ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಾಡಿನ ಸಮಸ್ತ ಮಕ್ಕಳ ಸೇವೆಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಸದಾ ಸಿದ್ಧವಾಗಿದೆ. ಮಕ್ಕಳ ಸೇವೆ ಭಗವಂತನ ಸೇವೆ, 23 ವರ್ಷಗಳಿಂದ ಸತತವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಬೇಸಿಗೆ ಶಿಬಿರವನ್ನು ಏರ್ಪಡಿಸುವುದರ ಮೂಲಕ ಈ ಭಾಗದ ಮಕ್ಕಳ ಬಾಳಿಗೆ ಬೆಳಕು ನೀಡುತ್ತಿರುವ ಕನ್ನೂರಿನ ಶಾಂತಿ ಕುಠೀರದ ಗಣಪತರಾವ ಮಹಾರಾಜರ ಶಾಂತಿ ಕುಟೀರದ ಕಾರ್ಯ ನಿಜಕ್ಕೂ ಅಭಿನಂದನಾರ್ಹವಾದದ್ದು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಅವರು ವಿಜಯಪುರ ತಾಲೂಕಿನ ಕನ್ನೂರು ಶಾಂತಿ ಕುಟಿರದಲ್ಲಿ ನಡೆಯುತ್ತಿರುವ ವಿಶೇಷ ಬೇಸಿಗೆ ಶಿಬಿರದ ವಿದ್ಯಾರ್ಥಿಗಳಿಗೆ ಎಸ್, ಎಸ್, ಎಲ್, ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಉಚಿತವಾಗಿ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ಒಂದು ತಿಂಗಳವರೆಗೆ ಸುಮಾರು 515 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಅವರ ಸರ್ವಾಂಗಿನ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾದ ಸಂಸ್ಕಾರಯುತವಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವ ಕಾರ್ಯಕ್ಕೆ ಶ್ರಮಿಸುತ್ತಿರುವ ಆಶ್ರಮದ ಶ್ರೀ ಕೃಷ್ಣ ಗುರುಗಳನ್ನು ಹಾಗೂ ಅವರ ತಂಡವನ್ನು ಅಭಿನಂದಿಸಿದ ಸಂಗಮೇಶ ಬಬಲೇಶ್ವರ ಘನ ಸರಕಾರದ ಪರವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ನಾಡಿನ ಪ್ರತಿಷ್ಠಾ ಚಾಣಕ್ಯ ಕರಿಯರ ಅಕಾಡೆಮಿಯ ಸಂಸ್ಥಾಪಕರಾದ ಶಿಕ್ಷಣ ತಜ್ಞರಾದ ಎನ್ ಎಮ್ ಬಿರಾದಾರ ಆಗಮಿಸಿದ್ದರು. ದಿವ್ಯ ಸಾನಿಧ್ಯವನ್ನು ವಹಿಸಿ ಆಶ್ರಮದ ಶ್ರೀ ಕೃಷ್ಣ ಗುರುಗಳು ವಿಶೇಷ ಉಪನ್ಯಾಸ ನೀಡಿದರು.
ಶಿಕ್ಷಣ ತಜ್ಞರು ಚಿಂತಕರಾದ ಕುಮಾರ್ ನಾನಾವಟೆ ಮತ್ತು ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.

ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ನಡೆಗೆ ಮೆಚ್ಚುಗೆ
ಸುಮಾರು ಐದು ಗಂಟೆಗಳ ವರೆಗೆ ಸುಮಾರು 15 ಹಳ್ಳಿಗಳ 515 ಮಕ್ಕಳೊಂದಿಗೆ ಬೆರೆತು ಅವರೊಂದಿಗೆ ಸಮಯ ಕಳೆದು ಅವರು ಹೇಳುವ ಕಥೆ ಹಾಡು ಮುಂತಾದ ಮಕ್ಕಳ ಸೃಜನಾತ್ಮಕ ಕಲೆಗಳನ್ನು ವೀಕ್ಷಿಸಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ನಡೆಯ ಬಗ್ಗೆ ಆಶ್ರಮದ ಮುಖ್ಯಸ್ಥರಾದ ಶ್ರೀ ಕೃಷ್ಣ ಗುರುಗಳು ಹಾಗೂ ಸಂಪನ್ಮೂಲ ಶಿಕ್ಷಕರು ಮತ್ತು ಮುದ್ದು ಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು.

