ಯಣ್ಣ ಪೂಜಾರಿ, ಅಣವೀರಯ್ಯ ಹಿರೇಮಠ ಹಾಗೂ ನಾಗಪ್ಪ ಶಿವೂರ ಮಾತನಾಡಿ, ಎರಡು ಟ್ರ್ಯಾಲಿ ಒಣಮೇವು ೧೫ ದನಗಳಿಗೆ ಎರಡು ತಿಂಗಳು ಸಾಲಬಹುದು. ನೀರಿನ ಕೊರತೆಯಿಂದ ಹಸಿಮೇವು ಸಿಗುವುದು ದೂರದ ಮಾತು. ಮುಂದಿನ ಮಳೆಗಾಲದವರೆಗೆ ಅಗತ್ಯವಾದ ಮೇವನ್ನು ನಾವು ಮಾರ್ಸನಳ್ಳಿ ರೈತರಿಂದ ಖರೀದಿಸಿ ಸಂಗ್ರಹಿಸುತ್ತಿದ್ದೇವೆ. ಈ ಮೇವು ಮುಂದಿನ ಮಳೆಗಾಲದವರೆಗೆ ಸಾಲಬಹುದು ಎಂಬ ಭರವಸೆಯಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ವರ್ಷದಿಂದ ವರ್ಷಕ್ಕೆ ಜೋಳ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಜೋಳದ ಮೇವಿನ ಅಭಾವ ಎದ್ದು ಕಾಣುತ್ತಿದೆ. ಅದರಲ್ಲೂ ಈಗೀಗ ನಮ್ಮ ತಾಲ್ಲೂಕಿನಲ್ಲಿ ತೊಗರಿ, ಕಬ್ಬು ಬೆಳೆಯುವ ರೈತರು ಹೆಚ್ಚಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಸಿರು ಮೇವಿಗೆ ಕೊರತೆಯಿಲ್ಲ. ಆದರೆ ಬೇಸಿಗೆಯ ಮೂರು ತಿಂಗಳು ದನಕರುಗಳು ಮೇವಿಗಾಗಿ ಅಲೆಯುವಂತಾಗುತ್ತದೆ. ಆದ್ದರಿಂದ ಬಹುತೇಕ ರೈತರು ತಮ್ಮಲ್ಲಿಯ ದನಕರುಗಳನ್ನು ಮಾರಲು ಮುಂದಾಗುತ್ತಾರೆ. ಇನ್ನೂ ನಮ್ಮಂಥ ರೈತರು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಮೊದಲೇ ಮೇವು ಸಂಗ್ರಹಣೆಗೆ ಮುಂದಾಗುತ್ತೇವೆ. ಬೇಸಿಗೆ ಸಮಯದಲ್ಲಿ ಸರಕಾರ ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿ ಮೇವು ನೀಡಿದರೇ ರೈತರಿಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಮುಳಸಾವಳಗಿ ಗ್ರಾಮದ ರೈತರಾದ ಬಸವರಾಜ ಕಲ್ಲೂರ ಸಾಹೇಬಗೌಡ ಬಿರಾದಾರ, ಶಿವಶರಣ ಸಿನ್ನೂರ, ಮಲ್ಲು ಕುಕನೂರ, ಮುತ್ತು ನಾಯ್ಕೋಡಿ, ಚನ್ನಪ್ಪ ಕಾರಜೋಳ, ಮಹಾದೇವಪ್ಪ ಭಂಟನೂರ(ನಿವಾಳಖೇಡ), ಶ್ರೀಶೈಲ ಕಬಾಡಗಿ(ಕಡ್ಲೇವಾಡ ಪಿಸಿಎಚ್).

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.