Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹನೀಯರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಮಹನೀಯರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಅಣ್ಣ ಬಸವಣ್ಣನವರ ಚಿಂತನೆಗಳು ಇಂದು ಹೆಚ್ಚು ಪ್ರಸ್ತುತವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿಯಲ್ಲಿ ವಿಶ್ವರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿ ಅವರು ಮಾತನಾಡಿದರು.
ಅಂಬೇಡ್ಕರ್ ಮತ್ತು ಬಸವಣ್ಣನರು ಅಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತರಾಗಿದ್ದಾರೆ. ಮಹನೀಯರ ಚಿಂತನೆಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಎಲ್ಲರೂ ಭವ್ಯ ಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು. ಬಸವಣ್ಣ ಮತ್ತು ಬಸವಾದಿ ಶರಣರು ಜಗತ್ತಿನ ಪ್ರಥಮ ಸಂಸತ್ತು ಅನುಭವ ಮಂಟಪ ಸ್ಥಾಪಿಸಿ ಮಾನವೀಯತೆ ಮತ್ತು ಸಮಾನತೆ ಸಾರಿದರು. ಅಲ್ಲದೇ, ಅಸ್ಪಷ್ಯತೆ, ಮೂಢನಂಬಿಕೆ, ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದರು. ಅಂದು ತಮ್ಮ ಚಿಂತನೆಗಳನ್ನು ಕನ್ನಡ ಭಾಷೆಯಲ್ಲಿ ವಚನಗಳ ಮೂಲಕ ಜನರಿಗೆ ಮನದಟ್ಟು ಮಾಡಿ ಸಮಾಜದಲ್ಲಿ ಸುಧಾರಣೆಗೆ ನಾಂದಿ ಹಾಡಿದ್ದಾರೆ ಎಂದು ಅವರು ಹೇಳಿದರು.
ಅಂಬೇಡ್ಕರ್ ರಚಿತ ಸಂವಿಧಾನ ವಿಶ್ವಶ್ರೇಷ್ಠವಾಗಿದೆ. ಬಸವಾದಿ ಶರಣರ ವಚನಗಳ ಆಶಯಗಳು ಸಂವಿಧಾನದಲ್ಲಿವೆ. ಅಂಬೇಡ್ಕರ್ ಬೇರೆಯಲ್ಲ, ಬಸವಣ್ಣನವರು ಬೇರೆಯಲ್ಲ. ಇವರೆಲ್ಲರ ಚಿಂತನೆಗಳು ಒಂದೇ ಆಗಿವೆ. ರಾಷ್ಟ್ರ ನಾಯಕರಾದ ಅಂಬೇಡ್ಕರ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಕ್ಕಮಹಾದೇವಿ, ಸಂಗೊಳ್ಳಿ ರಾಯಣ್ಣ ಮುಂತಾದ ಮಹನೀಯರು ಸಮಾಜದ ಸ್ವತ್ತು. ರಾಷ್ಟ್ರ ನಾಯಕರನ್ನು ಆಯಾ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಬಸವಣ್ಣ ಮತ್ತು ಅಂಬೇಡ್ಕರ ಅವರ ಮಾರ್ಗ ಮತ್ತು ವಿಚಾರಧಾರೆಯಲ್ಲಿ ನಡೆದರೆ ಮಾತ್ರ ದೇಶ ಹಾಗೂ ಸಮಾಜ ಅಭಿವೃದ್ಧಿಯಾಗಲಿದೆ ಎಂದು ಸಚಿವರು ಹೇಳಿದರು.
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಿದ್ದು, ಜಾತ್ಯತೀತತೆ ಮತ್ತು ಮಾನವೀಯತೆ ಮೌಲ್ಯಗಳ ಮೇಲೆ ಸಾಕಷ್ಟು ಪರಿಣಾಮ ಬೀರಿ ಬದುಕಲು ದಾರಿ ತೋರಿಸಿವೆ. ಅವರ ವಿಚಾರಗಳಾದ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಲ್ಲರಿಗೂ ದಾರಿದೀಪವಾಗಿವೆ. ಅಂಬೇಡ್ಕರ್ ಮಹಾ ಮಾನವತಾವಾದಿಯಾಗಿ ಸರ್ವರ ಏಳ್ಗಿಗೆಗಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಎಂ. ಬಿ. ಪಾಟೀಲ ಅವರು ಹೇಳಿದರು.
ಈ ಸಂದರ್ಭದಲ್ಲಿ ಅಂದಾನಯ್ಯ ಹಿರೇಮಠ, ಗುರುಬಸಯ್ಯ ಕಟಗೇರಿಮಠ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿ. ಪಂ. ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಜಿ. ಪಂ. ಮಾಜಿ ಸದಸ್ಯ ಕಲ್ಲಪ್ಪ ಕೊಡಬಾಗಿ, ಅಭಿಷೇಕ ಚಕ್ರವರ್ತಿ, ಡಾ. ಕೆ. ಎಚ್. ಮುಂಬಾರೆಡ್ಡಿ, ಡಿ. ಎಂ. ಚಲವಾದಿ, ಡಾ. ಕೌಸರ ಅತ್ತಾರ, ವಿ. ಎಚ್. ಬಿದರಿ, ಮಲ್ಲು ದಳವಾಯಿ, ಶಂಕರ ಹಾದಿಮನಿ, ರಮೇಶ ಬಸೆಟ್ಟಿ, ಶ್ರೀಕಾಂತ ಪತ್ತಾರ, ಸಿದ್ದಗೊಂಡ ನ್ಯಾಮಗೌಡ, ಕಲ್ಲಪ್ಪ ಕೊಡಬಾಗಿ, ರಮೇಶ ಹಾದಿಮನಿ, ಬಸವರಾಜ ಜೈನಾಪುರ, ದೇವೇಂದ್ರ ಹಾದಿಮನಿ, ಹಣಮಂತ ದೊಡಮನಿ, ಮಳೆಪ್ಪ ಬಸೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.