Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಪ್ರಭಾರಿ ಬಿಇಓ ಧರಿಕಾರ ಅಧಿಕಾರ ದುರ್ಬಳಕೆ :ಆರೋಪ
Uncategorized

ಪ್ರಭಾರಿ ಬಿಇಓ ಧರಿಕಾರ ಅಧಿಕಾರ ದುರ್ಬಳಕೆ :ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನ್ಯಾಯವಾದಿ ಚೇತನ ಶಿವಶಿಂಪಿ ಅವರಿಂದ ಸರ್ಕಾರಕ್ಕೆ ದೂರು ಸಲ್ಲಿಕೆ

ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಶಾಲೆಯ ಶಿಕ್ಷಕರ ಕಳೆದ ೧೦ ತಿಂಗಳ ವೇತನವನ್ನು ಯಾವುದೇ ಆದೇಶವಿಲ್ಲದೇ ಬಟವಡೆ ಮಾಡಿ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ತಮ್ಮ ಅಧಿಕಾರವನ್ನು ದುರುಪಯೋಗ ಪಡೆದುಕೊಂಡಿದ್ದು ಇವರನ್ನು ಸೇರಿದಂತೆ ವೇತನ ಬಟವಡೆಗೆ ಸಂಬಂಧಿಸಿದ ಇಲಾಖಾ ನೌಕರರನ್ನು ಕೂಡಲೆ ಅಮಾನತ್ತು ಮಾಡಿ ಎಲ್ಲರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ನ್ಯಾಯವಾದಿ ಚೇತನ ಶಿವಶಿಂಪಿ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ, ಜಿಲ್ಲಾ ಪಂಚಾಯತ ಸಿಇಓ ರಾಹುಲ ಸಿಂಧೆ ಹೀಗೆ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉಪನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಸದರಿ ಶಾಲೆ ವಿದ್ಯಾರ್ಥಿಗಳಿಲ್ಲದೇ ಸುಮಾರು ವರ್ಷಗಳ ಕಾಲ ಮುಚ್ಚಲ್ಪಟ್ಟಿದ್ದು ಸಂಸ್ಥೆಯವರು ತಮ್ಮ ರಕ್ತ ಸಂಬಂಧಿಗಳನ್ನು ಶಿಕ್ಷಕರನ್ನಾಗಿ ಸೇರಿಸಿಕೊಂಡು ಕಾನೂನು ಬಾಹಿರವಾಗಿ ಅನುಮೋದನೆಗೊಂಡಿದೆ. ಈ ಬಗ್ಗೆ ದೂರು ಸಲ್ಲಿಸಿದ್ದು ತನಿಖೆ ನಡೆದು ಸದರಿ ಶಾಲೆಯಲ್ಲಿ ಇರಬೇಕಾದ ಹಲವಾರು ದಾಖಲೆಗಳು ಇಲ್ಲದಿರುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಆಧಾರದ ಮೇಲೆ ಮತ್ತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಹಿಂದಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳೆದ ೧೦ ತಿಂಗಳಿನಿಂದ ಶಿಕ್ಷಕರ ವೇತನವನ್ನು ತಡೆಹಿಡಿದಿದ್ದರು. ಇಲ್ಲಿ ದುಡಿದವರ ವೇತನ ತಡೆಹಿಡಿಯಲು ಅವಕಾಶಗಳಿಲ್ಲ ಎಂಬ ಮಾತು ಕೇಳಿ ಬಂದಿದ್ದು, ದುಡಿದವರು ನ್ಯಾಯಯುತವಾಗಿ ತಮ್ಮ ನೌಕರಿಯನ್ನು ಗಿಟ್ಟಿಸಿಕೊಳ್ಳದೇ ಸರ್ಕಾರಕ್ಕೆ ವಂಚನೆ ಮಾಡಿ ಮುಚ್ಚಲ್ಪಟ್ಟ ಶಾಲೆಗೆ ಖೊಟ್ಟಿ ಮತ್ತು ಕೇವಲ ಅಂಕಿ ಸಂಖ್ಯೆಗಳುಳ್ಳ ದಾಖಲೆಗಳನ್ನು ನೀಡಿ ಸರಕಾರದಿಂದ ವೇತನ ರೂಪದಲ್ಲಿ ಬರುವ ಹಣವನ್ನು ಲಪಟಾಯಿಸುವ ಉದ್ದೇಶದಿಂದ ಅನುಮೋದನೆ ಪಡೆದು ಕ್ರಿಮಿನಲ್ ಅಪರಾಧ ಮಾಡಿದ್ದಾರೆ.
ಈ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡು ಸರ್ಕಾರಕ್ಕೆ ಆಗುತ್ತಿರುವ ವಂಚನೆಯನ್ನು ತಪ್ಪಿಸುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಯು.ಬಿ.ಧರಿಕಾರ ಅವರು, ವಿಜಯಪುರದ ಉಪನಿರ್ದೇಶಕರು ೧೦ ಜನ ಅಧಿಕಾರಿಗಳ ತಂಡ ರಚಿಸಿ ೭ ದಿನಗಳ ಗಡುವು ನೀಡಿ ತನಿಖೆಗೆ ಆದೇಶಿಸಿದ್ದರೂ ತನಿಖಾ ವರದಿ ಬರುವವರೆಗೂ ತಾಳ್ಮೆವಹಿಸದೇ ಹಿಂದಿನ ೧೦ ತಿಂಗಳ ವೇತನವನ್ನು ಬಿಡುಗಡೆ ಮಾಡಿ ಸಂಪೂರ್ಣವಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದು ರುಜುವಾತಾಗಿದೆ. ಕಾರಣ ಇವರ ಮೇಲಾಧಿಕಾರಿಗಳು ಕೂಡಲೇ ವೇತನ ಬಟವಡೆಗೆ ಸಂಬಂಧಿಸಿದ ಎಲ್ಲರನ್ನೂ ಈ ಕೂಡಲೇ ಅಮಾನತ್ತು ಮಾಡಿ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Share. Facebook Twitter Pinterest Email Telegram WhatsApp
  • Website

Related Posts

ಯುವಸಮೂಹ ನಮ್ಮ ಸಂಸ್ಕೃತಿ-ಪರಂಪರೆ ಅರಿಯಬೇಕು

ಭಾರತ ಮಾತೆ ಪೂಜೆ ಮೂಲಕ ಗಣೇಶ ವಿಸರ್ಜನೆ

ಸಿಂದಗಿ ನಗರಕ್ಕೆ ರೂ.೧೦೦ ಕೋಟಿ ವಿಶೇಷ ಅನುದಾನ

ಮಹಿಳೆಯರು ಸ್ವಾವಲಂಬಿಯಾಗಲು ಶಕ್ತಿ ಯೋಜನೆ ಸಹಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.