ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ ಎದುರಿಸಲು ಪರೀಕ್ಷಾ ಕೇಂದ್ರದ ವತಿಯಿಂದ ವಿಭಿನ್ನ ರೀತಿಯಲ್ಲಿ ಸ್ವಾಗತವನ್ನು ಕೋರಲಾಯಿತು.
ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಪ್ರಥಮ ಭಾಷೆ ಕನ್ನಡ ವಿಷಯ ದಿನದಂದು ವಿಧ್ಯಾರ್ಥಿಗಳಿಗೆ ಆರತಿ ಬೆಳಗಿ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಂ.ಅವಟಿ ಮಾತನಾಡಿ ವಿಧ್ಯಾರ್ಥಿಗಳು ಭಯಮುಕ್ತವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡಲು ಅವಕಾಶವಿಲ್ಲ. ಇಡೀ ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳು ಸಿಸಿ ಕ್ಯಾಮರಾ ನಿಗಾದಲ್ಲಿರುವದು. ಶಾಂತತೆಯಿಂದ ಪ್ರಶ್ನೆ ಪತ್ರಿಕೆಯನ್ನು ಅರ್ಥೈಸಿಕೊಂಡು ಉತ್ತರಗಳನ್ನು ಬರೆದು ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ವಿಧ್ಯಾರ್ಥಿಗಳಿಗೆ ದೈರ್ಯ ತುಂಬಿದರು.
ಪ್ರತಿ ವಿಧ್ಯಾರ್ಥಿಗಳಿಗೆ ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಪರೀಕ್ಷಾ ಕೇಂದ್ರದ ಹೊರಗೆ ಸಾರ್ವಜನಿಕರಿಂದ ಯಾವುದೇ ತೊಂದರೆಯಾಗದಂತೆ ಸುಸೂತ್ರವಾಗಿ ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ಉಪ ಅಧಿಕ್ಷಕರು ಬಿ.ಎಂ.ಬಡಿಗೇರ, ಕಸ್ಟೋಡಿಯನ್ ಸಿ.ಎಲ್.ಪಾಟೀಲ್, ಸಂಸ್ಥೆಯ ಮುಖ್ಯೋಪಾಧ್ಯಾಯ ಚಿದಾನಂದ ಅವಟಿ, ಎಂ.ಡಿ. ಪಡಂದಾರ, ಬಿ.ಸಿ.ನಾವಿ, ಆನಂದ ಝಂಡೆ, ಗಜಾನಂದ ಜುಂಜರವಾಡ, ಎಸ್.ಎನ್.ಬಾಗಲಕೋಟ ಇತರರಿದ್ದರು.

