Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಗಳೇಶ್ವರ ರೈತರಿಗೆ ಬಾರದ ತೊಗರಿ ಪರಿಹಾರ :ಜಿಲ್ಲಾಧಿಕಾರಿಗೆ ಮನವಿ
(ರಾಜ್ಯ ) ಜಿಲ್ಲೆ

ಇಂಗಳೇಶ್ವರ ರೈತರಿಗೆ ಬಾರದ ತೊಗರಿ ಪರಿಹಾರ :ಜಿಲ್ಲಾಧಿಕಾರಿಗೆ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರದ ವಿರುದ್ಧ ಹರಿಹಾಯ್ದ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾನಿಯಾಗಿದ್ದು ಫಸಲ ಬೀಮಾ ಯೋಜನೆಯಲ್ಲಿ ವಿಮಾ ಕಂತು ತುಂಬಿದರು ಕೂಡಾ ಬಿಡಿಗಾಸು ಪರಿಹಾರ ಹಣ ಬಿಡುಗಡೆ ಮಾಡಿಲ್ಲವೆಂದು ಸರ್ಕಾರದ ವಿರುದ್ಧ ಇಂಗಳೇಶ್ವರ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿ ವಿಮಾ ಕಂಪನಿ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರಿಗೆ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಶನಿವಾರದಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಇಂಗಳೇಶ್ವರ ಗ್ರಾಮದ ರೈತರು ಪಸಲ್ ಬೀಮಾ ಯೋಜನೆಯಡಿಯಲ್ಲಿ ಪ್ರತಿ ಎಕರೆಯಂತೆ ಸಾವಿರಾರು ರೂಪಾಯಿ ವಿಮಾ ಕಂಪನಿಗೆ ವಿಮಾ ಕಂತು ಕಟ್ಟಿದರು ಕೂಡಾ ಕಳೆದ ೫ ವರ್ಷಗಳಿಂದ ನಯಾ ಪೈಸೆ ಪರಿಹಾರ ಬರದ ಕಾರಣ ಇಂಗಳೇಶ್ವರ ಗ್ರಾಮದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಿಮಾ ಕಂಪನಿ ಒಂದು ರೀತಿ ಮಟ್ಕಾ ಅಡ್ಡೆ ಆಡುವ ಅಡ್ಡೆಯಾಗಿ ಪರಿಣಮಿಸಿದೆ. ಇಂಗಳೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರೆಬಿನಾಳ ಗ್ರಾಮದ ರೈತರಿಗೆ ತೊಗರಿ ಪರಿಹಾರ ಬಂದಿದೆ. ಆದರೆ ಇಂಗಳೇಶ್ವರಕ್ಕೆ ಮಾತ್ರ ಪರಿಹಾರ ಹಣ ಬಿಡುಗಡೆಗೊಳಿಸದೆ ಇರುವುದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಸವರುವ ಕೆಲಸ ರಾಜ್ಯ ವಿಮಾ ಕಂಪನಿ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ದೂರಿದರು. ಒಂದು ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳಿಗೆ ಬಂದರೆ ಎಲ್ಲರಿಗೂ ಪರಿಹಾರ ಬರಬೇಕು. ಒಂದು ವೇಳೆ ಬರದಿದ್ದರೆ ಎಲ್ಲರಿಗೂ ಬರಬಾರದು. ಆದರೆ ಇಲ್ಲಿ ವ್ಯತಿರಿಕ್ತ ಎಂಬಂತೆ ಇಂಗಳೇಶ್ವರ ಗ್ರಾಮ ಪಂಚಾಯತಿಯವರು ತೊಗರಿ ಬೆಳೆ ಈಲ್ಡ್ (ಫಸಲು) ಪರಿಶೀಲನೆ ಮಾಡುವ ಸಂದರ್ಭದಲ್ಲಿ ರ‍್ಯಾಂಡಮ್ ಆಗಿ ಪರಿಶೀಲನೆ ಮಾಡಿ ವರದಿ ಕಳುಹಿಸಿದ್ದಾರೆ. ಜಮೀನಿಗೆ ತೆರಳಿ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಆ ಜಮೀನಿನ ರೈತರ ಸಮಕ್ಷಮ ಪರಿಶೀಲನೆ ಮಾಡಬೇಕೆಂದು ನಿಯಮವಿದೆ. ಆ ಜಮೀನಿನ ರೈತನಿಗೆ ಮಾಹಿತಿ ಕೊಡದೆ ತಮ್ಮ ಮನಸ್ಸಿಗೆ ಬಂದಂತೆ ಫಸಲು ಟೆಸ್ಟ್ ಮಾಡಿ ವದರಿ ಕಳುಹಿಸುತ್ತಾರೆ. ಈ ರೀತಿ ರೈತರನ್ನು ಮರೆ ಮಾಚಿ ಪರಿಶೀಲನೆ ಮಾಡಿ ವರದಿ ಕಳುಹಿಸುವುದು ವಿಮಾ ಕಂಪನಿಗೆ ಹಿನ್ನೆಲೆಯಾಗಿದೆ ಸಹಕಾರ ನೀಡಿ ವಿಮಾ ಕಂಪನಿಗೆ ಲಾಭ ಮಾಡಿ ಕೊಡುವ ಉದ್ದೇಶವಿದೆ. ಈ ರೀತಿ ಮಾಡಿ ರೈತರಿಗೆ ಮೋಸ ಮಾಡಲಾಗುತ್ತಿದೆ. ಸರ್ಕಾರದ ಹಿಡಿತದಲ್ಲಿರಬೇಕಾದ ವಿಮಾ ಕಂಪನಿ ಅದರ ವ್ಯತಿರಿಕ್ತವೆಂಬಂತೆ ವಿಮಾ ಕಂಪನಿಯ ಹಿಡಿತದಲ್ಲಿ ಸರ್ಕಾರ ಇದೆ ಎಂಬಂತಾಗಿದೆ. ವಿಮಾ ಕಂಪನಿಯವರು ರೈತರಿಂದ ವಿಮೆ ಕಂತು ಕಟ್ಟಿಸಿಕೊಂಡು ಪರಿಹಾರ ಕೊಡದಿದ್ದರೆ ವಿಮಾ ಕಂಪನಿ ಏತಕ್ಕೆ ಬೇಕು ಎಂದು ಅರವಿಂದ ಕುಲಕರ್ಣಿ ಪ್ರಶ್ನಿಸಿದ್ದಾರೆ. ಶೀಘ್ರದಲ್ಲಿ ಇಂಗಳೇಶ್ವರ ಗ್ರಾಮದ ರೈತರಿಗೆ ತೊಗರಿ ಪರಿಹಾರ ಕೊಡದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕುಲಕರ್ಣಿ ಸರ್ಕಾರಕ್ಕೆ ಹಾಗೂ ವಿಮಾ ಕಂಪನಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರುದ್ರಯ್ಯ ಹಿರೇಮಠ, ನಿಂಗಯ್ಯ ಅಚನೂರ, ಈರಪ್ಪ ಕಡಗೋಲ, ಕಲ್ಲಪ್ಪ ಕಾಳಗಿ, ಶಿವಾನಂದ ಬಾಗೇವಾಡಿ, ಸಿದ್ದಪ್ಪ ಶೇಖಣ್ಣವರ, ರೇವಣಸಿದ್ದ ಶೇಖಣ್ಣವರ, ಸಿದ್ದಪ್ಪ ಜಕ್ಕನ್ನವರ, ದುಂಡಪ್ಪ ಹದಿಮೂರ, ಸಿದ್ಲಿಂಗಪ್ಪ ನಂದಿ, ರ‍್ಯಾವಯ್ಯ ಹಿರೇಮಠ, ಪರಪ್ಪ ಬಾಗೇವಾಡಿ, ಭೀಮಪ್ಪ ಬಾಗೇವಾಡಿ, ರುದ್ರಯ್ಯ ಹಿರೇಮಠ, ಸಿದ್ದಪ್ಪ ಪತ್ತಾರ, ಶ್ರೀಶೈಲ ಸಜ್ಜನ, ಮಲ್ಲಿಕಾರ್ಜುನ ಸಜ್ಜನ, ಸಂಗಪ್ಪ ಚೌಕಿಮಠ, ಶರಣಪ್ಪ ಉಕ್ಕಲಿ, ಕಲ್ಯಾಣಿ ಕಾಳಗಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.