Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಪ್ರಭಾರಿ ಬಿಇಓ ಧರಿಕಾರ ಅಧಿಕಾರ ದುರ್ಬಳಕೆ :ಆರೋಪ
Uncategorized

ಪ್ರಭಾರಿ ಬಿಇಓ ಧರಿಕಾರ ಅಧಿಕಾರ ದುರ್ಬಳಕೆ :ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನ್ಯಾಯವಾದಿ ಚೇತನ ಶಿವಶಿಂಪಿ ಅವರಿಂದ ಸರ್ಕಾರಕ್ಕೆ ದೂರು ಸಲ್ಲಿಕೆ

ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಶಾಲೆಯ ಶಿಕ್ಷಕರ ಕಳೆದ ೧೦ ತಿಂಗಳ ವೇತನವನ್ನು ಯಾವುದೇ ಆದೇಶವಿಲ್ಲದೇ ಬಟವಡೆ ಮಾಡಿ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ತಮ್ಮ ಅಧಿಕಾರವನ್ನು ದುರುಪಯೋಗ ಪಡೆದುಕೊಂಡಿದ್ದು ಇವರನ್ನು ಸೇರಿದಂತೆ ವೇತನ ಬಟವಡೆಗೆ ಸಂಬಂಧಿಸಿದ ಇಲಾಖಾ ನೌಕರರನ್ನು ಕೂಡಲೆ ಅಮಾನತ್ತು ಮಾಡಿ ಎಲ್ಲರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ನ್ಯಾಯವಾದಿ ಚೇತನ ಶಿವಶಿಂಪಿ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ, ಜಿಲ್ಲಾ ಪಂಚಾಯತ ಸಿಇಓ ರಾಹುಲ ಸಿಂಧೆ ಹೀಗೆ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉಪನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಸದರಿ ಶಾಲೆ ವಿದ್ಯಾರ್ಥಿಗಳಿಲ್ಲದೇ ಸುಮಾರು ವರ್ಷಗಳ ಕಾಲ ಮುಚ್ಚಲ್ಪಟ್ಟಿದ್ದು ಸಂಸ್ಥೆಯವರು ತಮ್ಮ ರಕ್ತ ಸಂಬಂಧಿಗಳನ್ನು ಶಿಕ್ಷಕರನ್ನಾಗಿ ಸೇರಿಸಿಕೊಂಡು ಕಾನೂನು ಬಾಹಿರವಾಗಿ ಅನುಮೋದನೆಗೊಂಡಿದೆ. ಈ ಬಗ್ಗೆ ದೂರು ಸಲ್ಲಿಸಿದ್ದು ತನಿಖೆ ನಡೆದು ಸದರಿ ಶಾಲೆಯಲ್ಲಿ ಇರಬೇಕಾದ ಹಲವಾರು ದಾಖಲೆಗಳು ಇಲ್ಲದಿರುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಆಧಾರದ ಮೇಲೆ ಮತ್ತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಹಿಂದಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳೆದ ೧೦ ತಿಂಗಳಿನಿಂದ ಶಿಕ್ಷಕರ ವೇತನವನ್ನು ತಡೆಹಿಡಿದಿದ್ದರು. ಇಲ್ಲಿ ದುಡಿದವರ ವೇತನ ತಡೆಹಿಡಿಯಲು ಅವಕಾಶಗಳಿಲ್ಲ ಎಂಬ ಮಾತು ಕೇಳಿ ಬಂದಿದ್ದು, ದುಡಿದವರು ನ್ಯಾಯಯುತವಾಗಿ ತಮ್ಮ ನೌಕರಿಯನ್ನು ಗಿಟ್ಟಿಸಿಕೊಳ್ಳದೇ ಸರ್ಕಾರಕ್ಕೆ ವಂಚನೆ ಮಾಡಿ ಮುಚ್ಚಲ್ಪಟ್ಟ ಶಾಲೆಗೆ ಖೊಟ್ಟಿ ಮತ್ತು ಕೇವಲ ಅಂಕಿ ಸಂಖ್ಯೆಗಳುಳ್ಳ ದಾಖಲೆಗಳನ್ನು ನೀಡಿ ಸರಕಾರದಿಂದ ವೇತನ ರೂಪದಲ್ಲಿ ಬರುವ ಹಣವನ್ನು ಲಪಟಾಯಿಸುವ ಉದ್ದೇಶದಿಂದ ಅನುಮೋದನೆ ಪಡೆದು ಕ್ರಿಮಿನಲ್ ಅಪರಾಧ ಮಾಡಿದ್ದಾರೆ.
ಈ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡು ಸರ್ಕಾರಕ್ಕೆ ಆಗುತ್ತಿರುವ ವಂಚನೆಯನ್ನು ತಪ್ಪಿಸುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಯು.ಬಿ.ಧರಿಕಾರ ಅವರು, ವಿಜಯಪುರದ ಉಪನಿರ್ದೇಶಕರು ೧೦ ಜನ ಅಧಿಕಾರಿಗಳ ತಂಡ ರಚಿಸಿ ೭ ದಿನಗಳ ಗಡುವು ನೀಡಿ ತನಿಖೆಗೆ ಆದೇಶಿಸಿದ್ದರೂ ತನಿಖಾ ವರದಿ ಬರುವವರೆಗೂ ತಾಳ್ಮೆವಹಿಸದೇ ಹಿಂದಿನ ೧೦ ತಿಂಗಳ ವೇತನವನ್ನು ಬಿಡುಗಡೆ ಮಾಡಿ ಸಂಪೂರ್ಣವಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದು ರುಜುವಾತಾಗಿದೆ. ಕಾರಣ ಇವರ ಮೇಲಾಧಿಕಾರಿಗಳು ಕೂಡಲೇ ವೇತನ ಬಟವಡೆಗೆ ಸಂಬಂಧಿಸಿದ ಎಲ್ಲರನ್ನೂ ಈ ಕೂಡಲೇ ಅಮಾನತ್ತು ಮಾಡಿ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Share. Facebook Twitter Pinterest Email Telegram WhatsApp
  • Website

Related Posts

ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ :ಉತ್ತಮ ಫಲಿತಾಂಶ

ವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿ ಕುರಿತು ಶಾಸಕರು ಧ್ವನಿ ಎತ್ತಲಿ

ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ರಾಜ್ಯಕ್ಕೆ ಪ್ರಥಮ

ವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.