Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ೨ನೇ ಸ್ವಾತಂತ್ರ್ಯ ಸಂಗ್ರಾಮ’!
(ರಾಜ್ಯ ) ಜಿಲ್ಲೆ

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ೨ನೇ ಸ್ವಾತಂತ್ರ್ಯ ಸಂಗ್ರಾಮ’!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಅಹಮದಾಬಾದ್: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧದ ಹೋರಾಟವನ್ನು ‘ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಕರೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ಕೋಮುವಾದ, ಅನ್ಯಾಯ ಮತ್ತು ಅಸಮಾನತೆಯನ್ನು ಶಾಶ್ವತಗೊಳಿಸುತ್ತಿದೆ ಎಂದು ಆರೋಪಿಸಿದರು.
ಎಐಸಿಸಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮೋದಿ ಸರ್ಕಾರವನ್ನು ವಸಾಹತುಶಾಹಿ ಆಡಳಿತದೊಂದಿಗೆ ಹೋಲಿಸಿದರು. ಈ ಹಿಂದೆ ಬ್ರಿಟಿಷರು ಮಾಡಿದಂತೆ ಈ ಸರ್ಕಾರವೂ ಕೋಮುವಾದವನ್ನು ಬಳಸಿಕೊಳ್ಳುತ್ತಿದೆ. ಆದರೆ ಇದರ ವಿರುದ್ಧ ಕಾಂಗ್ರೆಸ್ ಹೋರಾಡಿ ಗೆಲ್ಲುತ್ತದೆ ಎಂದು ಪ್ರತಿಜ್ಞೆ ಮಾಡಿದರು.
ಬಿಜೆಪಿಯ ಹನ್ನೊಂದು ವರ್ಷಗಳ ಆಡಳಿತವನ್ನು ಟೀಕಿಸಿದ ಅವರು, ಸಂವಿಧಾನದ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ವಿರೋಧ ಪಕ್ಷಗಳ ಧ್ವನಿ ಹತ್ತಿಕ್ಕಲಾಗುತ್ತಿದೆ. ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಚುನಾವಣಾ ಆಯೋಗ(ಇಸಿ) ಸೇರಿದಂತೆ ಯಾವುದೇ ಸಂಸ್ಥೆಯೂ ಪ್ರಧಾನಿಯಡಿ ಸುರಕ್ಷಿತವಾಗಿಲ್ಲ. ವಿರೋಧ ಪಕ್ಷಗಳನ್ನು ಸೋಲಿಸಲು ಸಂಪೂರ್ಣ ಇವಿಎಂ ವ್ಯವಸ್ಥೆಯನ್ನು ಬಿಜೆಪಿ ವಿನ್ಯಾಸಗೊಳಿಸಿದೆ. ಚುನಾವಣಾ ವಂಚನೆ ನಡೆಯುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳು ಬ್ಯಾಲೆಟ್‌ ಪೇಪರ್‌ಗಳಿಗೆ ಮರಳಿವೆ, ಆದರೆ ನಾವು ಮಾತ್ರ ಇವಿಎಂಗಳನ್ನು ಬಳಸುತ್ತಿದ್ದೇವೆ ಎಂದು ಹೇಳಿದರು.
ಇದೆಲ್ಲವೂ ವಂಚನೆಯಾಗಿದೆ. ಅವರು ಪುರಾವೆಗಳನ್ನು ಕೇಳುತ್ತಿದ್ದಾರೆ. ಆದರೆ ತಮ ವಿರೋಧಿಗಳನ್ನು ಸೋಲಿಸಲು ಈ ಸಂಪೂರ್ಣ ತಂತ್ರವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ ಎಂದರು.
ವಿಮಾನ ನಿಲ್ದಾಣಗಳು, ಬಂದರುಗಳು, ಗಣಿಗಾರಿಕೆ, ಮಾಧ್ಯಮ – ಎಲ್ಲವನ್ನೂ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಸ್ತಾಂತರಿಸಲಾಗುತ್ತಿದೆ. ಇದು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ. ನಿರುದ್ಯೋಗದಿಂದ ಪಾರಾಗಲು ಶ್ರೀಮಂತರು ಮತ್ತು ಯುವಕರು ದೇಶ ತೊರೆಯುತ್ತಿದ್ದಾರೆ. ಶ್ರೀಮಂತರು ವಿದೇಶದಲ್ಲಿ ನೆಲೆಸುತ್ತಿದ್ದಾರೆ. ನಿರುದ್ಯೋಗದಿಂದ ಪಾರಾಗಲು ವಿದೇಶಕ್ಕೆ ಹೋದ ಯುವಕರನ್ನು ಸರಪಳಿಯಲ್ಲಿ ಬಂಧಿಸಿ ವಾಪಸ್‌ ಕಳುಹಿಸಲಾಗುತ್ತಿದೆ ಆದರೂ ಪ್ರಧಾನಿ ನರೇಂದ್ರಮೋದಿ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ವಿದೇಶಾಂಗ ನೀತಿಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದ ಖರ್ಗೆ, ಭಾರತೀಯ ಆಮದುಗಳ ಮೇಲೆ ಅಮೆರಿಕ ಶೇಕಡಾ 26 ರಷ್ಟು ಸುಂಕ ವಿಧಿಸುತ್ತಿದೆ. ಆದರೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿಲ್ಲ ಎಂದು ಅವರು ಹೇಳಿದರು.

ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯ ಸ್ಥಾಪನೆ

ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದ್ದು, ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಮುಂದೊಂದು ದಿನ ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಮೀಸಲಾತಿಗೆ ಹೊಡೆತ ಬಿದ್ದಿದೆ. ಉದ್ಯೋಗ ಒದಗಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹೀಗಾಗಿ ಸಾರ್ವಜನಿಕ ವಲಯವನ್ನು ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ. ಈ ಮೂಲಕ ಅವರ ಸ್ನೇಹಿತರಿಗೆ ಸಹಾಯ ಮಾಡುತ್ತಿದ್ದಾರೆ. ಈ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂದೊಂದು ದಿನ ಮೋದಿಯವರು ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಕಿಡಿಕಾರಿದರು,

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ
    In (ರಾಜ್ಯ ) ಜಿಲ್ಲೆ
  • ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್
    In ವಿಶೇಷ ಲೇಖನ
  • ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದಲ್ಲಿ ಹೊಸ ಹೊಸ ಪ್ರತಿಭೆಗಳು ಉದಯಿಸಲಿ
    In (ರಾಜ್ಯ ) ಜಿಲ್ಲೆ
  • ಅಗತ್ಯ ಆರೋಗ್ಯ ಸೇವೆಗಳು ನೇರ ನಿವಾಸಿಗಳ ಮನೆಗೆ :ಶಫಿ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.