Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದ ತೆರಿಗೆ ಪಾಲು-ಅನುದಾನಕ್ಕೆ ರಾಜ್ಯ ಬಿಜೆಪಿಯಿಂದ ಕತ್ತರಿ :ಸಿಎಂ
(ರಾಜ್ಯ ) ಜಿಲ್ಲೆ

ರಾಜ್ಯದ ತೆರಿಗೆ ಪಾಲು-ಅನುದಾನಕ್ಕೆ ರಾಜ್ಯ ಬಿಜೆಪಿಯಿಂದ ಕತ್ತರಿ :ಸಿಎಂ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆ | ಕೇಂದ್ರ ಸರ್ಕಾರದ ಜೊತೆ ಶಾಮೀಲು | ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆಂದು ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆ ಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆಂದು ವ್ಯಂಗ್ಯವಾಡಿದ್ದಾರೆ.
ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ.
ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ.
ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರುರಾಜ್ಯದಂತೆ ನೋಡುತ್ತಿರುವ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ.
ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ ಎಂದು ತಿಳಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ.”

– ಸಿಎಂ ಸಿದ್ದರಾಮಯ್ಯ

“ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ.”

– ಸಿಎಂ ಸಿದ್ದರಾಮಯ್ಯ

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.