Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿಯ ದಿಟ್ಟನಿಲುವು ಮಹಿಳೆಯರಿಗೆ ಸ್ಪೂರ್ತಿ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿಯ ದಿಟ್ಟನಿಲುವು ಮಹಿಳೆಯರಿಗೆ ಸ್ಪೂರ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: 12 ನೇ ಶತಮಾನದ ಶರಣೆ ಅಕ್ಕಮಹಾದೇವಿಯ ದಿಟ್ಟನಿಲುವು ಹಾಗೂ ಧೈರ್ಯ ಮಹಿಳೆಯರಿಗೆ ಇಂದಿಗೂ ಸ್ಪೂರ್ತಿಯಾಗಿ ನಿಲ್ಲುತ್ತದೆ ಎಂದು ಸ್ಥಳೀಯ ಸರಕಾರಿ ಪದವಿ ಕಾಲೇಜಿನ ಇತಿಹಾಸದ ಉಪನ್ಯಾಸಕಿ ವಿಜಯಲಕ್ಷ್ಮಿ ರೊಟ್ಟಿ ಹೇಳಿದರು.
ಪಟ್ಟಣದ ವಿರಕ್ತ ಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ವಿರಕ್ತಮಠ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಅಕ್ಕನ ವಚನಗಳು ಎತ್ತರ ಮಟ್ಟದಲ್ಲಿವೆ. ಅವರ ಒಂದೊಂದು ವಚನಗಳು ಅನುಭವದ ಆಧಾರದಲ್ಲಿ ಮೂಡಿ ಬಂದಿದೆ. ಎಂದು ಹೇಳಿದರು.
ಕಾಮವನ್ನು ಗೆದ್ದ ಅಕ್ಕ ದೈವತ್ವದ ಕಡೆಗೆ ಹೋಗಬೇಕಾದರೆ ಸಾಕಷ್ಟು ನೋವುಗಳನ್ನು ಅನುಭವಿಸಿದರು. ಧೈರ್ಯ ಸಾಹಸಕ್ಕೆ ಅಕ್ಕ ನಮಗೆಲ್ಲರಿಗೂ ಇಂದಿಗೂ ಮಾರ್ಗದರ್ಶಕರಾಗಿ ನಿಲ್ಲುತ್ತಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಜಗದೇವಿ ಗುಂಡಳ್ಳಿ ಮಾತನಾಡಿ, 12ನೇ ಶತಮಾನದ ಶರಣರು ಶರಣೆಯರ ವಚನಗಳು ಇಂದಿಗೂ ಪ್ರಸ್ತುತವಾಗಿ ನಿಲ್ಲುತ್ತವೆ. ಯುವ ಜನಾಂಗ ಮೊಬೈಲ್ ದಾಸರಾಗಿ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಶರಣರ ವಿಚಾರಗಳನ್ನು ನೈತಿಕ ಮೌಲ್ಯಗಳನ್ನು ತಿಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಸಾನಿದ್ಯ ವಹಿಸಿದ್ದ ವಿರಕ್ತ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಅಕ್ಕಮಹಾದೇವಿ ಕನ್ನಡ ನಾಡಿನ ಮೊದಲ ಕವಯತ್ರಿಯಾಗಿ ಅವರು ರಚಿಸಿದ ವಚನಗಳು ಅಧ್ಯಾತ್ಮ ಲೋಕದ ಎತ್ತರಕ್ಕೆ ನಮ್ಮನ್ನು ಕೊಂಡೊಯ್ಯುತ್ತವೆ. ಅವಳ ಆದರ್ಶ ಅವರ ಬದುಕಿದ ಹೋರಾಟ ನಮಗೆಲ್ಲ ಸ್ಪೂರ್ತಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ದೇಶಿಸಿ ಕದಳಿ ವೇದಿಕೆಯ ಕವಿತಾ ಮರ್ತುರ ಮಾತನಾಡಿದರು.
ವೇದಿಕೆ ಮೇಲೆ ಮಹಾದೇವಿ ಬಿರಾದಾರ ಸುರೇಖಾ ಉಪಾಧ್ಯಾಯ, ಪೂರ್ಣಿಮಾ ಚೌಧರಿ, ಅಂಬುತಾಯಿ ಮಿಣಜಗಿ, ಪಾರ್ವತಿ ಕೊಟ್ರಶೆಟ್ಟಿ ,ಸುನೀತಾ ಕೊಟ್ರಶೆಟ್ಟಿ, ಡಾ ವೀಣಾ ಗುಳೇದಗುಡ್ಡ, ಗೀತಾ ಕಾಳಹಸ್ತೇಶ್ವರಮಠ ಉಪಸ್ಥಿತರಿದ್ದರು. ಪುಷ್ಪ ಹೂಗಾರ ಸ್ವಾಗತ ಗೀತೆ ಹಾಡಿದರು.
ಮೀರಾಂಬಿಕಾ ಅಳ್ಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕವಿತಾ ದುಂಬಾಳಿ ಸ್ವಾಗತಿಸಿದರು. ಗೀತಾ ಚಿಂಚೋಳಿ ನಿರೂಪಿಸಿದರು. ಪಾರ್ವತಿ ಚೌಕಿಮಠ ವಂದಿಸಿದರು.
ಇದೇ ಸಂದರ್ಭದಲ್ಲಿ ಕುಮಾರಿ ಪ್ರತಿಭಾ ಹಡಪದವರಿಂದ ವಚನ ನೃತ್ಯ ಕಾರ್ಯಕ್ರಮ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.