ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ (ಬ್ಯಾಡಗಿ) ಅವರು, ಏ.೧೫-೧೬ರಂದು ವಿಜಯಪುರ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ ೧೫ರಂದು ರಾತ್ರಿ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಏಪ್ರಿಲ್ ೧೬ರಂದು ಬೆಳಿಗ್ಗೆ ೮-೩೦ಕ್ಕೆ ಇಂಡಿ ತಾಲೂಕಿನ ಬಬಲಾದಿ ಗ್ರಾಮಕ್ಕೆ ಭೇಟಿ ನೀಡಿ ಶಕ್ತಿ ಯೋಜನೆಯಡಿ ಹೋಳಿಗೆ ತಯಾರಿಸಿ ಸ್ವಾವಲಂಬಿಗಳಾಗಿರುವ ಬಬಲಾದಿ ಗ್ರಾಮದ ಒಡಲ ಧ್ವನಿ ಮಹಿಳಾ ಸಂಘದ ಸದಸ್ಯರೊಂದಿಗೆ ಚರ್ಚೆ-ಸಂವಾದ ನಡೆಸಲಿದ್ದಾರೆ. ಬೆಳಿಗ್ಗೆ ೧೦-೩೦ಕ್ಕೆ ಚಡಚಣ ತಾಲೂಕಿನ ಶಿರಾಡೋಣ ಗ್ರಾಮಕ್ಕೆ ತೆರಳಿ ಗೃಹ ಲಕ್ಷ್ಮಿ ಯೋಜನೆ ಹಣ ಸಂಗ್ರಹಣೆ ಮೂಲಕ ಮನೆ ನಿರ್ಮಾಣ ಮಾಡಿಕೊಂಡ ಫಲಾನುಭವಿಗಳ ಮನೆ ವೀಕ್ಷಣೆ, ಗ್ಯಾರಂಟಿ ಯೋಜನೆಗಳ ಕುರಿತು ಶಿರಾಡೋಣ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಚರ್ಚೆ-ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ೧ ಗಂಟೆಗೆ ಶಿರಾಡೋಣದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
