Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿ ಜಲಾಶಯದ 26 ಗೇಟ್ಗಳ ಮೂಲಕ ನೀರು ಬಿಟ್ಟಿದ್ದನ್ನು ಖಂಡಿಸಿ ರೈತರು ಸೋಮವಾರ ಕೃಷ್ಣಾ ನದಿಯಲ್ಲಿ ಇಳಿದು ಪ್ರತಿಭಟಿಸಿದರು.
ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟಿದ್ದನ್ನು ಖಂಡಿಸಿ ನೀರಿಗಿಳಿದು ಪ್ರತಿಭಟಿಸಿದರು.
ಸರ್ಕಾರದ ವಿರುದ್ಧ ಹಾಗೂ ಜಲಸಂಪನ್ಮೂಲ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಗೆ ಕುಡಿಯುವ ನೀರಿಗೂ, ಕೆರೆಗಳ ಭರ್ತಿಗೂ ನೀರು ಹರಿಸಲು ಅಧಿಕಾರಿಗಳು ಮೀನಮೇಷ ಎಣಿಸುತ್ತಾರೆ, ಆದರೆ ನಾರಾಯಣಪುರ ಜಲಾಶಯಕ್ಕೆ ಬೇಕಾಬಿಟ್ಟಿ ನೀರು ಹರಿಸುತ್ತಾರೆ ಎಂದು ಆಪಾದಿಸಿದರು. ಜಿಲ್ಲೆಯ ಕೆರೆಗಳ ಭರ್ತಿಗೆ ನೀರು ಹರಿಸುವರೆಗೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ, ನಾರಾಯಣಪುರ ಜಲಾಶಯಕ್ಕೆ ಹರಿಸುವ ನೀರಿನ ಅಗತ್ಯ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.
ಅವಳಿ ಜಿಲ್ಲೆಯ ಬಗ್ಗೆ ಅಧಿಕಾರಿಗಳ ಹಾಗೂ ಸರ್ಕಾರದ ನಿರ್ಲಕ್ಷ ಖಂಡಿಸಿ ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಆಗಮಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ರೈತರು ನೀರು ಹರಿಸಿದ್ದನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧೀಕ್ಷಕ ಅಭಿಯಂತರ ವಿ.ಆರ್. ಹಿರೇಗೌಡರ, ನಾರಾಯಣಪುರ ಜಲಾಶಯಕ್ಕೆ ಬಿಡಬೇಕಿದ್ದ 2 ಟಿಎಂಸಿ ನೀರನ್ನು ಕಳೆದ ಶನಿವಾರದಿಂದಲೇ ಬಿಡಲಾಗುತ್ತಿದೆ. ಸೋಮವಾರ ರಾತ್ರಿ 10 ಗಂಟೆಯೊಳಗೆ ನೀರು ಹರಿಸಬೇಕಿದ್ದ ಕಾರಣ ಜಲಾಶಯದ ಎಲ್ಲಾ 26 ಗೇಟ್ ಗಳ ಮೂಲಕ ನೀರು ಬಿಡಲಾಗುತ್ತಿದೆ, ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು. ಸೋಮವಾರ ರಾತ್ರಿ 10 ಗಂಟೆಯ ನಂತರ ಹೊರಹರಿವು ಸ್ಥಗಿತಗೊಳ್ಳಲಿದೆ ಎಂದರು.
ಸೋಮವಾರ ಸಂಜೆಯಿಂದಲೇ ಜಿಲ್ಲೆಯ ಕೆರೆಗಳ ಭರ್ತಿಗೆ ನೀರು ಹರಿಸಲಾಗುತ್ತದೆ ಎಂದು ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು.
ಧರಣಿಯಲ್ಲಿ ವಿಠ್ಠಲ ಬಿರಾದಾರ, ಸಂತೋಷ ಬಿರಾದಾರ, ಗುರುಲಿಂಗಪ್ಪ ಪಡಸಲಗಿ, ಮಲ್ಲಿಗೆಪ್ಪ ಸಾಸನೂರ ಪಾಲ್ಗೊಂಡಿದ್ದರು.
ಪ್ರತಿಭಟನಾ ಸ್ಥಳಕ್ಕೆ ಅಧೀಕ್ಷಕ ಅಭಿಯಂತರ ವಿ.ಆರ್. ಹಿರೇಗೌಡರ, ಕಾರ್ಯನಿರ್ವಾಹಕ ಅಭಿಯಂತರ ತಾರಾಸಿಂಗ್ ದೊಡಮನಿ, ಸಹಾಯಕ ಅಭಿಯಂತರ ರವಿ ಚಂದ್ರಗಿರಿಯವರ, ಕಿರಿಯ ಅಭಿಯಂತರ ವಿಠ್ಠಲ ಜಾಧವ, ಕಿರಿಯ ಅಭಿಯಂತರ ಕುಮಾರೇಶ ಹಂಚಿನಾಳ, ನಿಡಗುಂದಿ ಸಿಪಿಐ ಅಶೋಕ ಚವ್ಹಾಣ, ಕೆಎಸ್ಐಎಸ್ಎಫ್ ಇನ್ಸಪೆಕ್ಟರ್ ಶಿವಲಿಂಗ ಕುರೆನ್ನವರ, ಆಲಮಟ್ಟಿ ಪಿಎಸ್ ಐ ಎಫ್.ಎಸ್. ಇಂಡಿಕರ, ನಿಡಗುಂದಿ ಪಿಎಸ್ ಐ ಶಿವಾನಂದ ಪಾಟೀಲ, ಅಹ್ಮದ್ ಸಂಗಾಪುರ ಮತ್ತೀತರರು ಇದ್ದರು.

ಕೆರೆಗಳ ಭರ್ತಿಗೆ ಕ್ರಮ

ಏ.7 ರಿಂದ ಏ.22 ರವರೆಗೆ 15 ದಿನಗಳ ಕಾಲ ಜಿಲ್ಲೆಯ 127 ಕೆರೆಗಳು ಹಾಗೂ 13 ಬಾಂದಾರಗಳ ಭರ್ತಿಗೆ ನೀರು ಹರಿಸಲಾಗುವುದು, ಅದಕ್ಕಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನುಮತಿ ನೀಡಿದ್ದಾರೆ. ಹೀಗಾಗಿ ಸಂಜೆ 6 ಗಂಟೆಯಿಂದ ನೀರು ಹರಿಸಲು ಆರಂಭಿಸಲಾಗಿದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದರು. ಅದಕ್ಕಾಗಿ 2.5 ಟಿಎಂಸಿ ನೀರು ಕಾಲುವೆಗೆ ಹರಿಸಲಾಗುತ್ತದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.