ಮುಸ್ಲಿಂ ಗುತ್ತಿಗೆ ಮೀಸಲಾತಿ, ೧೮ ಶಾಸಕರ ಅಮಾನತು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂ ಗುತ್ತಿಗೆ ಮೀಸಲಾತಿ ಹಾಗೂ ಅಧಿವೇಶನದಲ್ಲಿ ೧೮ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಅಂಬೇಡ್ಕರ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಕಲ್ಪಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ರಾಜ್ಯ ಸರ್ಕಾರದ ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಅಭಿವೃದ್ಧಿ ಕೆಲಸ ಮಾಡದೆ ಸಚಿವರು ಶಾಸಕರಗಳ ವಿರುದ್ಧ ಹನಿಟ್ರ್ಯಾಪ್ ಮಾಡುತ್ತಿರುವುದು ನಾಚಿಗೇಡಿತನದ ಸಂಗತಿಯಾಗಿದೆ ಎಂದು ಟೀಕಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಡಾ.ಬಾಬಾಸಾಹೇಬ ಅಂಬೇಡ್ಕರ ರಚಿಸಿರುವ ಸಂವಿಧಾನದ ಶೆಡ್ಯೂಲ್ನಲ್ಲಿ ಇಲ್ಲದ ಜನರಿಗೆ ಮೀಸಲಾತಿ ಕಲ್ಪಸುವ ಮೂಲಕ ಡಾ.ಅಂಬೇಡ್ಕರ ಅವರು ರಚಿಸಿದ ಸಂವಿಧಾನಕ್ಕೆ ಅಪಮಾನ ಮಾಡುತ್ತಿದೆ. ಮೇಲ್ನೋಟಕ್ಕೆ ೪% ಕಾಮಗಾರಿ ಗುತ್ತಿಗೆಗಳಲ್ಲಿ ಮೀಸಲಾತಿ ಕೊಡುವ ಕಾನೂನು ಮಾಡಿರಬಹುದು. ಆದರೆ ಪರಿಣಾಮ ಮೀಸಲಾತಿ ಚರ್ಚೆಗೆ ಧಕ್ಕೆ ತರುವಂತಹ ಹುನ್ನಾರಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ ಎಂದು ಆರೋಪಿಸಿದರು.
ಮೀಸಲಾತಿ ಯಾರಿಗೆ ಸಿಗಬೇಕು ಯಾರಿಗೆ ಸಿಗಬಾರದು ಚರ್ಚೆಗೆ ಹುಟ್ಟುಹಾಕುವ ದುರುದ್ದೇಶದೊಂದಿಗೆ ಶೆಡ್ಯೂಲ್ನಲ್ಲಿ ಇಲ್ಲದೇ ಇರುವಂತಹವರಿಗೆ ಮೀಸಲಾತಿ ಕೊಡುವ ಕೆಲಸ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರುಗಳ ಆತಂರಿಕ ಜಗಳದಿಂದ ಮೇಲೆ ಬರುವ ಸಲುವಾಗಿ ಇದನ್ನು ಊರುಗೋಲನ್ನಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆಂದು ಆರೋಪಿಸಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸ್ವಪ್ನಾ ಕಣಮುಚನಾಳ ಮಾತನಾಡಿದರು.
ಸಂಜೀವ ಐಹೊಳೆ, ಭೀಮಾಶಂಕರ ಹದನೂರ, ಚಿದಾನಂದ ಚಲವಾದಿ, ಉಮೇಶ ಕೋಳಕೂರ, ಅನಿಲ ಜಮಾದಾರ, ಮಹೇಂದ್ರ ನಾಯಕ, ರಾಜಕುಮಾರ ಸಗಾಯಿ, ವಿಜಯ ಕೂಡಿಗನೂರ, ಭೀಮಶಿಂಗ ರಾಠೋಡ, ಮಲ್ಲಿಕಾರ್ಜುನ ಜೋಗೂರ, ಎಸ್.ಎ.ಪಾಟೀಲ, ರವಿಕಾಂತ ಬಗಲಿ, ರಾಜು ಬಿರಾದಾರ, ಪ್ರಭುಗೌಡ ಅಸ್ಕಿ, ವಿನಾಯಕ ಗೌಳಿ, ವಿಠ್ಠಲ ಹೊಸಪೇಟ, ಸಂಪತ ಕೊವಳ್ಳಿ, ಈರನಗೌಡ ಬಿರಾದಾರ, ಅಶೋಕ ರಾಠೋಡ, ಸಿದಗೊಂಡ ಬಿರಾದಾರ, ರವಿ ಬಿರಾದಾರ, ಸುರೇಶ ಬಿರಾದಾರ, ಶೀತಲಕುಮಾರ ಓಗಿ, ಪಾಂಡು ದೊಡಮನಿ, ಕೃಷ್ಣಾ ಗುನ್ನಾಳಕರ, ವಿಜಯ ಜೋಶಿ, ಬಸವರಾಜ ಬೈಚಬಾಳ, ಜಗದೀಶ, ಪ್ರದೀಪ ಚಲವಾದಿ, ಭರತ ಕೋಳಿ, ಮಧು ಬಿ ಬಿರಾದಾರ ಶರಣ ದಳವಾಯಿ ಎಲ್.ಆರ್.ಅಂಗಡಿ, ಗೀತಾ, ಲಕ್ಷ್ಮಿ ಕನ್ನೊಳ್ಳಿ, ರಾಜಲಕ್ಷ್ಮಿ ಪರ್ವವತಿಕರ, ಪುಚ್ಪಾ, ಛಾಯಾ ಮೀಶೆ, ಗೀತಾ ಕುಗ್ಗನರ, ಸಾವಿತ್ರಿ, ಭಾರತಿ ಸೂರ್ಯವಶಂತಿ, ಗುರುದೇವಿ, ತರಡಿ, ವಿಜಯಲಕ್ಷ್ಮಿ ಸೇರಿದಂತೆ ಹಲವರು ಇದ್ದರು.

