Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿಲ್ಲದ ನಕಲು!
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿಲ್ಲದ ನಕಲು!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವೆಬ್ ಕಾಸ್ಟಿಂಗ್ ಅಳವಡಿಸಿದ್ದರೂ ನಕಲು ಮಾಡುತ್ತಿರುವ ವಿದ್ಯಾರ್ಥಿಯನ್ನು ಹಿಡಿಯುವಲ್ಲಿ ಪರೀಕ್ಷಾ ಕರ್ತವ್ಯ ನಿರತ ಸಿಬ್ಬಂದಿ ವಿಫಲರಾದ ಘಟನೆ ಇಲ್ಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಪರೀಕ್ಷೆ ಬರೆಯುತ್ತಿರುವ ಹಲವು ವಿದ್ಯಾರ್ಥಿಗಳ ಪೈಕಿ ಕೆಲವು ವಿದ್ಯಾರ್ಥಿಗಳು ಅಲ್ಲಲ್ಲಿ ನಕಲು ಮಾಡುತ್ತಿರುವದು ಸಾಮಾನ್ಯವಾಗಿತ್ತು. ನಕಲು ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿ ತಿಳಿದಾಗ ವೆಬ್‌ಕಾಸ್ಟಿಂಗ್ ವೀಕ್ಷಿಸುತ್ತಿರುವ ಸಿಬ್ಬಂದಿ ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳಿಗೆ ತಿಳಿಸಿದಾಗ ಚೀಟಿಯನ್ನು ಹೊರಗೆ ಎಸೆಯುವಂತೆ ತಿಳಿಸಿ, ಎಸೆದು ಬಂದ ಬಳಿಕ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಇನ್ನು ಒಂದು ಪರೀಕ್ಷಾ ಕೇಂದ್ರದಲ್ಲಂತೂ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿರುವದಾಗಿ ತಿಳಿದಿದ್ದರೂ ಸಂಬಂಧಿಸಿದ ಸೆಂಟರ್ ನ ಮುಖ್ಯಸ್ಥರಿಗೆ ನಕಲು ಮಾಡುತ್ತಿರುವ ವಿದ್ಯಾರ್ಥಿಯ ಕೊಠಡಿ ಸಿಗಬೇಕಾದರೆ ೨೦ ನಿಮಿಷಗಳ ಕಾಲ ಬೇಕಾಯ್ತು, ಅಲ್ಲಿಗೆ ಪರೀಕ್ಷೆಯ ಅವಧಿ ಮುಗಿದೇ ಹೋಗಿತ್ತು.
ಅಧಿಕಾರಿಗಳು ಪರೀಕ್ಷೆಗಳನ್ನು ನಕಲು ಮುಕ್ತ ಮಾಡಬೇಕೆಂದು ಹಲವು ತಂತ್ರಜ್ಞಾನಗಳನ್ನು ಬಳಸಿದ್ದರೂ ನೀವು ಚಾಪೆ ಕೆಳಗೆ ತೂರಿದರೆ ನಾವು ರಂಗೋಲೆ ಕೆಳಗೆ ತೂರ್ತೀವಿ ಅನ್ನೋತರ ನಕಲುಗಳು ನಡೆಯುತ್ತಿರೋದು ಮಾತ್ರ ನಿಂತಿಲ್ಲ. ಇದೆಲ್ಲ ನಿಲ್ಲಬೇಕಾದರೆ ತಪ್ಪಿತಸ್ಥರ ವಿರುದ್ಧ ಹಿರಿಯ ಅಧಿಕಾರಿಗಳು ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ.

ವೆಬ್ ಕಾಸ್ಟಿಂಗ್ ವೀಕ್ಷಣೆ ಅಳವಡಿಕೆಯಲ್ಲಿ ಯಡವಟ್ಟು
ಇಲ್ಲಿನ ೧೯ ಪರೀಕ್ಷಾ ಕೇಂದ್ರಗಳ ಪೈಕಿ ಕೇವಲ ೮ ಕಂಪ್ಯೂಟರ್‌ಗಳನ್ನು ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಿ ಅದರಲ್ಲೂ ಎರಡು ಕಂಪ್ಯೂಟರ್‌ಗಳನ್ನು ಪ್ರತ್ಯೇಕವಾಗಿರಿಸಿ ಶಿಕ್ಷಣ ಇಲಾಖೆ ಯಡವಟ್ಟು ಮಾಡಿಕೊಂಡು ಸಂಶಯಕ್ಕೆ ದಾರಿ ಮಾಡಿ ಕೊಟ್ಟಿದೆ. ಅದರಲ್ಲೂ ಕೆಲವು ಕಂಪ್ಯೂಟರ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಕೆಲಕಾಲ ಸತಾಯಿಸಿದ ಘಟನೆಗಳು ನಡೆದವು. ಮತ್ತು ೬ ಕಂಪ್ಯೂಟರ್‌ಗಳಿದ್ದ ಕೊಠಡಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ಪ್ರತ್ಯೇಕವಾಗಿರಿಸಿದ್ದರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ.

ಮಾಧ್ಯಮದವರಿಗೆ ಮಾಹಿತಿ ನೀಡದ ಅಧಿಕಾರಿ

ಪರೀಕ್ಷೆಗಳು ಮುಗಿದ ಬಳಿಕ ಪರೀಕ್ಷಾ ಕೇಂದ್ರಗಳ ವೆಬ್‌ಕಾಸ್ಟಿಂಗ್ ವೀಕ್ಷಿಸಿದ ಅಧಿಕಾರಿಗಳು ಯಾವ ಕೇಂದ್ರಗಳಲ್ಲಿ ನಕಲುಗಳು ನಡೆದಿವೆ ಎಂಬ ಬಗ್ಗೆ ನೀಡಿದ ವರದಿಯ ಪ್ರತಿಯನ್ನು ’ಉದಯರಶ್ಮಿ’ ಪತ್ರಿಕೆ ಕೋರಲಾಗಿ ಸಂಬಂಧಿಸಿದ ಅಧಿಕಾರಿ ಯು.ಬಿ.ಧರಿಕಾರ ಮಾಹಿತಿ ನೀಡಲಿಲ್ಲ. ಮೇಲಾಧಿಕಾರಿಗಳ ಅನುಮತಿ ಪಡೆದು ನೀಡುತ್ತೇನೆ ಎಂದು ಉತ್ತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಅವರಿಗೆ ನೀಡುವಂತೆ ಕೋರಿದರೆ ಧರಿಕಾರ ಅವರು ನೀಡಬೇಕು ಎಂದು ಉತ್ತರಿಸಿ. ಪರೀಕ್ಷೆಯ ತಾಲೂಕು ನೂಡಲ್ ಗೆ ಕೇಳಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದರು.
ಈ ಎಲ್ಲ ಅಧಿಕಾರಿಗಳು ಮಾಧ್ಯಮದವರಿಗೆ ಉದ್ದೇಶಪೂರ್ವಕವಾಗಿ ಮಾಹಿತಿ ನೀಡಲಿಲ್ಲ ಎಂಬುದು ಸ್ಪಷ್ಟವಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.