ವಿಜಯಪುರ: ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಸಂಬಂಧಿಸಿದ ಇಲಾಖೆಗಳು ಸರ್ವ ಸನ್ನದ್ಧವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಇಂದು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ವಿಜಯಪುರ ಹಾಗೂ ಕಂದಾಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಪತ್ತು ನಿರ್ವಹಣಾ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಮುಂಚಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿಯ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ವಿಕೋಪಗಳ ಕುರಿತು ಸೂಕ್ತ ಅಧ್ಯಯನ ನಡೆಸಿ, ತುರ್ತು ಪರಿಹಾರೋಪಾಯಳನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂಬುದರ ಬಗ್ಗೆ ನೀಲನಕ್ಷೆ ಸಿದ್ಧವಾಗಿಟ್ಟುಕೊಂಡಿರಬೇಕು. ಸ್ದೇ ಜೀವ-ಜಾನುವಾರುಗಳ ಹಾನಿ ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸಂಯೋಜಕರಾದ ಡಾ.ಪರಮೇಶ ಜಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಅಶೋಕ ಕಲಘಟಗಿ, ಬೋಧಕ ವಿ.ವಿ.ಕಮಲಾಪುರ, ಜಿಲ್ಲಾ ವಿಪತ್ತು ನಿರ್ವಹನಾ ತಜ್ಞ ರಾಜೇಶ ಜೈನಾಪುರ, ಪುರಸಭೆ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀಮತಿ ಪಿ.ಬಿ.ದಿವಾನಜಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

