Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತರ ಕರ್ನಾಟಕ ನಾಯಕರಿಗೆ ಕೇವಲ ತುಪ್ಪ ಸವರುವ ಕೆಲಸ ಮಾಡಲಾಗ್ತಿದೆ :ಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಉತ್ತರ ಕರ್ನಾಟಕ ನಾಯಕರಿಗೆ ಕೇವಲ ತುಪ್ಪ ಸವರುವ ಕೆಲಸ ಮಾಡಲಾಗ್ತಿದೆ :ಸಂಗನಬಸವ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಪಂಚಮಸಾಲಿ ಸಮಾಜ ಮುಖಂಡರ ಆಗ್ರಹ

ವಿಜಯಪುರ: ಉತ್ತರ ಕರ್ನಾಟಕದವರಿಗೆ ಡಿಸಿಎಂ ಸ್ಥಾನ ಕೊಡಬೇಕು, ಈ ಎಲ್ಲ ಹುದ್ದೆಗಳು ದಕ್ಷಿಣ ಕರ್ನಾಟಕ ಭಾಗದವರಿಗೆ ಸೀಮಿತವೇ? ಈ ಹಿಂದಿನ ಸರ್ಕಾರದಲ್ಲಿರುವಂತೆ ಮೂರು ಡಿಸಿಎಂ ಹುದ್ದೆ ಸೃಷ್ಠಿಸಬೇಕು ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಒತ್ತಾಯಿಸಿದರು.
ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದವರಿಗೆ ಮಾತ್ರ ಡಿಸಿಎಂ ಮೊದಲಾದ ಪ್ರಭಾವಿ ಹುದ್ದೆಗಳು ಸೀಮಿತವಾಗಬಾರದು. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೇವಲ ತುಪ್ಪ ಸವರುವ ಕೆಲಸ ಮಾಡಲಾಗುತ್ತಿದೆ ಎಂಬ ಆತಂಕ ಕಾಡುತ್ತಿದೆ. ಕೂಡಲೇ ಡಿಸಿಎಂ ಹುದ್ದೆ ಸೃಷ್ಠಿಸಿ, ಅದರಲ್ಲೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದರು.
ಹಿರಿಯ ಶಾಸಕರಾಗಿರುವ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಇದು ಜನತೆಯ ಆಗ್ರಹ ಸಹ ಹೌದು. ಸಮಸ್ತ ಮಠಾಧೀಶರು ಸಹ ಇದೇ ನಿಲುವು ಹೊಂದಿದ್ದಾರೆ. ಶಿವಾನಂದ ಪಾಟೀಲ ಕೇವಲ ಪಂಚಮಸಾಲಿ ಸಮಾಜಕ್ಕೆ ಮಾತ್ರ ಸೀಮಿತವಲ್ಲ, ಎಲ್ಲ ಸಮಾಜದವರು ಅವರು ಡಿಸಿಎಂ ಆಗಲಿ ಎನ್ನುವ ಆಶಯ ಹೊಂದಿದ್ದಾರೆ ಎಂದರು.
ಈ ಹಿಂದೆ ಆರೋಗ್ಯ ಖಾತೆ ನಿಭಾಯಿಸಿದ ಶಿವಾನಂದ ಪಾಟೀಲರು ರಾಜ್ಯದಾದ್ಯಂತ ಆಸ್ಪತ್ರೆಗಳಿಗೆ ಹೊಸ ಜೀವ, ಸಿಬ್ಬಂದಿ ನೇಮಕಾತಿ, ಹೊಸ ಕಟ್ಟಡಗಳ ನಿರ್ಮಾಣದ ಕಾರ್ಯ ಕೈಗೊಂಡಿದ್ದಾರೆ. ಬಸವನ ಬಾಗೇವಾಡಿ ಕ್ಷೇತ್ರದ ಮನೆ-ಮನೆಗೂ ಭೇಟಿ ನೀಡಿ ಕುಂದುಕೊರತೆಯನ್ನು ಆಲಿಸಿ ಅದನ್ನು ಪರಿಹರಿಸುವ ಏಕೈಕ ಶಾಸಕರಾಗಿದ್ದಾರೆ ಎಂದರು.
ಪಂಚಮಸಾಲಿ ಸಮಾಜದ ಮುಖಂಡ ಮಲ್ಲನಗೌಡ ಪಾಟೀಲ ಮಾತನಾಡಿ, ಆರು ಬಾರಿ ಶಾಸಕರಾಗಿರುವ ಹಾಗೂ ಸಹಕಾರಿ ಧುರೀಣರಾಗಿರುವ ಶಿವಾನಂದ ಪಾಟೀಲರಿಗೆ ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಪಂಚಮಸಾಲಿ ಸಮಾಜಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಬಾರದು. ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ಸಮಸ್ತ ಪಂಚಮಸಾಲಿ ಸಮಾಜದ ಹಕ್ಕೊತ್ತಾಯವಾಗಿದೆ. ಪಂಚಮಸಾಲಿ ಸಮಾಜಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡಬೇಡಿ. ಸುಮ್ಮನೆ ಕುಳಿತರೆ ಅವಕಾಶ ಸಿಗುವುದಿಲ್ಲ. ಹೀಗಾಗಿ ನಮ್ಮ ಕೂಗು ಪ್ರಬಲಗೊಳಿಸುತ್ತಿದ್ದೇವೆ. ಒಂದು ವೇಳೆ ಈ ಬಾರಿಯೂ ಅವಕಾಶ ತಪ್ಪಿದರೆ ತನ್ನ ತಪ್ಪನ್ನು ತಾನೇ ಅನುಭವಿಸಬೇಕಾಗುತ್ತದೆ, ಈ ಪರಿಸ್ಥಿತಿಯನ್ನು ಸೃಷ್ಟಿಸಿಕೊಳ್ಳದಿದ್ದರೆ ಒಳಿತು ಎಂದರು.
ಇಡೀ ಪಂಚಮಸಾಲಿ ಸಮುದಾಯ ಈ ಒತ್ತಾಯಕ್ಕೆ ಬದ್ಧವಾಗಿದೆ. ಪಂಚಮಸಾಲಿ ಸಮಾಜದ ಕೂಗಿಗೆ ಕಾಂಗ್ರೆಸ್ ಪಕ್ಷ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಸಹಕಾರಿ ಧುರೀಣ ಗುರುಶಾಂತ ನಿಡೋಣಿ ಮಾತನಾಡಿ, ಶಿವಾನಂದ ಪಾಟೀಲ ಅಭಿವೃದ್ಧಿ ಪರ ಹಾಗೂ ರೈತಪರ ರಾಜಕಾರಣಿ. ಈ ಹಿಂದೆ ಆರೋಗ್ಯ ಸಚಿವರಾಗಿ ಜಿಲ್ಲಾ ಆಸ್ಪತ್ರೆ ಪ್ರಗತಿ, ಟ್ರಾಮಾ ಸೆಂಟರ್ ಮೊದಲಾದವುಗಳನ್ನು ಆರಂಭಿಸಿದ್ದರು. ನೀರಾವರಿ ಯೋಜನೆಗಳು ಸಾಕಾರಗೊಳ್ಳಲು ಚಾಣಕ್ಷ ರಾಜಕಾರಣಿ ಎಂದೇ ಹೆಸರಾಗಿರುವ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದರು.
ಸಂಗಮೇಶ ಶರಣರು, ಗುರುಶಾಂತ ನಿಡೋಣಿ, ಮಲ್ಲನಗೌಡ ಪಾಟೀಲ, ರಾಜುಗೌಡ, ಸೋಮನಗೌಡ ಪಾಟೀಲ, ಮಲ್ಲು ದೇಸಾಯಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS kpcc shivanand patil udaya rashmi
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.