Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿ ಜಲಾಶಯದ 26 ಗೇಟ್ಗಳ ಮೂಲಕ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರು ಸೋಮವಾರ ಕೃಷ್ಣಾ ನದಿಯಲ್ಲಿ ಇಳಿದು ಪ್ರತಿಭಟಿಸಿದರು.
ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ನೀರಿಗಿಳಿದು ಪ್ರತಿಭಟಿಸಿದರು.
ಸರ್ಕಾರದ ವಿರುದ್ಧ ಹಾಗೂ ಜಲಸಂಪನ್ಮೂಲ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಗೆ ಕುಡಿಯುವ ನೀರಿಗೂ, ಕೆರೆಗಳ ಭರ್ತಿಗೂ ನೀರು ಹರಿಸಲು ಅಧಿಕಾರಿಗಳು ಮೀನಮೇಷ ಎಣಿಸುತ್ತಾರೆ, ಆದರೆ ನಾರಾಯಣಪುರ ಜಲಾಶಯಕ್ಕೆ ಬೇಕಾಬಿಟ್ಟಿ ನೀರು ಹರಿಸುತ್ತಾರೆ ಎಂದು ಆಪಾದಿಸಿದರು. ಜಿಲ್ಲೆಯ ಕೆರೆಗಳ ಭರ್ತಿಗೆ ನೀರು ಹರಿಸುವರೆಗೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ, ನಾರಾಯಣಪುರ ಜಲಾಶಯಕ್ಕೆ ಹರಿಸುವ ನೀರಿನ ಅಗತ್ಯ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.
ಅವಳಿ ಜಿಲ್ಲೆಯ ಬಗ್ಗೆ ಅಧಿಕಾರಿಗಳ ಹಾಗೂ ಸರ್ಕಾರದ ನಿರ್ಲಕ್ಷ ಖಂಡಿಸಿ ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಆಗಮಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ರೈತರು ನೀರು ಹರಿಸಿದ್ದನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧೀಕ್ಷಕ ಅಭಿಯಂತರ ವಿ.ಆರ್. ಹಿರೇಗೌಡರ, ನಾರಾಯಣಪುರ ಜಲಾಶಯಕ್ಕೆ ಬಿಡಬೇಕಿದ್ದ 2 ಟಿಎಂಸಿ ನೀರನ್ನು ಕಳೆದ ಶನಿವಾರದಿಂದಲೇ ಬಿಡಲಾಗುತ್ತಿದೆ. ಸೋಮವಾರ ರಾತ್ರಿ 10 ಗಂಟೆಯೊಳಗೆ ನೀರು ಹರಿಸಬೇಕಿದ್ದ ಕಾರಣ ಜಲಾಶಯದ ಎಲ್ಲಾ 26 ಗೇಟ್ ಗಳ ಮೂಲಕ ನೀರು ಬಿಡಲಾಗುತ್ತಿದೆ, ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು. ಸೋಮವಾರ ರಾತ್ರಿ 10 ಗಂಟೆಯ ನಂತರ ಹೊರಹರಿವು ಸ್ಥಗಿತಗೊಳ್ಳಲಿದೆ ಎಂದರು.
ಸೋಮವಾರ ಸಂಜೆಯಿಂದಲೇ ಜಿಲ್ಲೆಯ ಕೆರೆಗಳ ಭರ್ತಿಗೆ ನೀರು ಹರಿಸಲಾಗುತ್ತದೆ ಎಂದು ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು.
ಧರಣಿಯಲ್ಲಿ ವಿಠ್ಠಲ ಬಿರಾದಾರ, ಸಂತೋಷ ಬಿರಾದಾರ, ಗುರುಲಿಂಗಪ್ಪ ಪಡಸಲಗಿ, ಮಲ್ಲಿಗೆಪ್ಪ ಸಾಸನೂರ ಪಾಲ್ಗೊಂಡಿದ್ದರು.
ಪ್ರತಿಭಟನಾ ಸ್ಥಳಕ್ಕೆ ಅಧೀಕ್ಷಕ ಅಭಿಯಂತರ ವಿ.ಆರ್. ಹಿರೇಗೌಡರ, ಕಾರ್ಯನಿರ್ವಾಹಕ ಅಭಿಯಂತರ ತಾರಾಸಿಂಗ್ ದೊಡಮನಿ, ಸಹಾಯಕ ಅಭಿಯಂತರ ರವಿ ಚಂದ್ರಗಿರಿಯವರ, ಕಿರಿಯ ಅಭಿಯಂತರ ವಿಠ್ಠಲ ಜಾಧವ, ಕಿರಿಯ ಅಭಿಯಂತರ ಕುಮಾರೇಶ ಹಂಚಿನಾಳ, ನಿಡಗುಂದಿ ಸಿಪಿಐ ಅಶೋಕ ಚವ್ಹಾಣ, ಕೆಎಸ್ಐಎಸ್ಎಫ್ ಇನ್ಸಪೆಕ್ಟರ್ ಶಿವಲಿಂಗ ಕುರೆನ್ನವರ, ಆಲಮಟ್ಟಿ ಪಿಎಸ್ ಐ ಎಫ್.ಎಸ್. ಇಂಡಿಕರ, ನಿಡಗುಂದಿ ಪಿಎಸ್ ಐ ಶಿವಾನಂದ ಪಾಟೀಲ, ಅಹ್ಮದ್ ಸಂಗಾಪುರ ಮತ್ತೀತರರು ಇದ್ದರು.

ಕೆರೆಗಳ ಭರ್ತಿಗೆ ಕ್ರಮ

ಏ.7 ರಿಂದ ಏ.22 ರವರೆಗೆ 15 ದಿನಗಳ ಕಾಲ ಜಿಲ್ಲೆಯ 127 ಕೆರೆಗಳು ಹಾಗೂ 13 ಬಾಂದಾರಗಳ ಭರ್ತಿಗೆ ನೀರು ಹರಿಸಲಾಗುವುದು, ಅದಕ್ಕಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನುಮತಿ ನೀಡಿದ್ದಾರೆ. ಹೀಗಾಗಿ ಸಂಜೆ 6 ಗಂಟೆಯಿಂದ ನೀರು ಹರಿಸಲು ಆರಂಭಿಸಲಾಗಿದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದರು. ಅದಕ್ಕಾಗಿ 2.5 ಟಿಎಂಸಿ ನೀರು ಕಾಲುವೆಗೆ ಹರಿಸಲಾಗುತ್ತದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.