Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಜನಾಂಗ ಜಾನಪದ ಸಂಸ್ಕೃತಿ ಪ್ರೀತಿಸಲಿ :ಬಾಳನಗೌಡ
(ರಾಜ್ಯ ) ಜಿಲ್ಲೆ

ಯುವ ಜನಾಂಗ ಜಾನಪದ ಸಂಸ್ಕೃತಿ ಪ್ರೀತಿಸಲಿ :ಬಾಳನಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ದೇಶದ ಸಂಸ್ಕೃತಿ ಜಾನಪದದ ಮೂಲಕ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿದೆ. ಜಾನಪದ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸುತ್ತಿವೆ. ಜಾನಪದವು ಮೇರುಸ್ತರದ ವಿಚಾರಗಳನ್ನು ಕಲಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.
ವಿಜಯಪುರ ನಗರದ ( ನವಬಾಗ) ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಜಾನಪದ ಉತ್ಸವ ೨೦೨೫ ” ಅಡಿಯಲ್ಲಿ ” ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ವಿದೇಶಿ ವ್ಯಾಮೋಹ ಮತ್ತು ವೈಜ್ಞಾನಿಕ ಪ್ರಭಾವದಿಂದ ಯುವ ಜನಾಂಗ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಸಂಸ್ಕಾರವಿಲ್ಲದ ಶಿಕ್ಷಣ ಪಡೆದು ಸಂಸಾರಕ್ಕೆ ಕಂಟಕವಾಗುತ್ತಿದ್ದಾರೆ. ಅದಕ್ಕಾಗಿ ಯುವಕರು ಜಾನಪದ ಸಂಸ್ಕೃತಿ ಪ್ರೀತಿಸಬೇಕು ಅದರಂತೆ ಬದುಕಬೇಕು ಎಂದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಎ ಆಯ್ ಹಂಜಗಿ, ಜಾನಪದ ನಡೆ- ನುಡಿ ತಾಯಿಯ ಎದೆಹಾಲಿನಂತೆ ಅಮೃತಕ್ಕೆ ಸಮಾನವಾಗಿವೆ. ಪ್ರಾಚೀನರು ಹಾಕಿಕೊಟ್ಟ ಜಾನಪದದ ಹೆಜ್ಜೆ ಗುರುತುಗಳು ಇಂದು ನಮ್ಮ ಬದುಕಿಗೆ ದಾರಿದೀಪಗಳಾಗಿವೆ. ತಾಯಿ ಜಾನಪದ ಸಂಸ್ಕೃತಿ ಮಕ್ಕಳಲ್ಲಿ ತುಂಬುವ ಮೊದಲ ಗುರುವಾಗಿದ್ದಾಳೆ. ಆದ್ದರಿಂದ ಯುವಜನ ಜಾನಪದ ಸಂಸ್ಕೃತಿಯಂತೆ ಬದುಕಿ ಬಾಳಿಲಿ ಎಂದು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಕಾಲೇಜಿನ ಸಾಂಸ್ಕೃತಿಕ ಸಂಚಾಲಕ ಡಾ ಬಸವನಗೌಡ ಶ್ಯಾಡದಳ್ಳಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆ ಜಾನಪದ ಕಾರ್ಯಕ್ರಮ ನಡೆಸಲು ಆದೇಶ ನೀಡಿದ್ದು ಎರಡು ದಿನಗಳ ಕಾಲ ವಿಧ್ಯಾರ್ಥಿಗಳಿಗೆ ಏರ್ಪಡಿಸಿದ ಕಾರ್ಯಕ್ರಮ ಕುರಿತು ವಿವರಿಸಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ ಆರ್ ಎಸ್ ಕುರಿ ಮಾತನಾಡಿದರು.
ಕಾಖಂಡಕಿಯ ಕಮಲವ್ವ ಸಿದರಡ್ಡಿ ಮತ್ತು ತಂಡದವರಿಂದ ಚೌಡಕಿ ಪದಗಳ ಪ್ರದರ್ಶನ ನಡೆಯಿತು.ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿಧ್ಯಾರ್ಥಿಗಳಿಗೆ ಜಾನಪದದ ವಿವಿಧ ಸ್ಪರ್ಧೆಗಳಾದ ಹಗ್ಗಜಗ್ಗಾಟ, ಲಗೋರಿ, ಬುಗುರಿ, ಗೋಣಿಚೀಲ ಆಟ, ಕುಂಟೆಬಿಲ್ಲೆ, ಜಾನಪದ ನೃತ್ಯ, ದೇಶಿಆಹಾರ, ಡೊಳ್ಳು ಕುಣಿತ ಮುಂತಾದ ಸ್ಫರ್ಧೆ ಏರ್ಪಡಿಸಲಾಗಿತ್ತು‌
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಡಾ ರಮೇಶ ಕೆ ತೇಲಿ ನಿರೂಪಿಸಿದರು. ಉಪನ್ಯಾಸಕ ಪ್ರೊ ಎಂ ಎಸ್ ಖೋದ್ನಾಪುರ ವಂದಿಸಿದರು. ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.