ಹಿರಿಯ ಸಿವ್ಹಿಲ್ ನ್ಯಾಯಧೀಶರ ಹಾಗೂ ಸದಸ್ಯ ಕಾರ್ಯದರ್ಶಿ, ಕಾನೂನು ಸೇವೆಗಳ ಪ್ರಾಧಿಕಾರ ಅರವಿಂದ ಹಾಗರಗಿ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ತಾವೆಲ್ಲರೂ ಕಂಕಣಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಅರವಿಂದ ಹಾಗರಗಿ ಕರೆ ನೀಡಿದರು.
ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಸೋಮವಾರ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಭಾರತದಲ್ಲಿ ವಿಸ್ತಾರವಾಗುತ್ತಿರುವ ಅನೇಕ ರೋಗಗಳಲ್ಲಿ ಈ ಕ್ಷಯ ರೋಗ ಒಂದು. ಇದರ ನಿರ್ಮೂಲನೆಗೆ ತಿಳುವಳಿಕೆ ಅತ್ಯಗತ್ಯವಾಗಿದೆ. ಕ್ಷಯಮುಕ್ತ ಗ್ರಾಮ ಪಂಚಾಯತ್ಗಳಂತೆಯೇ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಒಟ್ಟು ೭೯ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಯಾಗಿ ಆಯ್ಕೆಯಾಗಿದ್ದು, ಗ್ರಾಮ ಪಂಚಾಯತ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ವ್ಯಾಪ್ತಿಗೆ ಬರುವ ಆಯ್ಕೆಯಾದ ವೈದ್ಯಧಿಕಾರಿಗಳಿಗೆ ಬೆಳ್ಳಿ, ಕಂಚಿನ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ವಿಶ್ವ ಆರೋಗ್ಯ ಸಂಸ್ಥೆಯ ಎನ್.ಟಿ.ಇ.ಪಿ. ಸಲಹೆಗಾರ ಡಾ. ಸತೀಶ ಘಾಟಗೆ ಅವರು ಕ್ಷಯ ರೋಗ ನಿಯಂತ್ರಣ ಕುರಿತು ಅತಿಥಿ ಉಪನ್ಯಾಸ ನೀಡಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮಲ್ಲನಗೌಡ ಬಿ. ಬಿರಾದಾರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ನಿರೂಪಿಸಿದರು. ಇಮಾಮಸಾಬ ಕಲಬುರ್ಗಿ ವಂದಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷಕರು, ತಾಲೂಕು ಆರೋಗ್ಯಧಿಕಾರಿಗಳು, ಪಂಚಾಯತಿಯ ಅಭಿವೃದ್ಧಿ ಅಧಿಕರಿಗಳು. ಜಿಲ್ಲೆಯ ವಿವಿಧ ನರ್ಸಿಂಗ ಕಾಲೇಜಿನ ಮುಖ್ಯಸ್ಥರು, ಆಶಾ ಕಾರ್ಯಕರ್ತೆಯರು, ಆಶಾ ಅಂಗಣವಾಡಿ ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ವಿವಿಧ ವಿಭಾಗದ ಸಿಬ್ಬಂದಿಗಳು, ಉಪಸ್ಥಿತರಿದ್ದರು.

“ಮುಂದಿನ ದಿನಗಳಲ್ಲಿ ಜಿಲ್ಲೆಯ ೨೧೧ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಗಳನ್ನಾಗಿ ಘೋಷಿಸುವ ನಿಟ್ಟಿನಲ್ಲಿ ರೂಪು ರೇಷೆಗಳನ್ನು ಹಾಕಿಕೊಂಡು ಗುರಿ ಸಾಧಿಸಲು ಕಾರ್ಯನಿರ್ವಹಿಸಲಾಗುತ್ತಿದೆ.”
– ಡಾ.ಸಂಪತ್ ಗುಣಾರಿ
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

