Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಡಿಎಸ್ ನಿಂದ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಅಭಿಯಾನ
(ರಾಜ್ಯ ) ಜಿಲ್ಲೆ

ಜೆಡಿಎಸ್ ನಿಂದ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಅಭಿಯಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೋರಾಟಕ್ಕೆ ಸಜ್ಜಾದ ದಳಪತಿಗಳು | ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ | ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಜನಕ್ರೋಶ ಅಭಿಯಾನ ನಡೆಸುತ್ತಿರುವ ವೇಳೆಯೇ, ಅದರ ಮಿತ್ರ ಪಕ್ಷ ಜೆಡಿಎಸ್ ಬುಧವಾರ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ (ಸಾಕಾದರೆ ಸಾಕು ಕಾಂಗ್ರೆಸ್ ಸರ್ಕಾರ) ಅಭಿಯಾನ ಆರಂಭಿಸಿದೆ.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ ಸಂಚಲನ ಸೃಷ್ಟಿಸಿದೆ. ಈ ಅಭಿಯಾನದ ಬಗ್ಗೆ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, https://www.saakappasaaku.com ಎಂಬ ನೂತನ ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದರು.
ಈ ವೆಬ್ ತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಆರ್ಥಿಕವಾಗಿ ರಾಜ್ಯವನ್ನು ವಿಕೋಪದ ಪರಿಸ್ಥಿತಿಗೆ ದೂಡಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ನಾಡಿನ ಜನರನ್ನು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ.
ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ. ನಾವು ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು’ ಎಂಬ ಅಭಿಯಾನ ಶುರು ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಜೆಡಿಎಸ್ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಸಿಎಂ ಕುರ್ಚಿ ಡಿಕೆಶಿ ಕಸಿದುಬಿಡುವ ಭೀತಿಯಲ್ಲಿ ಸಿದ್ದರಾಮಯ್ಯ

ಮಂಗಳೂರು: ಕಾಂಗ್ರೆಸ್ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಕ್ರೋಶ ಯಾತ್ರೆ ಬುಧವಾರ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಿದೆ.
ಮಂಗಳೂರಿನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ ನಡೆಸಿದ ಅವರು,
ಸಿದ್ದರಾಮಯ್ಯ ಬೆಂಗಳೂರಿನ ಮುಖ್ಯಮಂತ್ರಿ ಮಾತ್ರ, ಏಕೆಂದರೆ ಅವರು ಬೇರೆಲ್ಲಿಯೂ ಕಾಣುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಅಂಬೇಡ್ಕರ್‌ ವೃತ್ತದಲ್ಲಿ 83 ವರ್ಷ ವಯಸ್ಸಿನ ಬಿಜೆಪಿ ಹಿರಿಯ ಕಾರ್ಯಕರ್ತೆ ವತ್ಸಲಾ ಕಾಮತ್‌ ಅವರು ಬಿಜೆಪಿ ಧ್ವಜವನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯ ಅವರ ಆಡಳಿತ ನೋಡಿದರೆ ಅವರು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್‌ ಮುಖ್ಯಮಂತ್ರಿಯೋ ಎಂಬ ಅನುಮಾನ ಬರುತ್ತಿದೆ ಎಂದು ಕಿಡಿ ಕಾರಿದರು.
ರಾಜ್ಯ ಪ್ರವಾಸಕ್ಕೆ ತೆರಳಿದರೆ ತಮ್ಮ ಸಿಎಂ ಕುರ್ಚಿಯನ್ನು ಡಿಕೆಶಿ ಕಸಿದು ಬಿಡುವ ಭೀತಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಇನ್ನೊಂದೆಡೆ, ರಾಜ್ಯ ಪ್ರವಾಸ ನಡೆಸಿದರೆ ಜನತೆ ತಲೆ ಬಗ್ಗಿಸಿ ಎಲ್ಲಿ ಬಡಿಗೆಯಲ್ಲಿ ಹೊಡೆಯುತ್ತಾರೋ ಎಂಬ ಆತಂಕ ಸಿದ್ದರಾಮಯ್ಯ ಅವರನ್ನು ಕಾಡಿದಂತಿದೆ ಎಂದು ಲೇವಡಿ ಮಾಡಿದರು.

“ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳ ಮೇಲೆ ಮಾತ್ರ ಅವಲಂಬಿತವಾಗಿದೆ, ಆದರೆ ರಾಜ್ಯದಲ್ಲಿ ಜನರ ಜೀವನಕ್ಕೆ ಯಾವುದೇ ಖಾತರಿ ಇಲ್ಲ.”

– ಬಿ. ಶ್ರೀರಾಮುಲು
ಮಾಜಿ ಸಚಿವರು

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ
    In (ರಾಜ್ಯ ) ಜಿಲ್ಲೆ
  • ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್
    In ವಿಶೇಷ ಲೇಖನ
  • ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದಲ್ಲಿ ಹೊಸ ಹೊಸ ಪ್ರತಿಭೆಗಳು ಉದಯಿಸಲಿ
    In (ರಾಜ್ಯ ) ಜಿಲ್ಲೆ
  • ಅಗತ್ಯ ಆರೋಗ್ಯ ಸೇವೆಗಳು ನೇರ ನಿವಾಸಿಗಳ ಮನೆಗೆ :ಶಫಿ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.