ರಸ್ತೆ ಕಾಮಗಾರಿಗೆ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಭರವಸೆ
ಉದಯರಶ್ಮಿ ದಿನಪತ್ರಿಕೆ
ಮೋರಟಗಿ: ಸಿಸಿ ರಸ್ತೆ,, ಡಾಂಬರೀಕರಣ, ಮಠ ಮಂದಿರಗಳ ಜೀರ್ಣೋದ್ಧಾರ, ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದರ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಸಮೀಪದ ಗಬಸಾವಳಗಿ ಗ್ರಾಮದ ರಾಷ್ಟ್ರಿಯ ಹೆದ್ದಾರಿಯಿಂದ ಭಂಟನೂರ ಮಾರ್ಗವಾಗಿ ಗೊರವಗುಂಡಗಿ ಗ್ರಾಮದ ವರೆಗೆ ೨೦೨೪-೨೫ನೇ ಸಾಲಿನ ೫೦೫೪-ಅಪೆಂಡೆಕ್ಸ್ -ಇ ಯೋಜನೆಯಡಿಯಲ್ಲಿ ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ಕುಟುಂಬದವರ ಕಷ್ಟಕ್ಕೆ ಮಿಡಿದಿದೆ ಈ ಉಚಿತ ಯೋಜನೆಗಳ ಜೊತೆಗೆನೆ ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಅನುದಾನವನ್ನು ಕೂಡಾ ನೀಡಿದ್ದಾರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೂ ಹೆಚ್ಚಿನ ಆದ್ಯತೆ ನೀಡಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸುತ್ತೇನೆ ಸರಕಾರ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು ಸಾರ್ವಜನಿಕರು ಗುತ್ತಿಗೆದಾರರ ಜೊತೆಗೆ ಸಹಕಾರ ನೀಡಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿಕೊಳ್ಳಬೇಕು ಎಂದರು.
ಭೂಮಿಪೂಜಾ ಸಮಾರಂಭದಲ್ಲಿ ಮಾಜಿ ಜಿಪಂ ಸದಸ್ಯರುಗಳಾದ ಎನ್ ಆರ್ ತಿವಾರಿ, ಮಹಾಂತಗೌಡ ಪಾಟೀಲ್, ಎನ್ ಎನ್ ಪಾಟೀಲ್, ಸಲೀಮ್ ಕಣ್ಣಿ, ನಿಂಗಪ್ಪ ಬಿರಾದಾರ್, ಬಂದೇನವಾಜ ಕಣ್ಣಿ, ಸೇರಿದಂತೆ ಕೆರೂರ ಭಂಟನೂರ, ಕೆರೂರ್, ಗಬಸಾವಳಗಿ ಕಾರ್ಯಕರ್ತರು ಇದ್ದರು.
ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಗಬಸಾವಳಗಿ ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ೨೫ ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಮಿಪೂಜೆ ನೆರವೇರಿದರು. ಗ್ರಾಮದ ೫ ಪ್ರಮುಖ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರಿಗೆ ಸಂಚರಿಸಲು ಅನುಕೂಲಾಗುವ ನಿಟ್ಟಿನಲ್ಲಿ ಸುಸಜ್ಜಿತ ಕಾಮಗಾರಿ ಮಾಡಬೇಕು ಎಂದು ಶಾಸಕ ಮನಗೂಳಿ ಗುತ್ತಿಗೆದಾರರಿಗೆ ಸೂಚಿಸಿದರು.

