ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಬಿಜೆಪಿ ಜನಾಕ್ರೋಶ ಯಾತ್ರೆ ಅಂಗವಾಗಿ ವಿಜಯಪುರ ಜಿಲ್ಲೆಗೆ ಬಾಗಲಕೋಟೆ ಯಿಂದ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕೊಲ್ಹಾರ ಪಟ್ಟಣದ ಯುಕೆಪಿಯಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕಾರ್ಯಕರ್ತರು ಸನ್ಮಾನಿಸಿ, ಮಹಿಳೆಯರು ಆರತಿ ಮಾಡಿ, ಜೆಸಿಬಿ ಮೂಲಕ ಹೂ ಮಳೆಗರೆದು ಅದ್ದೂರಿಯಾಗಿ ಜಿಲ್ಲೆಗೆ ಸ್ವಾಗತಿಸಿದರು.

