Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್ ಸಹಾಯವಾಣಿ-೧೯೩೦ ಹಾಗೂ ವೆಬ್ ಬಾಟ್ ಉನ್ನತೀಕರಣ
(ರಾಜ್ಯ ) ಜಿಲ್ಲೆ

ಪೊಲೀಸ್ ಸಹಾಯವಾಣಿ-೧೯೩೦ ಹಾಗೂ ವೆಬ್ ಬಾಟ್ ಉನ್ನತೀಕರಣ

By Updated:No Comments4 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ | ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ ಅಲೋಕ್ ಮೋಹನ್ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-೧೯೩೦ ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು.
ಮಂಗಳವಾರ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-೧೯೩೦ ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ೧೯೩೦ ಸಹಾಯವಾಣಿಯಲ್ಲಿ ಸ್ವೀಕರಿಸಿದ ಕರೆಗಳ ಸಂಖ್ಯೆ ೨೦೨೨ ರಲ್ಲಿ ೧.೩೦ ಲಕ್ಷ ಇದ್ದು, ನಂತರ ೨೦೨೪ ರಲ್ಲಿ ೮.೨೬ ಲಕ್ಷಕ್ಕೆ ಮತ್ತು ೨೦೨೫ ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) ೪.೩೪ ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಆನ್ಲೈನ್ ಹಣಕಾಸು ವಂಚನೆಗಳಿಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಸಾರ್ವಜನಿಕರು ದೂರು ದಾಖಲಿಸಲು ಅನುವಾಗುವಂತೆ ಸೈಬರ್ ಅಪರಾಧ ಸಹಾಯವಾಣಿ-೧೯೩೦ ಹಾಗೂ ವೆಬ್ ಬಾಟ್ನ್ನು ಉನ್ನತೀಕರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ (Emergency Response Support System) ಸಾರ್ವಜನಿಕ ಸುರಕ್ಷತಾ ಪ್ರತ್ಯುತ್ತರ ಕೇಂದ್ರವನ್ನು (Pubಟiಛಿ Sಚಿಜಿeಣಥಿ ಂಟಿsತಿeಡಿiಟಿg Poiಟಿಣ) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಪರ್ಕ, ಸಾರಿಗೆ ಮತ್ತು ಆಧುನೀಕರಣರವರ ಕಛೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ಸದರಿ ೧೯೩೦ ಸಹಾಯವಾಣಿ ಕೇಂದ್ರದಲ್ಲಿ ಆನ್ಲೈನ್ ಹಣಕಾಸು ವಂಚನೆ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು National Cybercrime Reporting Portal (NCRP)ಮೂಲಕ ದಾಖಲಿಸಲಾಗುತ್ತಿದೆ.
ಈ ರೀತಿಯಲ್ಲಿ ದೂರುದಾರರ ಕರೆಗಳ ಸಂಖ್ಯೆಯು ಏರಿಕೆಯಾಗುತ್ತಿರುವುದರಿಂದ, ಹೆಚ್ಚು ಸಂಖ್ಯೆಯ ಕರೆಗಳು ಕಡಿತಗೊಂಡಿರುವುದು (ಅಚಿಟಟ ಆಡಿoಠಿs) ಕಂಡುಬಂದಿರುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಕರೆಗಳು ತಮ್ಮ ದೂರಿನ ಸ್ಥಿತಿ ವಿಚಾರಣೆ (Sಣಚಿಣus eಟಿquiಡಿಥಿ) ಮತ್ತು ಸೈಬರ್ ಅಪರಾಧದ ಕುಂದುಕೊರತೆಗಳಿಗೆ ಸಂಬಂಧಿಸಿದ ಕರೆಗಳಾಗಿದ್ದು, ಎಲ್ಲಾ ಕರೆ ಸ್ವೀಕರಿಸುವ ಸಿಬ್ಬಂದಿಗಳು ಕಾರ್ಯನಿರತರಾಗಿರುತ್ತಿದ್ದ ಕಾರಣ ೧೯೩೦-ಸಹಾಯವಾಣಿಗೆ ಹೊಸ ದೂರುಗಳನ್ನು ದಾಖಲಿಸುವವರು ಶೀಘ್ರವಾಗಿ ಸಂಪರ್ಕಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ದೂರುದಾರರಿಗೆ ೧೯೩೦-ಸಹಾಯವಾಣಿಯ ಸಂಪರ್ಕ ಸಿಗದೆ ಗೋಲ್ಡನ್ ಅವರ್ ನಲ್ಲಿ ದೂರು ದಾಖಲಿಸಲು ಕಷ್ಟಕರವಾಗುತ್ತಿತ್ತು. ಈ ದೂರುದಾರರಲ್ಲಿ ಹಿರಿಯ ನಾಗರೀಕರು ಸಹ ಕರೆ ಮಾಡುತ್ತಿದ್ದು ೧೯೩೦ ಸಹಾಯವಾಣಿಗೆ ಕರೆ ಮಾಡಿದ ಸಮಯದಲ್ಲಿ ಸಂಪರ್ಕ ಸಿಗದೇ ಆಸಹಾಯಕರಾಗಿದ್ದರು.
ಈ ಸಮಸ್ಯೆಯಿಂದ ಹಣಕಾಸು ವಂಚನೆಗೊಳಗಾದ ದೂರುದಾರರ ಹಣವನ್ನು ಗೋಲ್ಡನ್ ಅವರ್ ನಲ್ಲಿ ಸಂಬಂಧಿಸಿದ ಬ್ಯಾಂಕ್ಗಳಲ್ಲಿ ತಡೆಹಿಡಿಯುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು. ಇದರಿಂದಾಗಿ ಸದರಿ ಹಣ ವಂಚಕರ ಖಾತೆಗೆ ವರ್ಗಾವಣೆಯಾಗಲು ಸುಲಭವಾಗುತ್ತಿತ್ತು.
ಈ ಎಲ್ಲಾ ಸಮಸ್ಯೆಗಳನ್ನು ಮನಗಂಡ ಇಲಾಖೆಯು, ಸಮಸ್ಯೆಯನ್ನು ಪರಿಹರಿಸಲು ದೂರುದಾರರ ಕರೆಗಳನ್ನು ಹಣಕಾಸು ಸಂಬಂಧಿತ ದೂರುಗಳು, ಹಣಕಾಸೇತರ ಸಂಬಂಧಿತ ದೂರುಗಳು (ಉದಾ.: WhatsApp/Facebookಖಾತೆಯ ಹ್ಯಾಕ್ಗಳು ಅಥವಾImpersonation), ದೂರಿನ ಸ್ಥಿತಿ ವಿಚಾರಣೆಗಳು ಮತ್ತು ಸೈಬರ್ ಅಪರಾಧ ಸಂಬಂಧಿತ ಕುಂದುಕೊರತೆ ಕರೆಗಳಾಗಿ ಐವಿಆರ್ ವ್ಯವಸ್ಥೆಯ ಮೂಲಕ ವರ್ಗೀಕರಿಸಲಾಗಿದೆ.
ಇದರಿಂದಾಗಿ ಹೊಸ ದೂರನ್ನು ಸಕಾಲದಲ್ಲಿ ದಾಖಲಿಸುವವರಿಗೆ ಆದ್ಯತೆ ನೀಡಲಾಗಿದೆ ಮತ್ತು ಗಿoiಛಿe ಉuiಜeಜ Webಃಔಖಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ದೂರುದಾರರು ವೆಬ್ಬಾಟ್ ಮೂಲಕ ಮಾಹಿತಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಎಸ್.ಎಂ.ಎಸ್.ಮೂಲಕ ವೆಬ್ಬಾಟ್ ಲಿಂಕ್ ಅನ್ನು ಕಳುಹಿಸಲಾಗುವುದು.
ನಂತರ ಈ ಸಹಾಯವಾಣಿಯ ಸಿಬ್ಬಂದಿಯ ಮೂಲಕ ಸದರಿ ಮಾಹಿತಿಯನ್ನು ಎನ್.ಸಿ.ಆರ್.ಪಿ ಯಲ್ಲಿ ದಾಖಲಿಸಲಾಗುವುದು. ಇದು ಸಾರ್ವಜನಿಕರಿಗೆ ೧೯೩೦ ಸಹಾಯವಾಣಿಯಲ್ಲಿ ದೂರು ಸಲ್ಲಿಸಲು ಹಾಗೂ ಕಾಲ್ ಡ್ರಾಪ್ಗಳನ್ನು ಸಹ ತಡೆಯಲು ಸಹಾಯವಾಗುತ್ತದೆ.
೧೯೩೦ ಸಹಾಯವಾಣಿಯ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತವಾಗಿದ್ದ ಸಮಯದಲ್ಲಿ ದೂರುದಾರರು ಸ್ವಯಿಚ್ಚೆಯಿಂದ ಕರೆ ಕಡಿತಗೊಳಿಸಿದ ಸಮಯದಲ್ಲೂ ಸಹ ಎಸ್.ಎಂ.ಎಸ್. ಮುಖಾಂತರ ಈ ವೆಬ್ಬಾಟ್ ಲಿಂಕ್ ಅನ್ನು ಸದರಿ ದೂರುದಾರರಿಗೆ ಕಳುಹಿಸಲಾಗುವುದು.
೨೦೨೨ ರಲ್ಲಿ ೨೦,೮೯೪ ದೂರುಗಳನ್ನು ಸೈಬರ್ ಕ್ರೈಂ ಸಹಾಯವಾಣಿ-೧೯೩೦ ಮೂಲಕ ಓಚಿಣioಟಿಚಿಟ ಅಥಿbeಡಿ ಅಡಿime ಖeಠಿoಡಿಣiಟಿg Poಡಿಣಚಿಟ (ಓಅಖP) ನಲ್ಲಿ ದಾಖಲಿಸಲಾಗಿದ್ದು, ೨೦೨೪ ರಲ್ಲಿ ೯೭,೯೨೯ ದೂರುಗಳನ್ನು ದಾಖಲಿಸಲಾಗಿತ್ತು. ೨೦೨೨ನೇ ಇಸವಿಯಲ್ಲಿ ವರದಿಯಾದ ಒಟ್ಟು ವಂಚನೆಯ ಮೊತ್ತವು ರೂ.೧೧೩ ಕೋಟಿ ರೂಪಾಯಿಗಳಾಗಿದ್ದು, ನಂತರ ೨೦೨೪ ರಲ್ಲಿ ರೂ.೨,೩೯೬ ಕೋಟಿಗಳಿಗೆ ಏರಿಕೆಯಾಗಿರುತ್ತದೆ. ಈ ಸಂಬಂಧ ಸೈಬರ್ ಕ್ರೈಂ ಸಹಾಯವಾಣಿ-೧೯೩೦ ರ ಮೂಲಕ ಬ್ಯಾಂಕ್ಗಳಲ್ಲಿ ತಡೆಹಿಡಿಯಲಾದ ಮೊತ್ತವು ೨೦೨೨ ರಲ್ಲಿ ೮ ಕೋಟಿಗಳಾಗಿದ್ದು, ನಂತರ ೨೦೨೪ ರಲ್ಲಿ ರೂ.೨೨೬ ಕೋಟಿ ವಂಚನೆಯ ಹಣವನ್ನು ತಡೆಹಿಡಿಯಲಾಗಿದೆ. ಸದರಿ ಮೊತ್ತವು ವಂಚನೆಯ ಮೊತ್ತದ ಶೇಕಡಾ ೯ ರಷ್ಟು ಆಗಿರುತ್ತದೆ.
ಈ ಹೊಸ ವ್ಯವಸ್ಥೆಯ ಪರಿಣಾಮದಿಂದಾಗಿ ೨೦೨೫ ರ ಮೊದಲ ತ್ರೈಮಾಸಿಕದಲ್ಲಿ ೩೮,೦೦೦ ಪ್ರಕರಣಗಳನ್ನು ಸೈಬರ್ ಕ್ರೈಂ ಸಹಾಯವಾಣಿ-೧೯೩೦ ಮೂಲಕ ದಾಖಲಿಸಲಾಗಿರುತ್ತದೆ. ಪ್ರಸ್ತುತ ವರ್ಷದಲ್ಲಿ ಮಾರ್ಚ್ ೨೦೨೫ರ ಅಂತ್ಯಕ್ಕೆ ವಂಚನೆ ಹಣದ ಶೇಕಡಾ ೧೬ ರಷ್ಟು ಮೊತ್ತವನ್ನು ಬ್ಯಾಂಕ್ಗಳಲ್ಲಿಯೇ ತಡೆಯುವಲ್ಲಿ ಶ್ರಮವಹಿಸಿರುತ್ತೇವೆ ಎಂದು ಹೇಳಿದರು.
ಸೈಬರ್ ಕ್ರೈಂ ಸಹಾಯವಾಣಿ-೧೯೩೦ ವನ್ನು ಮಾನ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಎಸ್. ಮುರುಗನ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸುಧಾರಿತ ಸಾಫ್ಟ್ವೇರ್ ಹಾಗೂ ಮೂಲ ಸೌಕರ್ಯದೊಂದಿಗೆ ಅಂದಾಜು ವೆಚ್ಚ ೦೧ ಕೋಟಿ ರೂಗಳಲ್ಲಿ ಉನ್ನತೀಕರಿಸಲಾಗಿದ್ದು, ಇದರಿಂದ ಹಣಕಾಸು ವಂಚನೆಗೊಳಗಾದ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವುದಾಗಿದೆ.
೧೯೩೦ ಸಹಾಯವಾಣಿಯು ಸೈಬರ್ ಅಪರಾಧಗಳಿಗೆ ಒಳಗಾದ ನಾಗರೀಕರಿಗೆ ದಿನದ ೨೪ ಗಂಟೆಗಳ ಕಾಲವೂ ಉತ್ತಮ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ, ಆಡಳಿತ ವಿಭಾಗದ ಎಡಿಜಿಪಿ ಸೌಮೆಂದು ಮುಖರ್ಜಿ, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಹೆಚ್ಚುವರಿ ಮಹಾ ನಿರ್ದೇಶಕರಾದ ನಂಜುಂಡಸ್ವಾಮಿ ಹಾಗೂ ಡಿಜಿಪಿ ಶ್ರೀಮತಿ ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್‌ಬಾಟ್ ವ್ಯವಸ್ಥೆ ಜೊತೆಗೆ ಹೊಸ ಸೌಲಭ್ಯಗಳ ವಿವರ

೧೯೩೦ ಸಹಾಯವಾಣಿಯಲ್ಲಿ ಈ ಹಿಂದಿನ ದೂರವಾಣಿ ಮೂಲಸೌಕರ್ಯವನ್ನು ಬದಲಾಯಿಸಿ SIP ಲೈನ್ಗಳಿಗೆ ಉನ್ನತೀಕರಿಸಲಾಗಿದೆ. ಇದು ಹೆಚ್ಚುತ್ತಿರುವ ದೂರು ಕರೆಗಳ ಪ್ರಮಾಣವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.
ಭಾಷಾ ಆಯ್ಕೆ Iಗಿಖ (Interactive Voice Response) ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಈ ವ್ಯವಸ್ಥೆಯು ವಂಚನೆಗೊಳಗಾದ ದೂರುದಾರರ ಸಂವಹನಕ್ಕಾಗಿ ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಭಾಷೆಯನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ.
ವಂಚನೆಗೊಳಗಾದ ದೂರುದಾರರು ೧೯೩೦ ಸಹಾಯವಾಣಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸುವ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತರಾಗಿದ್ದರೆ, ಈ ಸಮಯದಲ್ಲಿ ಐವಿಆರ್ ಮೂಲಕ ದೂರುದಾರರ ಕಿueue Posiಣioಟಿ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.
ಹಣಕಾಸೇತರ ಸಂಬಂಧಿತ ದೂರುಗಳಲ್ಲಿ (ಉದಾ.:WhatsApp/Facebook ಖಾತೆಯ ಹ್ಯಾಕ್ಗಳು ಅಥವಾImpersonation) ಸಮಸ್ಯೆಯನ್ನು ಬಗೆಹರಿಸುವ ಬಗೆಗಿನ ಮಾಹಿತಿಯ ಲಿಂಕ್ ಅನ್ನು ಎಸ್ಎಂಎಸ್ ಮುಖಾಂತರ ದೂರುದಾರರಿಗೆ ನೀಡಲಾಗುವುದು.
ವಂಚನೆಗೊಳಗಾದವರು ಮತ್ತು ವಂಚಕರ ಬಗೆಗಿನ ಮಾಹಿತಿಯನ್ನು ಸಹ ಸಂಗ್ರಹಿಸಿ, ಶೇಖರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಮಾಹಿತಿಯಿಂದ ತನಿಖಾಧಿಕಾರಿಗಳು ಆರೋಪಿಯ ಬಗ್ಗೆ ಹಾಗೂ ವಂಚನೆಗಳ ಬಗ್ಗೆ ವಿಶ್ಲೇಷಿತ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.