Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾಮೃತ್ಯುಂಜಯ ಹೋಮ: ಗುಂಡಗಿ ಸಿದ್ದೇಶ್ವರ ದೇವರ ಸ್ಮರಣೆ
(ರಾಜ್ಯ ) ಜಿಲ್ಲೆ

ಮಹಾಮೃತ್ಯುಂಜಯ ಹೋಮ: ಗುಂಡಗಿ ಸಿದ್ದೇಶ್ವರ ದೇವರ ಸ್ಮರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಮೀಪದ ಯಲಗೂರು ಗ್ರಾಮದಲ್ಲಿ ಶ್ರೀ ಗುಂಡಗಿ ಸಿದ್ದೇಶ್ವರ ದೇವಸ್ಥಾನದಲ್ಲಿ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ನಾನಾ ಹೋಮ ಹವನ, ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದವು.
ಬುಧವಾರ, ಸರ್ವದೋಷ ನಿವಾರಣೆಗಾಗಿ ಮಹಾಮೃತ್ಯುಂಜಯ ಹೋಮ, ಪಂಚ ಮಹಾ ರುದ್ರಾಭಿಷೇಕ, ನವಗ್ರಹ ಹೋಮ, ಗಣ ಹೋಮ ಸೇರಿದಂತೆ ನಾನಾ ಹೋಮಗಳು ಇಡೀ ದಿನ ಬಾಗಲಕೋಟೆಯ ಸಂತೋಷ ಗೋಟೂರ ಅವರ ನೇತೃತ್ವದಲ್ಲಿ 10 ಕ್ಕೂ ಹೆಚ್ಚು ಅರ್ಚಕರು ನಡೆಸಿಕೊಟ್ಟರು.
ಗುರುವಾರ, ಬೆಳಿಗ್ಗೆ ಪುರ್ಣಾಹುತಿ ಹೋಮ, ಪಂಚ ಮಹಾ ರುದ್ರಾಭಿಷೇಕ, ಸಾವಿರಕ್ಕೂ ಅಧಿಕ ಜನರ ಸಾಮೂಹಿಕ ರುದ್ರ ಪಠಣ ಮತ್ತು ಮಹಾ ಮಂಗಾಳರತಿ ಜರುಗಿತು. ಇಡೀ ದಿನ ಅನ್ನಸಂತರ್ಪಣೆ ನಡೆಯಿತು.
ಬಾಗಲಕೋಟೆ ಭಾವಸಾರ ಕ್ಷತ್ರಿಯ ಸಮಾಜದ ಚೇರಮನ್ ಕೃಷ್ಣಾಜಿ ಅಂಬೋರೆ ಮಾತನಾಡಿ, ಕಪಾಟೆ ಮತ್ತು ಝಿಂಗಾಡೆ ಪರಿವಾರದ ಕುಲದೇವತೆಯಾದ ಗುಂಡಗಿ ಸಿದ್ದೇಶ್ವರನ ಲೀಲೆ ಅಪಾರ. ದೇಶದ ನಾನಾ ಕಡೆ ಹಂಚಿಹೋಗಿರುವ ಈ ಪರಿವಾರದವರು ವರ್ಷಕ್ಕೊಮ್ಮೆ ಜಾತ್ರೆಗೆ ಕೂಡುವುದು ಮೊದಲಿಂದಲೂ ನಡೆದುಕೊಂಡು ಬಂದ ಸಂಪ್ರದಾಯ ಎಂದರು.
ಬಾಗಲಕೋಟೆ ಶಕ್ತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ಧಾಯಪುಲೆ ಮಾತನಾಡಿ, ಯಲಗೂರದಲ್ಲಿ ಗುಂಡಗಿ ಸಿದ್ದೇಶ್ವರ ಅಭಿವೃದ್ದಿ ಸಂಸ್ಥೆಯವರು ನಿರ್ಮಿಸುತ್ತಿರುವ ಸಮುದಾಯ ಭವನಕ್ಕೆ ಆರ್ಥಿಕ ಸಹಾಯ ನೀಡುವುದಾಗಿ ವಾಗ್ದಾನ ಮಾಡಿದರು.
ಫಂಡರಪುರದ ಯಶವಂತ ಬೋಧಲೆ ಬುವಾ ಮಹಾರಾಜ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಸಮುದಾಯ ಭವನಕ್ಕೆ ಭೂಮಿ ಪೂಜೆ
ದೇವಸ್ಥಾನದ ಆವರಣದಲ್ಲಿ 38 ಲಕ್ಷ ರೂಗಳಲ್ಲಿ ಸಮುದಾಯ ಭವನದ ನಿರ್ಮಾಣಕ್ಕೆ ಇದೇ ಸಂದರ್ಭದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಜರುಗಿತು. ಸರ್ಕಾರದ ಯಾವುದೇ ಅನುದಾನವಿಲ್ಲದೇ ನಾವೇ ಸೇರಿ ಈ ಸಮುದಾಯ ಭವನ ನಿರ್ಮಿಸುತ್ತಿದ್ದೇವೆ ಎಂದು ಗುಂಡಗಿ ಸಿದ್ದೇಶ್ವರ ಅಭಿವೃದ್ಧಿ ಸಂಘದ ಕಾರ್ಯದರ್ಶಿ ವಾಸುದೇವ ಝಿಂಗಾಡೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜ್ಞಾನೇಶ್ವರ ಕಪಾಟೆ, ಕಾರ್ಯದರ್ಶಿ ವಾಸುದೇವ ಝಿಂಗಾಡೆ, ಸುನಿಲ ಕಪಾಟೆ, ಶಿರಿಷಕುಮಾರ ಝಿಂಗಾಡೆ, ಸಂಜು ಝಿಂಗಾಡೆ, ಸುನಿಲ ಕಪಾಟೆ, ರವಿ ಝಿಂಗಾಡೆ, ಸತೀಶ ಝಿಂಗಾಡೆ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ನಾನಾ ಕಡೆಯಿಂದ ಸಹಸ್ರಾರು ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.