ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೩ ಗ್ರಾಮಗಳಲ್ಲಿ ಏಪ್ರಿಲ್ ೫ರ ಬೆಳಿಗ್ಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಅಂದು ವಿಜಯಪುರದ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಶಿರಗೂರ ಇನಾಂ ಗ್ರಾಮದ ಶ್ರೀ ಸದ್ಧಬೀರ ದೇವಸ್ಥಾನದಲ್ಲಿ, ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ವಾರ್ಡ ನಂ.೧೮ರ ಹಕೀಮ ಚೌಕನ ಗೋಲಗುಂಬಜ್ ಹತ್ತಿರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು, ಬರಟಗಿ ಗ್ರಾಮದ ಶ್ರೀ ಅಮೋಘ ಸಿದ್ದೇಶ್ವರ ದೇವಸ್ಥಾನದಲ್ಲಿ, ಬಸವನ ಬಾಗೇವಾಡಿಯ ಗ್ರೇಡ್-೨ ತಹಶೀಲ್ದಾರ ಹತ್ತರಕಿಹಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಬ್ಯಾಲ್ಯಾಳ ಗ್ರಾಮದ ಸಮುದಾಯ ಭವನದಲ್ಲಿ, ಕೊಲ್ಹಾರ ತಹಶೀಲ್ದಾರ ಮಟ್ಟಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಹುಲ್ಲೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ತಾಳಿಕೋಟಿಯ ತಹಶೀಲ್ದಾರ ತಾಳಿಕೋಟಿ ಪಟ್ಟಣದ ವಾರ್ಡ್ ನಂ. ೯ರ ಶ್ರೀ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಚಡಚಣ ಗ್ರೇಡ್-೨ ತಹಶೀಲ್ದಾರ ಕೊಂಕಣಗಾಂವ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನದಲ್ಲಿ, ಸಿಂದಗಿ ಗ್ರೇಡ್-೨ ತಹಶೀಲ್ದಾರ ಢವಳಾರ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ದೇವರ ಹಿಪ್ಪರಗಿ ಗ್ರೇಡ್-೨ ತಹಶೀಲ್ದಾರ ಸಲಾದಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಆಲಮೇಲ ತಹಶೀಲ್ದಾರ ಅವರು ಕಡ್ಲೇವಾಡ ಪಿ.ಎ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆಯೂ ಹಾಗೂ ಪಿಂಚಣಿ ಅದಾಲತನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

