Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರೇ ನಿಜ ಅನುಯಾಯಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರೇ ನಿಜ ಅನುಯಾಯಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರು ಅವರ ನಿಜವಾದ ಅನುಯಾಯಿಗಳು. ಅವರ ಸಿದ್ದಾಂತವನ್ನು ಅನುಸರಿಸುವ ಮೂಲಕ ಅನುಯಾಯಿಗಳಾಗಬೇಕು. ದಲಿತರು ಯಾರನ್ನೂ ಅವಲಂಭಿಸಬಾರದು ಎಂಬುದು ಅಂಬೇಡ್ಕರ್ ಅವರ ಇಚ್ಚೆಯಾಗಿತ್ತು. ಅದರೀಗ ದಲಿತರು ಹಿತಕಾಯುವ ಸಂವಿಧಾನವನ್ನು ದುರ್ಬಲಗೊಳಿಸಿ, ಸರಕಾರಿ ಸಂಸ್ಥೆಗಳೆಲ್ಲವನ್ನೂ ಹಾನಿ ಮಾಡಲಾಗುತ್ತಿದೆ. ಇದು ಬಾಬಾ ಸಾಹೇಬರಿಗೆ ಮೊದಲೇ ಗೊತ್ತಿತ್ತು. ಹೀಗಾಗಿ ದಲಿತರ ಹಿತಾಸಕ್ತಿ ರಕ್ಷಣೆಗಾಗಿ ಅವರು ಸಂವಿಧಾನವೊಂದನ್ನೇ ಕೊಟ್ಟು ಹೋಗಿಲ್ಲ. ಬುದ್ಧ ಮಾರ್ಗವನ್ನೂ ಬಿಟ್ಟು ಹೋಗಿದ್ದಾರೆ. ಸಂವಿಧಾನ ನಮ್ಮನ್ನು ರಕ್ಷಣೆ ಮಾಡದಿದ್ದರೆ ಇದುವೇ ನಮ್ಮ ರಕ್ಷಣೆಗೆ ಬರಲಿದೆ ಎಂದು ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ, ಸಿಂದಗಿ ಜೈಭೀಮ ನಗರ ಹಾಗೂ ದಲಿತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಭೀಮರಾಯಗೌಡ ಬಿರಾದಾರ ಮಾಗಣಗೇರಿ ಮಹಾವೇದಿಕೆಯಲ್ಲಿ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೆಯ ಜಯಂತ್ಯುತ್ಸವ ಮತ್ತು ಬುದ್ಧವಂದನೆ ಹಾಗೂ ಬಹಿರಂಗ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ ಮೀಸಲಾತಿ ಕಿತ್ತುಕೊಳ್ಳುವ ಹುನ್ನಾರ ಮನುವಾದಿಗಳು ಮಾಡುತ್ತಿದ್ದು, ಇದರ ಬಗ್ಗೆ ಎಲ್ಲರೂ ಎಚ್ಚರದ ಹೆಜ್ಜೆ ಇಡುವ ಮುಖೇನ ಜಾಗೃತ ವಹಿಸಬೇಕು. ದಲಿತರಿಗಾಗಿ ಅಂಬೇಡ್ಕರ್ ಅವರು ಪಟ್ಟಿರುವ ಶ್ರಮವನ್ನು ನಾವಿಂದು ನೆನಪಿಸಿ ಮುನ್ನಡೆಯಬೇಕಿದೆ. ಡಾ.ಅಂಬೇಡ್ಕರರು ಇಲ್ಲವಾಗಿದ್ದರೆ ನಾವಿಲ್ಲಿದ್ದೇವೆ ಎಂದು ಗೊತ್ತಾಗುತ್ತಿರಲಿಲ್ಲ ಎಂದು ನುಡಿದರು.
ಅದಕ್ಕೆ ಸಂವಿಧಾನ ಪೀಠಿಕೆಯ ಮಹತ್ವ ಅರಿತು ಅದಕ್ಕೆ ತೊಡಕುಂಟು ಮಾಡುತ್ತಿರುವ ಶಕ್ತಿಯನ್ನು ದೂರವಿರಿಸಬೇಕು. ಇಂದು ಅಂಬೇಡ್ಕರ್ ಜಯಂತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ವ್ಯಕ್ತಿಯ ಸ್ಪೂರ್ತಿದಾಯಕ ಪ್ರಯಾಣವನ್ನು ಆಧರಿಸಿದೆ. ಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಮತ್ತು ಹೋರಾಟವನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಅಂಬೇಡ್ಕರ ಅವರ ಹೋರಾಟ, ಅವರು ಹಾಕಿಕೊಟ್ಟ ಸಂವಿಧಾನದಿಂದ ನಾವು ಮಾನವರಾಗಿ ಬಾಳುತ್ತಿದ್ದೇವೆ. ಈ ಭೂಮಿ ಇರುವವರೆಗೂ ಸಂವಿಧಾನ ಉಳಿಯಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಪೂಜಿಸಿ, ಅನುಸರಿಸಿ ಅವರ ತತ್ವಾದಾರ್ಶಗಳನ್ನು ಪಾಲಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಆಲಮೇಲ ಪಪಂ ಅಧ್ಯಕ್ಷ ಸಾದಿಕ್ ಸುಂಬಡ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿಂದಗಿ ಬುದ್ಧವಿಹಾರ ಧಮ್ಮ ವಿಜಯಾ ಭಂತೆ ಸಂಘಪಾಲ ಬಂತೇಜ ವಹಿಸಿ ಆಶೀರ್ವಚನ ನೀಡಿದರು.
ಬಹಿರಂಗ ಸಭೆಯಲ್ಲಿ ಪ್ರಶಾಂತ ಸುಣಗಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ರಾಜಶೇಖರ ಕೂಚಬಾಳ, ಚಂದ್ರಕಾಂತ ಸಿಂಗೆ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ರಾಕೇಶ ಕಲ್ಲೂರ, ಸಲಿಂಪಟೇಲ್ ಮರ್ತೂರ, ಗೊಲ್ಲಾಳಪ್ಪಗೌಡ ಮಾಗಣಗೇರಿ, ಪೀರು ಕೆರೂರ, ಸಂತೋಷ ಪಾಟೀಲ, ಭೀಮು ಬಮ್ಮನಹಳ್ಳಿ, ಯಮನಪ್ಪ ಹೊಸಮನಿ, ಶೈಲಜಾ ಸ್ಥಾವರಮಠ, ಅಂಬಿಕಾ ಪಾಟೀಲ, ಎಸ್.ಎಂ.ಚಿಗರಿ, ಸೈನಾಜ ಮಸಳಿ, ರಾಮು ಅಗ್ನಿ, ಪರಶುರಾಮ ಕಾಂಬಳೆ ಸೇರಿದಂತೆ ಅಂಬೇಡ್ಕರ್ ಅವರ ಅನುಯಾಯಿಗಳು ಮತ್ತು ಅಭಿಮಾನಿಗಳು ಇದ್ದರು.

“ಬುದ್ಧ ಮಾರ್ಗವನ್ನು ಪ್ರಧಾನಿ ಮೋದಿ ಸೇರಿದಂತೆ ಸಂಘ ಪರಿವಾರ ಪಾಲನೆ ಮಾಡುತ್ತಿದೆ. ಈ ಮೂಲಕ ಮನುವಾದ ವ್ಯವಸ್ಥೆ, ವಿಚಾರಧಾರೆಯನ್ನು ನಿರ್ಮಿಸಿಕೊಳ್ಳಲಾಗುತ್ತಿಲ್ಲ. ಆದರೆ ಬುದ್ಧ ವಿಚಾರವನ್ನು ದಲಿತರೇ ಪಾಲನೆ ಮಾಡುತ್ತಿಲ್ಲ.”

– ರಾಜರತ್ನ ಅಂಬೇಡ್ಕರ್
ಅಂಬೇಡ್ಕರ್ ವಂಶಜರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.