ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೌಶಲ್ಯಾಭಿವೃದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಕಲಬುರಗಿಯ ಖಮರುಲ್ ಇಸಾಂ ಕಾಲೋನಿ, ರಿಂಗ್ ರಸ್ತೆಯ ಕೆ.ಸಿ.ಟಿ.ಕಾಲೇಜ್ ಕ್ಯಾಂಪಸ್ನಲ್ಲಿ ಏ.೧೬ರಂದು ಜರುಗುವ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ಹಾಗೂ ಏ.೧೬ರೀದಮ ೧೮ರವರೆಗೆ ಕೂಡಲಸಂಗದಲ್ಲಿ ಜರುಗು ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಲಾಗಿದೆ.
ಏ.೧೫ರಂದು ನಡೆಯುವ ಉದ್ಯೋಗ ಮೇಳಕ್ಕೆ ವಿಜಯಪುರ ವಿಭಾಗದ ತಾಲೂಕಾ ಮುಖ್ಯ ಬಸ್ ನಿಲ್ದಾಣಗಳಿಂದ ಕಲಬುರಗಿಗೆ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಹಾಗೂ ಕೂಡಲ ಸಂಗಮದಲ್ಲಿ ಏ.೧೬ರಿಂದ ೧೮ರವರೆಗೆ ಜರುಗುವ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರು ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ವಿಜಯಪುರ, ಮುದ್ದೇಬಿಹಾಳ ತಾಳಿಕೋಟೆ ಹಾಗೂ ಬ.ಬಾಗೇವಾಡಿಯಿಂದ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಕೈಗೊಂಡಿದ್ದು, ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ ಘಟಕ-೧ ಮೊ: ೭೭೬೦೯೯೨೨೬೩, ಘಟಕ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟೆ ಮೊ: ೭೭೬೦೯೯೨೨೬೮, ಬ.ಬಾಗೇವಾಡಿ ಮೊ: ೭೭೬೦೯೯೨೨೬೯, ನಿಲ್ದಾಣಾಧಿಕಾರಿಗಳು ಕೇಂದ್ರ ಬಸ್ ನಿಲ್ದಾಣ ವಿಜಯಪುರ ಮೊ: ೭೭೬೦೯೯೨೨೫೮, ಕೇಂದ್ರ ಬಸ್ ನಿಲ್ದಾಣ ವಿಜಯಪುರ ಮೊ: ೦೮೩೫೨-೨೫೧೩೪೪ ಮತ್ತು ವಿಭಾಗೀಯ ಸಾರಿಗೆ ಅಧಿಕಾರಿ ಮೊ: ೭೭೬೦೯೯೨೨೫೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
