Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತೀಯ ಕಲೆ, ಸಂಸ್ಕ್ರತಿ, ಸಾಹಿತ್ಯ ಅನನ್ಯ :ಸಿದ್ದಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಭಾರತೀಯ ಕಲೆ, ಸಂಸ್ಕ್ರತಿ, ಸಾಹಿತ್ಯ ಅನನ್ಯ :ಸಿದ್ದಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಭಾರತೀಯ ಕಲೆ, ಸಂಸ್ಕ್ರತಿ, ಸಾಹಿತ್ಯ ವೈಭವಯುತವಾಗಿದೆ. ಕಲೆ,ಸಂಸ್ಕ್ರತಿ, ಸಾಹಿತ್ಯವನ್ನು ಗೌರವಿಸುವದು ಭಾರತೀಯರ ಗುಣವೈಶಿಷ್ಠವಾಗಿದೆ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಸಭಾ ಭವನದಲ್ಲಿ ಮಯೂರಿ ನಾಟ್ಯ ಕಲಾ ಅಕಾಡೆಮಿಯು ಭಾನುವಾರ ಹಮ್ಮಿಕೊಂಡಿದ್ದ ಭರತ ನಾಟ್ಯ ಶಾಲೆ ಉದ್ಘಾಟನೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ನಟರಾಜನಿಗೆ ಪುಷ್ಟಾರ್ಚನೆ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಭರತ ನಾಟ್ಯವು ಪ್ರಾಚೀನ ಕಾಲದಿಂದಲೂ ಇರುವದನ್ನು ಕಾಣುತ್ತೇವೆ. ಪ್ರಾಚೀನ ದೇವಸ್ಥಾನಗಳಲ್ಲಿಯೂ ಈ ಕಲೆಯ ಶಿಲ್ಪಕಲೆಯನ್ನು ಕಾಣುತ್ತೇವೆ. ರಾಜ-ಮಹಾರಾಜರು ಈ ಕಲೆಯನ್ನು ಪೋಷಿಸುತ್ತಿದ್ದರು. ಭರತ ನಾಟ್ಯ ಕಲೆಯು ಒಳ್ಳೆಯ ಸಂಸ್ಕಾರ ಕೊಡುವದು. ಇದಕ್ಕೆ ಗೌರವ ಸ್ಥಾನಮಾನವಿದೆ. ಇಂತಹ ಶಾಲೆಯನ್ನು ಸ್ಥಳೀಯವಾಗಿ ಆರಂಭವಾಗುತ್ತಿರುವದು ಈ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವದರಲ್ಲಿ ಸಂದೇಹವಿಲ್ಲ. ಈ ಶಾಲೆಯಿಂದ ಹೊಸ ಪ್ರತಿಭೆಗಳು ಹೊರಬಂದು ಬಸವ ನೆಲದ ಹೆಸರನ್ನು ನಾಡಿನಲ್ಲಿ ತರುವಂತಾಗಲೆಂದು ಆಶಿಸಿದರು.
ಶಿಕ್ಷಕಿ ನೀಲಗಂಗಾ ಯರನಾಳ ಮಾತನಾಡಿ, ಪಾಲಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರತಿಯೊಬ್ಬ ಮಗು ಉತ್ತಮ ಶಿಕ್ಷಣ, ಸಂಸ್ಕಾರ ಪಡೆಯುವಂತಾಗಬೇಕು. ಭರತ ನಾಟ್ಯವು ಜೀವನ ಕೌಶಲ್ಯ ಕಲಿಸಿಕೊಡುತ್ತದೆ. ಇಂತಹ ಕಲೆಯನ್ನು ತಮ್ಮ ಮಕ್ಕಳಿಗೆ ಕಲಿಸುವಂತಾಗಬೇಕು. ಮಕ್ಕಳು ಲವಲವಿಕೆಯಿಂದ ಇರುವ ಮೂಲಕ ಮನಸ್ಸಿಟ್ಟು ಕಲಿಯುವಂತಾಗಬೇಕು. ಈ ಭಾಗದಲ್ಲಿ ಇಂತಹ ಶಾಲೆಯ ಅಗತ್ಯತೆಯಿತ್ತು. ಇಂದು ಆರಂಭವಾಗಿದ್ದು. ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕೆಂದರು.
ಶಿಕ್ಷಕಿ ಅರುಂಧತಿ ಹತ್ತಿಕಾಳ ಮಾತನಾಡಿ,ಭಾರತೀಯ ಕಲೆ-ಸಂಸ್ಕ್ರತಿ ವೈಶಿಷ್ಟ್ಯಪೂರ್ಣವಾಗಿದೆ. ಅದಕ್ಕಾಗಿ ಜಗತ್ತಿನಲ್ಲಿರುವ ಎಲ್ಲರೂ ಇದಕ್ಕೆ ತಲೆ ಬಾಗುತ್ತಾರೆ. ಭರತ ನಾಟ್ಯವು ಭಾವ-ರಾಗ-ತಾಳವನ್ನು ಹೊಂದಿದೆ. ನಮ್ಮ ಸಂಸ್ಕ್ರತಿ, ಕಲೆಯನ್ನು ಸಂರಕ್ಷಿಸಿಸುವದು ನಮ್ಮೆಲ್ಲರ ಜವಾಬ್ದಾರಿ. ನಮ್ಮ ಕಲೆಯನ್ನು ಉಳಿಸುವಲ್ಲಿ ಇಂತಹ ಶಾಲೆಗಳು ಆರಂಭವಾಗುವದು ಪೂರಕವಾಗುತ್ತದೆ ಎಂದರು.
ನಿವೃತ್ತ ಉಪಪ್ರಾಂಶುಪಾಲ ಎಸ್.ಎಸ್.ಝಳಕಿ ಮಾತನಾಡಿ, ಈ ಶಾಲೆಯನ್ನು ಸಮಾನ ಮನಸ್ಕ ಮಹಿಳೆಯರು ಕೂಡಿಕೊಂಡು ಆರಂಭಿಸಿರುವದು ಶ್ಲಾಘನೀಯ. ಈ ಶಾಲೆಯು ಉತ್ತೋತ್ತರವಾಗಿ ಬೆಳೆಯುವಂತಾಗಲೆಂದರು.
ವೇದಿಕೆಯಲ್ಲಿ ಪೂರ್ಣಿಮಾ ಚೌಧರಿ, ನಾಟ್ಯ ಕಲಾ ಅಕಾಡೆಮಿ ಸಂಸ್ಥಾಪಕ ಸದಸ್ಯೆ ವಿದುಷಿ ಲಕ್ಷ್ಮೀ ತೇರದಾಳಮಠ ಇದ್ದರು. ಡಾ.ವೀಣಾ ಗುಳೇದಗುಡ್ಡ ಪ್ರಾಸ್ತವಿಕವಾಗಿ ಮಾತನಾಡಿದರು. ರಾಜೇಶ್ವರಿ ಯರನಾಳ ಸ್ವಾಗತಿಸಿದರು. ಶಿವು ಮಡಿಕೇಶ್ವರ ನಿರೂಪಿಸಿದರು. ರೇವತಿ ವಂದಾಲಮಠ ವಂದಿಸಿದರು. ಇದೇ ಸಂದರ್ಭದಲ್ಲಿ ಸಾಕ್ಷಿ ಸಂಗಡಿಗರು, ಶಿವಾನಿ ಪಾಟೀಲ, ಪ್ರತಿಭಾ ಹಡಪದ ತಮ್ಮ ಭರತ ನಾಟ್ಯ ಪ್ರದರ್ಶಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.