Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧಕರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆ :ಶಾಸಕ ಗುಡಗುಂಟಿ
(ರಾಜ್ಯ ) ಜಿಲ್ಲೆ

ಸಾಧಕರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆ :ಶಾಸಕ ಗುಡಗುಂಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಎಲೆಮರೆಯ ಕಾಯಿಯಂತೆ ಸಮಾಜದ ಏಳಿಗೆಗಾಗಿ ಸೇವೆ ಸಲ್ಲಿಸಿ ವಿಶೇಷ ಸಾಧನೆ ಮಾಡಿದ 35 ಜನ ಸಾಧಕರನ್ನು ಗುರುತಿಸಿ ಅವರ ಜೀವಮಾನ ಸಾಧನೆ, ಪಡೆದ ಪ್ರಶಸ್ತಿ-ಪುರಸ್ಕಾರಗಳ ಕುರಿತು ‘ಅಪರೂಪದವರು’ ಕೃತಿಯಲ್ಲಿ ದಾಖಲಿಸಿರುವುದು ಜನ ಮೆಚ್ಚುಗೆಯ ಕಾರ್ಯವಾಗಿದೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಮನ ಟ್ರಸ್ಟ್ ಬೆಂಗಳೂರು, ಸಾಹಿತ್ಯ ಸೌರಭ ವೇದಿಕೆ ಜಮಖಂಡಿ ಹಾಗೂ ಶ್ರೀವೀರೇಶ್ವರ ಪ್ರಕಾಶನ ಜಮಖಂಡಿ ಇವುಗಳ ಆಶ್ರಯದಲ್ಲಿ ಇಲ್ಲಿನ ಡಾ.ಗುರುದೇವ ರಾನಡೆ ಸಾಂಸ್ಕೃತಿಕ ಭವನದಲ್ಲಿ ನಡೆದ ಡಾ.ಸಂಗಮೇಶ ಮಟೋಳಿ ವಿರಚಿತ ತಾಲ್ಲೂಕಿನ ‘ಅಪರೂಪದವರು’ ಕೃತಿ ಲೋಕಾರ್ಪಣೆ ಮತ್ತು ರಾಜ್ಯಮಟ್ಟದ ‘ಸಾಧಕರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೂಲ್ಯವಾದ ಸಮಯವನ್ನು ಕೊಟ್ಟು ಇನ್ನೊಬ್ಬರ ಸಾಧನೆಯನ್ನು ಮೆಚ್ಚಿ ಕೃತಿ ರಚಿಸಿರುವುದು ಲೇಖಕರ ಹೃದಯ ಶ್ರೀಮಂತಿಕೆಯ ಪ್ರತೀಕವಾಗಿದೆ ಎಂದರು.
ರಾಜ್ಯ ಸರ್ಕಾರದ ಮಾಹಿತಿ ಆಯೋಗದ ಮಾಹಿತಿ ಆಯುಕ್ತ ರಾಜಶೇಖರ ಎಸ್. ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿ, ಇಂದಿನ ಸಾಧಕರ ಜೀವಮಾನ ಸಾಧನೆಗಳು ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವುದು ಮಹಾನ್ ಕಾರ್ಯವಾಗಿದೆ. ಸಾಧಕರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆ ಸ್ಫೂರ್ತಿ ನೀಡಲಿ ಎಂದು ಹಾರೈಸಿದರು.
ಬೆಂಗಳೂರಿನ ಬಸವನಗುಡಿಯ ಜಿಲ್ಲಾ ನೋಂದಣಾಧಿಕಾರಿ ಸವಿತಾಲಕ್ಷ್ಮೀ ಬೆಳಗಲಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣ, ಸಾಹಿತ್ಯ, ಕ್ರೀಡೆ ಹಾಗೂ ಕಲಾವಿದರ ಕುರಿತು ವ್ಯಕ್ತಿಚಿತ್ರಣಕ್ಕೆ ಸೇರಬಹುದಾದ ಲೇಖನಗಳನ್ನು ಕೃತಿಯಲ್ಲಿ ದಾಖಲಿಸುವ ಮೂಲಕ ಕಾಲಾಂತರದಲ್ಲಿ ಸಾಧಕರು ಮರೆತು ಹೋಗಬಾರದೆಂಬ ಲೇಖಕರ ಕಳಕಳಿ ಮೆಚ್ಚುವಂತಹದ್ದು ಎಂದರು.
ಬಾಗಲಕೋಟೆಯ ವಿಶ್ರಾಂತ ಪ್ರಾಚಾರ್ಯ ಪ್ರೊ.ಎನ್.ಆರ್. ಹಳ್ಳೂರ ಕೃತಿ ಪರಿಚಯಿಸುತ್ತ ಮಾತನಾಡಿ, ಜಮಖಂಡಿ ತಾಲ್ಲೂಕಿನ ‘ಅಪರೂಪದವರು’ ಕೃತಿಯನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ನೀಡಿರುವ ಲೇಖಕ ಡಾ.ಸಂಗಮೇಶ ಮಟೋಳಿ ತಮ್ಮದೆಯಾದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ ಎಂದರು.
ಗುರುಬಸುಗೌಡ ಪಾಟೀಲ, ಪರಮೇಶ್ವರ ತೇಲಿ, ಪುಂಡಲೀಕ ಭಜಂತ್ರಿ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ಕೃತಿಯ ಲೇಖಕ ಡಾ.ಸಂಗಮೇಶ ಮಟೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಧಕರತ್ನ ಪ್ರಶಸ್ತಿ ಸ್ವೀಕರಿಸಿದ 35 ಜನ ಸಾಧಕರ ಪರವಾಗಿ ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಅನಿಸಿಕೆ ಹಂಚಿಕೊಂಡರು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿದರು. ಪಿ.ಬಿ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಭೂಷಣ ಪತ್ತಾರ, ಕಸಾಪ ಗೌರವ ಕಾರ್ಯದರ್ಶಿ ವಿನೋದ ಲೋಣಿ ಇದ್ದರು.
ವರ್ಷಾರಾಣಿ ನಾವಿ ಪ್ರಾರ್ಥನೆ ಗೀತೆ ಹಾಡಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ ಸ್ವಾಗತಿಸಿದರು. ಶಿಕ್ಷಕಿ ಸರಿತಾ ಶಿರಗುಪ್ಪಿ, ಶಿಕ್ಷಕ ನಾಗೇಶ ಮಾಲಗಾರ ನಿರೂಪಿಸಿದರು. ಪ್ರೊ.ಆರ್.ಕೆ. ಹೊಸಟ್ಟಿ ವಂದಿಸಿದರು.
ಇದಕ್ಕೂ ಮೊದಲು ನಗರದ ಎಜಿ.ದೇಸಾಯಿ ವೃತ್ತದಿಂದ ಬಾಲಕರ ಸರ್ಕಾರಿ ಪಿ.ಬಿ. ಪ್ರೌಢ ಶಾಲೆಯ ಆವರಣದವರೆಗೆ ವಾಧ್ಯಮೇಳ ಕಲಾತಂಡದೊಂದಿಗೆ ಸಾಧಕರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಭುವನೇಶ್ವರಿ ವೇಷಧಾರಿಣಿ ಬಾಲಕಿ ರಿತಿಕಾ ಪಾಟೀಲ ಕೃತಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.