Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಧ್ಯಾತ್ಮದಿಂದ ನೆಮ್ಮದಿ ಕಾಣಲು ಸಾಧ್ಯ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಆಧ್ಯಾತ್ಮದಿಂದ ನೆಮ್ಮದಿ ಕಾಣಲು ಸಾಧ್ಯ :ಶಾಸಕ ರಾಜುಗೌಡ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಪತ್ರಕರ್ತ ಬಸವರಾಜ ನಂದಿಹಾಳ ಸೇರಿದಂತೆ ವಿವಿಧ ಕ್ಷೇತ್ರದ ಮಹನೀಯರಿಗೆ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ಪ್ರದಾನ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಇಂದಿನ ಆಧುನಿಕ ಜಗತ್ತಿನಲ್ಲಿ ಎಲ್ಲ ಸೌಕರ್ಯಗಳಿದ್ದರೂ ಜನರಲ್ಲಿ ನೆಮ್ಮದಿ ಕಾಣುತ್ತಿಲ್ಲ. ಜೀವನದಲ್ಲಿ ಆಧ್ಯಾತ್ಮಿಕತೆಯಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಅಭಿಪ್ರಾಯ ಪಟ್ಟರು.
ತಾಲೂಕಿನ ಶರಣಕ್ಷೇತ್ರ ವಡವಡಗಿಯ ನಂದಿಮಠದ ಗುರುವೀರಸಿದ್ಧ ಶಿವಯೋಗಿಗಳ ೭೫ನೇ ಜಾತ್ರಾಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಗಳ ತೃತೀಯ ಪುಣ್ಯಾರಾಧನೆಯಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಶಿವಾನುಭವ ಚಿಂತನ ಹಾಗೂ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಶ್ಚಾತ್ಯದೇಶಗಳಲ್ಲಿ ಮಠ-ಮಾನ್ಯಗಳನ್ನು ನಾವು ಕಾಣುವುದಿಲ್ಲ. ಭಾರತ ದೇಶದಲ್ಲಿ ಮಾತ್ರ ಮಠ-ಮಾನ್ಯಗಳನ್ನು ಕಾಣುತ್ತೇವೆ. ಮಠ-ಮಾನ್ಯಗಳು ಆಧ್ಯಾತ್ಮ ಶಿಕ್ಷಣ ಜನರಿಗೆ ಮುಟ್ಟಿಸುವ ಕಾರ್ಯ ಮಾಡುವದರಿಂದ ನೆಮ್ಮದಿ ಸಿಗುತ್ತಿದೆ. ಅನೇಕ ಮಠಗಳಿಂದ ಜನರ ಸಮಸ್ಯೆಗಳಿಗೆ ಪರಿಹಾರ ಸಹ ಸಿಗುವದನ್ನು ಕಾಣುತ್ತೇವೆ. ಇಲ್ಲಿನ ನಂದಿಮಠವು ಭಕ್ತರಿಗೆ ಸಾಕಷ್ಟು ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಮೂಲಕ ಈ ಭಾಗದಲ್ಲಿ ಶ್ರೀಮಠವು ಭಕ್ತರ ಪ್ರೀತಿ ಗಳಿಸಿದೆ. ಶ್ರೀಮಠದ ಪೀಠಾಧಿಪತಿಗಳು ಸಹ ಭಕ್ತರನ್ನು ಪ್ರೇಮದಿಂದ ಕಾಣುವ ಮೂಲಕ ಅವರ ಜೀವನಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ಜಾತ್ರಾಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಂದಿಸಿರಿ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ವಿವಿಧ ಕ್ಷೇತ್ರದಲ್ಲಿ ಗುರುತರ ಸೇವೆ ಮಾಡುವವರಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವು ಬಹುಮುಖ್ಯವಾಗಿದೆ. ಇಂದು ಸರಿಯಾದ ಸಂಸ್ಕಾರ ಸಿಗದೇ ಇರುವದರಿಂದಾಗಿ ಜನರ ಬಾಂಧವ್ಯ ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ. ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಶಿಕ್ಷಣ ನೀಡುವದರೊಂದಿಗೆ ಉತ್ತಮ ಸಂಸ್ಕಾರ ಸಿಗುವಂತೆ ಮಾಡುವದು ಇಂದು ತುಂಬಾ ಅಗತ್ಯವಿದೆ. ಈ ದಿಶೆಯತ್ತ ಪಾಲಕರು ಗಮನ ಹರಿಸಬೇಕೆಂದರು.
ನಂದಿಸಿರಿ ಪ್ರಶಸ್ತಿ ಸ್ವೀಕರಿಸಿದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ ಎನ್.ಎಂ.ಬಿರಾದಾರ ಮಾತನಾಡಿ, ಪಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡುವ ಕಡೆಗೆ ಗಮನ ಹರಿಸಬೇಕು. ಜೀವನದಲ್ಲಿ ಅಂಕ ಮುಖ್ಯವಾಗದೇ ಒಳ್ಳೆಯ ಶಿಕ್ಷಣ ಮುಖ್ಯವಾಗಬೇಕಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ತಾನಾಗಿಯೇ ಅವರು ಉತ್ತಮ ನಾಗರಿಕರಾಗಿ ಏನಾದರೂ ಸಾಧನೆ ಮಾಡುತ್ತಾರೆ. ಮಕ್ಕಳು ಒಂದು ವೇಳೆ ಮೊಬೈಲ್ ಹಿಡಿಯುತ್ತಿದ್ದರೆ ಮುಲಾಜಿಲ್ಲದೇ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಅದನ್ನು ಬಿಡಿಸುವ ಪ್ರಯತ್ನ ಪಾಲಕರು ಮಾಡಬೇಕು.ಮಕ್ಕಳಿಗಿಂತ ಯಾವುದು ದೊಡ್ಡದಲ್ಲ. ಅವರನ್ನು ಸತ್ಪ್ರಜೆ ಮಾಡಲು ಪಾಲಕರು ಮಾಡಬೇಕೆಂದು ವಿನಂತಿಸಿದ ಅವರು, ನಾನು ಇದುವರೆಗೂ ನನ್ನ ಅಕಾಡೆಮಿಯಿಂದ ತರಬೇತಿ ಪಡೆದ ೨೬ ಸಾವಿರ ಜನರಿಗೆ ಉದ್ಯೋಗ ಲಭಿಸಿದೆ. ಇಲ್ಲಿನ ಶ್ರೀಮಠದ ಶ್ರೀಗಳು ಸಹ ನೊಂದ ಭಕ್ತರಿಗೆ ತಮ್ಮ ಭವಿಷ್ಯವಾಣಿಯಿಂದ ಸೂಕ್ತವಾದ ಮಾರ್ಗದರ್ಶನ ನೀಡುತ್ತಿದ್ದಾರೆ. ಜೋತಿಷ್ಯವು ಒಂದು ವಿeನವಾಗಿದೆ. ಇದರ ಅಧ್ಯಯನವು ನಮಗೆ ತಿಳುವಳಿಕೆ ನೀಡುತ್ತದೆ. ನನ್ನ ಜೀವನದಲ್ಲಿಯೂ ಶ್ರೀಮಠದ ಲಿಂ. ಮಲ್ಲಿಕಾರ್ಜುನ ಸ್ವಾಮೀಜಿಗಳು ನನ್ನ ಕೈ ನೋಡಿ ಜೋತಿಷ್ಯ ಹೇಳಿದಂತೆ ಆಗಿರುವದನ್ನು ಸ್ಮರಿಸಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಶ್ರೀಮಠದ ವೀರಸಿದ್ದ ಸ್ವಾಮೀಜಿ ಮಾತನಾಡಿ, ಜೀವನದಲ್ಲಿ ದಾನ-ಧರ್ಮ ಗುಣವನ್ನು ಮೈಗೂಡಿಸಿಕೊಂಡರೆ ಅವರ ಜೀವನ ಉತ್ತಮವಾಗಿರುತ್ತದೆ. ನಮ್ಮ ಶ್ರೀಮಠದ ಗುರುಗಳ ಶಕ್ತಿ ದೊಡ್ಡದು. ಭಕ್ತರಿಗೆ ಶ್ರೀಮಠದ ಆಸ್ತಿಯಾಗಿದ್ದಾರೆ. ಇದರಿಂದಾಗಿ ಭಕ್ತರಿಂದ ಮಠವು ಬೆಳೆಯುತ್ತಿದೆ. ಶ್ರೀಮಠಕ್ಕೆ ಅನೇಕ ಭಕ್ತರು ಸಾಕಷ್ಟು ಸಹಾಯ-ಸಹಕಾರ ನೀಡುತ್ತಾ ಬರುತ್ತಿದ್ದಾರೆ. ಅವರ ಸೇವೆ ಸ್ಮರಣಾರ್ಹ ಎಂದರು.
ವಡವಡಗಿ ಗ್ರಾಮಕ್ಕೆ ಬರುವ ರಸ್ತೆ ದುರಸ್ತಿಗಾಗಿ ಶಾಸಕರ ಗಮನಕ್ಕೆ ತಂದಾಗ ಅವರು ಅದನ್ನು ಡಾಂಬರೀಕರಣ ಮಾಡುವ ಮೂಲಕ ಜನರಿಗೆ ತುಂಬಾ ಅನುಕೂಲ ಮಾಡಿಕೊಟ್ಟಿದ್ದಾರೆ. ಗ್ರಾಮದಲ್ಲಿ ಸಿಸಿ ರಸ್ತೆ ಸಹ ಮಾಡುವ ಭರವಸೆ ಶಾಸಕರು ಭರವಸೆ ನೀಡಿದ್ದಾರೆ. ದೇವರಹಿಪ್ಪರಗಿ ಕ್ಷೇತ್ರದಲ್ಲಿ ಶಾಸಕ ರಾಜುಗೌಡ ಪಾಟೀಲ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ನಂದಿಸಿರಿ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಡಾ.ಸಿದ್ದಪ್ಪ ಬಿದರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಂತಪ್ಪ ಶಿರಶ್ಯಾಡ(ಕೃಷಿ), ಎನ್.ಎಂ.ಬಿರಾದಾರ(ಶಿಕ್ಷಣ), ಐ.ಸಿ.ಪಟ್ಟಣಶೆಟ್ಟಿ(ಸಮಾಜಸೇವೆ), ಮಹಾದೇವ ಬಸರಕೋಡ (ಸಾಹಿತ್ಯ), ಮೌಲಾಸಾಬ ಜಾಗೀರದಾರ(ಕಲಾ), ಡಾ.ಸಿದ್ದಪ್ಪ ಬಿದರಿ(ಜಾನಪದ), ಬಸವರಾಜ ನಂದಿಹಾಳ(ಪತ್ರಿಕಾಕ್ಷೇತ್ರ) ಇವರಿಗೆ ಶ್ರೀಮಠದಿಂದ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾನಿಧ್ಯವನ್ನು ಕೊಲ್ಹಾರದ ಕಲ್ಲಿನಾಥದೇವರು, ದೇವರಹಿಪ್ಪರಗಿಯ ಮಡಿವಾಳೇಶ್ವರ ಸ್ವಾಮೀಜಿ, ಚಡಚಣದ ಷಡಕ್ಷರ ಸ್ವಾಮೀಜಿ, ಸುರಪುರದ ಪ್ರಭುಲಿಂಗ ಸ್ವಾಮೀಜಿ, ಹಳೆಪೇಟೆಯ ಶ್ರೀಗಳು, ಸಂಗಮನಾಥ ದೇವರು, ನಿರಂಜನದೇವರು ವಹಿಸಿದ್ದರು. ಮುಖಂಡರಾದ ಬಸವರಾಜ ಡೆಂಗಿ, ಗುರನಗೌಡ ಪಾಟೀಲ ಇತರರು ಇದ್ದರು. ಮಂಜುನಾಥ ಬಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ವೈ.ಎಸ್.ಗಂಗಶೆಟ್ಟಿ ನಿರೂಪಿಸಿದರು. ಶೇಖರಗೌಡ ಉದಾನಗೌಡರ ವಂದಿಸಿದರು. ಇದೇ ಸಂದರ್ಭದಲ್ಲಿ ಇಟಗಾ ಗ್ರಾಮದ ದತ್ತಪ್ಪ ಪೂಜಾರಿ, ಭೀಮರಾಯ ಪೂಜಾರಿ ಕುಟುಂಬಸ್ಥರು ಶ್ರೀಮಠದ ವೀರಸಿದ್ಧ ಸ್ವಾಮೀಜಿಗಳಿಗೆ ಬೆಳ್ಳಿ ಕಿರೀಟ ಧಾರಣೆ ಮಾಡಿದರು. ಬಸವರಾಜ ಗಂಗಶೆಟ್ಟಿ, ಸಿದ್ದನಗೌಡ ಪಾಟೀಲ, ದೇವಾನಂದ ಹೂಗಾರ ಸೇರಿದಂತೆ ವಿವಿಧ ಭಕ್ತರಿಂದ ಶ್ರೀಗಳಿಗೆ ತುಲಾಭಾರ ಸೇವೆ ನೆರವೇರಿತು. ನಂತರ ಜರುಗಿದ ಜಾನಪದ ಹಬ್ಬ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.