ಉದಯರಶ್ಮಿ ದಿನಪತ್ರಿಕೆ
ಇಂಡಿ: ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿದೆ ಎಂದು ಅಧ್ಯಕ್ಷತೆ ವಹಿಸಿದ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
ಪಟ್ಟಣದ ಶಿಕ್ಷಣ ಇಲಾಖೆಯ ಗುರುಭವನದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪರ್ಚಾಣೆ ನೆರಿವೆರಿಸಿ ತದನಂತರ ಜ್ಯೋತಿ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ. ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ. ಅವರನ್ನು ಗೌರವಿಸುವ ಸುದಿನ. ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು, ಸದಾ ಅನುಸರಿಸಬೇಕಾಗಿದೆ ಎಂದು ಹೇಳಿದರು.
ಪ್ರೌಢಶಾಲೆಯ ಸಹಶಿಕ್ಷಕ ಆರ್.ಬಿ.ಬಿರಾದಾರ ಉಪನ್ಯಾಸ ನೀಡಿದರು.
ರಮೇಶ ನಿಂಬಾಳಕರ ಮಾತನಾಡಿದರು.
ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ ಸ್ವಾಗತಿಸಿದರು. , ಬಸವರಾಜ ಗೊರನಾಳ ನಿರೂಪಿಸಿದರು.
ವೇದಿಕೆಯ ಮೇಲೆ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ನಂದೀಪ ರಾಠೋಡ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಭೀಮಣ್ಣ ಕೌಲಗಿ, ಟಿ.ಎಸ್.ಅಲಗೂರ, ಜಾವೇದ ಮೋಮಿನ್, ವಿನಾಯಕ ಗುಣಸಾಗರ, ಭೀಮಾಶಂಕರ ಮೂರಮನ, ಶೇಖರ ಶಿವಶರಣ, ಧರ್ಮರಾಜ ಸಾಲೋಟಗಿ, ಬಾಬು ಗುಡುಮಿ, ಮತ್ತಿತರಿದ್ದರು.
ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈದಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಭಾವಚಿತ್ರದ ಮೆರವಣೆಗೆ ಅಂಬೇಡಕರ ವೃತ್ತದಿಂದ ಮಹಾವೀರ ವೃತ್ತ, ಬಸವೇಶ್ವರ ವೃತ್ತದ ಮೂಲಕ ಗುರುಭವನ ತಲುಪಿ ಅಲ್ಲಿ ಕಾರ್ಯಕ್ರಮ ನಡೆಯಿತು.

