ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಅಜ್ಞಾನ, ಅಂಧಕಾರ, ಜಾತಿ ವ್ಯವಸ್ಥೆಯಿಂದ ಬೇಯುತ್ತಿರುವ ನಾಡನ್ನು ಕಟ್ಟಲು ಸಾಕಷ್ಟು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಯಾರೊಬ್ಬರೂ ಪಾಲನೆ ಮಾಡದಿರುವದು ಬೇಸರದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕನಸಿನಂತೆ ಜಾತಿ, ವರ್ಗ, ಲಿಂಗಬೇಧ ತಾರತಮ್ಯ ಮಾಡದೇ ಎಲ್ಲರೂ ಒಂದಾಗಿ ಈ ದೇಶವನ್ನು ಉನ್ನತ ಸ್ಥಾನಕ್ಕೆ ಒಯ್ಯೋಣ ಎಂದು ಪ್ರತಿಜ್ಞೆ ಮಾಡೋಣ ಎಂದರು.
ಶಾಸಕ ಸಿ.ಎಸ್.ನಾಡಗೌಡ ಮಾತನಾಡಿದರು.
ಸಹ ಪ್ರಾಧ್ಯಾಪಕ ಆರ್.ಎಚ್.ಸಜ್ಜನ ವಿಶೇಷ ಉಪನ್ಯಾಸ ನೀಡಿದರು. ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ತಾ.ಪಂ ಕಚೇರಿಯ ಖೂಬಾಸಿಂಗ್ ಜಾಧವ, ಪ್ರಮುಖರಾದ ತಿಪ್ಪಣ್ಣ ದೊಡಮನಿ, ಪ್ರಕಾಶ ಸರೂರ ಸೇರಿದಂತೆ ಹಲವರು ರಕ್ತದಾನ ಮಾಡಿದರು.
ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಇಓ ನಿಂಗಪ್ಪ ಮಸಳಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಿಪಿಐ ಮೊಹಮ್ಮದ ಫಸಿಯುದ್ಧಿನ್, ಬಿಇಓ ಬಿ.ಎಸ್.ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಡಿಎಸ್ಎಸ್ ಮುಖಂಡ ಡಿ.ಬಿ.ಮುದೂರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ಪು.ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸದಸ್ಯರಾದ ಪ್ರತಿಭಾ ಅಂಗಡಗೇರಿ, ರಫೀಕ ದ್ರಾಕ್ಷಿ, ಚನ್ನಪ್ಪಣ್ಣ ಕಂಠಿ, ವಿರೇಶ ಹಡಲಗೇರಿ, ಸದಾಶಿವ ಮಾಗಿ, ನಿವೃತ್ತ ಯೋಧ ನಾನಪ್ಪ ನಾಯಕ, ಮುಖಂಡರಾದ ವಿಜೇಂದ್ರ ಅಶೋಕ, ಬಲಭೀಮ ನಾಯಕಮಕ್ಕಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಲೂಕು ಚಲವಾದಿ ಸಮಾಜದ ಅಧ್ಯಕ್ಷ ರೇವಣೆಪ್ಪ ಚಲವಾದಿ ಸೇರಿದಂತೆ ಹಲವರು ಇದ್ದರು. ಸಂಗಮೇಶ ಶಿವಣಗಿ ತಂಡದವರು ನಾಡಗೀತೆ ಹಾಡಿದರು. ವಾಯ್.ಎಚ್.ವಿಜಯಕರ ಸ್ವಾಗತಿಸಿದರು. ಮುಖಂಡ ಹರೀಶ ನಾಟೆಕಾರ ಪ್ರಸ್ತಾವಿಕವಾಗಿ ಮಾತನಾಡಿದರು. ಸಾಹಿತಿ ಪರಶುರಾಮ ಕೊಣ್ಣೂರ ಮತ್ತು ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು.

