ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಸಿಂದಗಿ ಪಟ್ಟಣದಲ್ಲಿ ನಿಗಮದ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆ ಹಾಗೂ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿ ಬಸ್ ನಿಲ್ದಾಣ ಸಿಂದಗಿ ನಾಮಕರಣ ಸಮಾರಂಭ ಏಪ್ರಿಲ್ ೮ ರಂದು ಸಿಂದಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ ೧ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಸಾರಿಗೆ, ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ ಎನ್., ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯೆ ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ನಾಗಠಾಣ-ದೇವರಹಿಪ್ಪರಗಿ ನೂತನ ಬಸ್ ನಿಲ್ದಾಣಗಳ ಉದ್ಘಾಟನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನೂತನವಾಗಿ ನಿರ್ಮಿಸಲಾದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ನಾಗಠಾಣ ಹಾಗೂ ದೇವರಹಿಪ್ಪರಗಿ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ ಏಪ್ರಿಲ್ ೮ ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯-೩೦ಕ್ಕೆ ನಾಗಠಾಣದಲ್ಲಿ ನೂತನ ಬಸ್ ನಿಲ್ದಾಣಕ್ಕೆ ಹಾಗೂ ಬೆಳಿಗ್ಗೆ ೧೧-೩೦ಕ್ಕೆ ದೇವರಹಿಪ್ಪರಗಿಯಲ್ಲಿ ನೂತನವಾಗಿ ನಿರ್ಮಿಸಿದ ವೀರ ಶರಣ ಮಡಿವಾಳ ಮಾಚಿದೇವರ ಬಸ್ ನಿಲ್ದಾಣವನ್ನು ಸಾರಿಗೆ, ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ.
ನಾಗಠಾಣ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹಾಗೂ ದೇವರಹಿಪ್ಪರಗಿ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ದೇವರಹಿಪ್ಪರಗಿ ಶಾಸಕರಾದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
