ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮೊಬೈಲ್ನಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕೋರವಾರ ಗ್ರಾಮದಲ್ಲಿ ಸಂಭವಿಸಿದೆ.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ಜರುಗಿದ್ದು, ಗ್ರಾಮದ ನಿವಾಸಿ ಸಂಗಯ್ಯ ಶಾಂತವೀರಯ್ಯ ಚಿಕ್ಕಯ್ಯನಮಠ(೧೭) ಎಂಬುವ ವಿದ್ಯಾರ್ಥಿಯೇ ಸಿಡಿಲಿಗೆ ಬಲಿಯಾದ ದುರ್ದೈವಿಯಾಗಿದ್ದಾನೆ. ಇವನು ಕಲಕೇರಿ ಗ್ರಾಮದ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಗ್ರಾಮದ ಶ್ರೀಹನುಮಾನ ದೇವಸ್ಥಾನದ ಮೇಲೆ ನಿಂತು ಮೊಬೈಲ್ನಲ್ಲಿ ಮಾತನಾಡುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಪ್ರಕರಣ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

