ವಿಜಯಪುರ ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಿಕ್ಷಣ ಕ್ರಾಂತಿಗೆ ಛಲತೊಟ್ಟ ಮಹಾನ್ ಚೇತನ ಡಾ.ಬಾಬಾಸಾಹೇಬ್ ಅಂಬೇಡ್ಕರ್. ಅವರ ಜೀವನ ಚರಿತ್ರೆ ಇಡೀ ವಿಶ್ವಕ್ಕೆ ಮಾದರಿ ಎಂದು ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಹೇಳಿದರು.
ಮೋರಟಗಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡ ೧೩೪ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಕೊಲೆ, ಸುಲಿಗೆ, ಅನ್ಯಾಯ, ಅತ್ಯಾಚಾರ ಕಣ್ಣಾರೆ ಕಂಡ ಬಾಬಾಸಾಹೇಬರು ಪುಸ್ತಕವನ್ನೇ ದೇವರೆಂದು ನಂಬಿ ಕಡು ಬಡತನದಲ್ಲಿ ಬೀದಿ ದೀಪದಲ್ಲಿ ಓದುವ ಮೂಲಕ ಸಂವಿಧಾನವನ್ನು ರಚಿಸಿ ತುಳಿತಕ್ಕೆ ಒಳಗಾದ ಸಮಾಜವನ್ನು ಎತ್ತಿ ಹಿಡಿದ ಅವರ ಸಾಧನೆ ಸೂರ್ಯ ಚಂದ್ರ ಇರುವರೆಗೂ ಅಜರಾಮರ. ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಅಸ್ತಿ ಅಂತಸ್ತು ಗಳಿಸುವ ಬದಲು ನಿಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದರು.
ಈ ವೇಳೆ ಮಾಜಿ ಸೈನಿಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳು ಬಾಬಾಸಾಹೇಬರ ಹಾಡಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿ ಸಾರ್ವಜನಿಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಸಿಂದಗಿ ಬುದ್ಧ ವಿಹಾರದ ಪೂಜ್ಯ ಸಂಘಪಾಲ ಬಂತೇಜಿ ಸವರು ಸಾನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಗೌರಮ್ಮ ನಡುವಿನಕೇರಿ, ಮುತ್ತಪ್ಪ ಸಿಂಗೆ, ಪ್ರಕಾಶ ಅಡಗಲ್, ರವಿ ಹೋಳಿ, ಅರುಣಕುಮಾರ ಸಿಂಗೆ, ರವಿಕಾಂತ ನಡುವಿನಕೇರಿ, ವೀರನಗೌಡ ಪಾಟೀಲ್, ತಮ್ಮಣ್ಣ ಬೋನಾಳ, ನಿಂಗಣ್ಣ ವಾಲಿಕಾರ ಸೇರಿದಂತೆ ಡಾ.ಬಿ.ಆರ್.ಅಂಬೇಡ್ಕರ ಅವರ ಅಭಿಮಾನಿಗಳು ಮತ್ತು ಗ್ರಾಮಸ್ಥರು ಇದ್ದರು.

