ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯ ಆರ್.ಎಮ್.ಓ. ವೈದ್ಯ ಚಂದು ರಾಠೋಡ ಇವರು ಇಂಡಿ ತಾಲೂಕು ತಡವಲಗಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹೋರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಡಲಿತ ವೈದ್ಯಾಧಿಕಾರಿ ಕಾರ್ಯನಿರ್ವಹಿಸಿತ್ತಿದ್ದು, ಈತನ ಆಡಳಿತದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ. ಕಳ್ಳತನ. ಅಧಿಕಾರ ದುರುಪಯೋಗವಾಗಿದ್ದು ಇವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೆ.ಆರ್.ಎಸ್ ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ವೈದ್ಯ ಚಂದು ರಾಠೋಡ ಇವರು ಮಹಿಳಾ ಸಿಬ್ಬಂದಿಗೆ ಕಿರುಕುಳ. ಸಿಬ್ಬಂದಿ ಸಾವಿಗೆ ಕಾರಣ ಆಗಿದ್ದು, ಬಾಣಂತಿಯರ ವಾರ್ಡ್ ನಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಮೊಬೈಲ್ಗೆ ಸಂಪರ್ಕ ಪಡೆದು ತಾಯಂದಿರು ಶಿಶುವಿಗೆ ಹಾಲು ಉಣಿಸುವುದನ್ನು ಕದ್ದು ನೋಡುತ್ತಿದ್ದು, ಈತನ ನೀಚ ಕೃತ್ಯವನ್ನು ಪ್ರಶ್ನೆ ಮಾಡಿದ್ದಕ್ಕೆ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದ್ದಕ್ಕೆ ಬಾಡಿಗೆ ಗೂಂಡಾಗಳಿಂದ ಕೊಲೆ ಬೆದರಿಕೆ ಹಾಕಿರುವುದು ಸೇರಿದಂತೆ ಹಲವು ಅಕ್ರಮಗಳನ್ನು ಎಸಗಿರುತ್ತಾನೆ. ಈ ಬಗ್ಗೆ ಇಂಡಿ ತಾಲೂಕು ಆರೋಗ್ಯ ಅಧಿಕಾರಿಗೆ. ಜಿಲ್ಲಾ ಆರೋಗ್ಯ ಅಧಿಕಾರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ. ಹೊರ್ತಿ ಪೊಲೀಸ್ ಅಧಿಕಾರಿಗೆ. ಇಂಡಿ ಪೊಲೀಸ್ ಇನ್ಸೆಕ್ಟರ್, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರೋಗ್ಯ ಇಲಾಖೆಯ ಆಯುಕ್ತರಿಗೆ. ರಾಜ್ಯದ ಗೌರವಾನ್ವಿತ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಈ ವೈದ್ಯನ ಮೇಲೆ ಯಾವುದೇ ತರಹದ ಕ್ರಮ ಆಗಿರುವದಿಲ್ಲ. ಇಂಡಿ ಪೊಲೀಸ್ ಇನ್ಸೆಕ್ಟರ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದಾಖಲೆ ಸಮತ ದೂರು ನೀಡಲಾಗಿದೆ. ಕಾರಣ ಈತನು ನಡೆಸುವ ಎಲ್ಲ ಭ್ರಷ್ಟಾರಗಳ ಬಗ್ಗೆ ಕೂಲಂಕುಷ ತನಿಖೆ ಆಗಬೇಕು. ಮತ್ತು ವೈದ್ಯ ಚಂದು ರಾಠೋಡ ಈತನ ನಿವೃತ್ತಿ ಬಳಿಕ ಈತನಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಡೆಹಿಡಿಯಬೇಕು. ಒಂದುವೇಳೆ ಈತನ ಮೇಲೆ ಯಾವುದೇ ಕಾನೂನು ಕ್ರಮ ಜರುಗಿಸದೇ ಹೋದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಅಶೋಕ ಜಾದವ, ಪ್ರದಾನ ಕಾರ್ಯದರ್ಶಿ ಲಕ್ಷ್ಮಣ ಚಡಚಣ, ಜಿಲ್ಲಾ ಕಾರ್ಯದರ್ಶಿ ದುರ್ಗಾಪ್ಪಾ ಬೂದಿಹಾಳ, ಚಂದ್ರಕಾಂತ ನಗರೆ, ಮತ್ತಿತರರು ಇದ್ದರು.

