ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿ ಆಡಳಿತಾಧಿಕಾರಿ ಬಾಗೇಶ ಮುರಡಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವರ್ತಮಾನ ಸವಾಲುಗಳ ನಡುವೆ ಕನ್ನಡ ಭಾಷೆ, ಜಗತ್ತಿನಲ್ಲಿ ಸು.೬೦೦೦ ಭಾಷೆಗಳಿದ್ದು, ಅದರಲ್ಲಿ ೪೦೦೦ಭಾಷೆಗಳಿಗೆ ಲಿಪಿಯೇ ಇಲ್ಲ. ಅದರಲ್ಲಿ ಕನ್ನಡ ಭಾಷೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ವಿಜಯಪುರದ ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿಯ ಆಡಳಿತಾಧಿಕಾರಿ ಬಾಗೇಶ ಮುರಡಿ ಹೇಳಿದರು.
ಸಿಂದಗಿ ಪಟ್ಟಣದ ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದನ್ನು ಮುಂದಿನ ಯುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮ ನಮ್ಮೆಲ್ಲರ ಮೇಲಿದೆ ಎಂದರು.
ಈ ವೇಳೆ ಮರಗೂರಿನ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಅಭಿಯಂತರ ಶ್ರೀಶೈಲ ಮಠಪತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿಯೂ ಕನ್ನಡ ಭಾಷೆಯ ಮಹತ್ವ ಕಡಿಮೆಯಾಗಿಲ್ಲ. ಮತ್ತು ಕನ್ನಡದ ಜ್ಞಾನ ಸಂಪತ್ತು ಅನನ್ಯವಾದದ್ದು, ಯುವಕರು ಈ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯವಶ್ಯಕ. ಕನ್ನಡ ಸಂಘವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ. ಇದರ ಸದುಪಯೋಗವನ್ನು ಎಲ್ಲ ಪ್ರಶಿಕ್ಷಣಾರ್ಥಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಅತಿಥಿಗಳನ್ನು ಎತ್ತಿನ ಬಂಡಿಯ ಮೆರವಣಿಗೆ, ಡೊಳ್ಳು, ಬಾಜಿ-ಭಜಂತ್ರಿ ಹಾಗೂ ಕುಂಭಮೇಳದೊಂದಿಗೆ ವೇದಿಕೆಗೆ ಕರೆತರಲಾಯಿತು. ಕನ್ನಡ ಸಂಘದ ಉದ್ಘಾಟನಾ ಸಮಾರಂಭವು ಗಮನ ಸೆಳೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯೆ ಜೆ.ಸಿ.ನಂದಿಕೋಲ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ಪ್ರಶಾಂತ ಕುಲಕರ್ಣಿ, ಸುಧಾಕರ ಚವ್ಹಾಣ, ಆರ್.ಎ.ಹಾಲಕೇರಿ, ಭಾಗ್ಯಜ್ಯೋತಿ ದಸ್ಮಾ, ನಾಜಿಯಾ ಮುಲ್ಲಾ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು. ಕನ್ನಡ ಸಂಘದ ಅಧ್ಯಕ್ಷ ದಾನಯ್ಯ ಮಠಪತಿ ಸ್ವಾಗತಿಸಿದರು.
ಸಂಘದ ಕಾರ್ಯದರ್ಶಿ ಈರಣ್ಣ ಮಾಲಿಪಾಟೀಲ ವಂದಿಸಿದರು. ಮೌನೇಶ ದೊಡಮನಿ ನಿರೂಪಿಸಿದರು.

